ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದ್ವಿತೀಯ ಪುಣ್ಯತಿಥಿ ಆರಾಧನಾ ಮಹೋತ್ಸವ
Posted On December 26, 2017
ಮಂಗಳೂರು : ಶ್ರೀ ಕಾಶೀಮಠ ಸಂಸ್ಥಾನದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದ್ವಿತೀಯ ಪುಣ್ಯತಿಥಿ ಆರಾಧನಾ ಮಹೋತ್ಸವವು ಹರಿದ್ವಾರದ ಶ್ರೀವ್ಯಾಸ ಮಂದಿರದ ಆವರಣದಲ್ಲಿರುವ ವೃಂದಾವನದಲ್ಲಿ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಕರಕಮಲಗಳಿಂದ ನೆರವೇರಿತು.
ದೇಶ ವಿದೇಶಗಳಿಂದ ಆಗಮಿಸಿದ ನೂರಾರು ಭಗವತ್ ಭಕ್ತರ ಉಪಸ್ಥಿತಿಯಲ್ಲಿ ಪ್ರಾತ:ಕಾಲ ಶ್ರೀಸಂಸ್ಥಾನದ ಆರಾಧ್ಯದೇವರಾದ ವ್ಯಾಸರಘುಪತಿ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ,ಗಂಗಾಭಿಷೇಕ,ಪವಮಾನ ಅಭಿಷೇಕಗಳು ನೆರವೇರಿದವು.ಬಳಿಕ ವೃಂದಾವನದಲ್ಲಿ ಪವಮಾನ ಅಭಿಷೇಕ ನಡೆಯಿತು.ಸಾಯಂಕಾಲ ಶ್ರೀಗುರುಗಳವರ ಗುರುಗುಣಗಾನ ನೆರವೇರಿತು.ಕೊಚ್ಚಿನ್,ಮುಂಬಯಿ,ಮಂಗಳೂರು,ಕಾಂಞಗಾಡ್,ಬೆಂಗಳೂರು ಹಾಗೂ ವಿವಿಧ ಮಠ ಮಂದಿರಗಳ ಶಾಖಾ ಮಠದ ಮೊಕ್ತೇಸರರಿಗೆ,ಪದಾಧಿಕಾರಿಗಳಿಗೆ ಪ್ರಸಾದ ನೀಡಲಾಯಿತು.
ಚಿತ್ರ:ಮಂಜು ನೀರೇಶ್ವಾಲ್ಯ
- Advertisement -
Trending Now
ಪ್ರೀತಿ ಅದ್ಭುತವು ಹೌದು ಭಯಾನಕವು ಹೌದು!
April 23, 2024
ನಕ್ಸಲರನ್ನು ಬೆಂಬಲಿಸಿ ಮಾತನಾಡುವ ಪರಿಸ್ಥಿತಿ ಬಂತಲ್ಲ ಇವರಿಗೆ!
April 19, 2024
Leave A Reply