• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಾಂಗ್ಲಾ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳು ಹಿಂದೂ ಯುವತಿ ಅನುಮಾನಾಸ್ಪದ ಸಾವು

TNN Correspondent Posted On February 13, 2018
0


0
Shares
  • Share On Facebook
  • Tweet It

ಢಾಕಾ: ಬಾಂಗ್ಲಾದೇಶದ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳುನಾಡಿನ ಹಿಂದೂ ಯುವತಿ ಬಾಂಗ್ಲಾದೇಶಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾಳೆ. ಕೇಂದ್ರ ಬಾಂಗ್ಲಾದೇಶದ ಮುನ್ಶಿಗಂಜ್ ಜಿಲ್ಲೆಯ ಲೋಹಗಂಜ್ ಠಾಣಾದ ಹಟ್ ವೋಗ್ಡಿಯಾ ಗ್ರಾಮದಲ್ಲಿ ಮೃತಪಟ್ಟಿದ್ದು, ಹಲವು ಅನುಮಾನಗಳನ್ನು ಮೂಡಿಸಿದೆ. ಈ ಘಟನೆ ಶುಕ್ರವಾರ ನಡೆದಿದೆ. ಯುವತಿ ಭಾರತೀಯ ನಾಗರೀಕತ್ವವವನ್ನು ಹೊಂದಿದ್ದು, ತಮಿಳುನಾಡಿನ ಮೂಲದವಳಾಗಿದ್ದಾಳೆ.

ಯುವತಿ ದೇವಿ (ಫಾತೀಮಾ) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಆದರೆ ಯುವತಿಯ ಅಕ್ಕಪಕ್ಕದವರು ಹೇಳುವ ಪ್ರಕಾರ ವಾಸ್ತವವ ಬೇರೆಯೇ ಇದೆ. ಯುವತಿಯ ಪತಿ ಮಾಧಕ ವ್ಯಸನಿಯಾಗಿದ್ದ, ನಿತ್ಯ ಯುವತಿಗೆ ಕಿರುಕುಳ ನೀಡುತ್ತಿದ್ದ. ಯುವತಿ ಸಾಯುವ ಮುನ್ನಾದಿನವೇ ನೆರೆಹೊರೆಯವರು ಇಬ್ಬರ ಜಗಳವನ್ನು ಕೇಳಿಸಿಕೊಂಡಿದ್ದರು ಎನ್ನಲಾಗಿದೆ.

ಯುವತಿ ಮರಣ ಹೊಂದಿದ ತಕ್ಷಣ ಅವಳ ಅತ್ತೆ ಶವವನ್ನು ಹೂತು ಹಾಕಲು ಸಿದ್ಧತೆ ನಡೆಸಿದ್ದಳು. ಆದರೆ ಅನುಮಾನಸ್ಪದ ಸಾವು ಎಂದು ಅರಿತ ಲೋಹಗಂಜ್ ಠಾಣೆ ಪೊಲೀಸರು ಬಿಕ್ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ ಎಂದು ಢಾಕಾ ಮೂಲದ ಅಂತರ್ಜಾಲ ಪತ್ರಿಕೆ eibela.com ವರದಿ ಮಾಡಿದೆ.

ಕೆಲ ದಿನಗಳ ಹಿಂದೆ ಕೆಲಸ ಅರಸಿ ತಮಿಳುನಾಡಿಗೆ ಬಂದಿದ್ದ ರೀಮು ಎಂಬಾತ ಹಿಂದೂ ಯುವತಿಯನ್ನು ಪ್ರೀತಿಸಿ, ಮತಾಂತರಿಸಿ ಮದುವೆಯಾಗಿ. ದೇವಿಯ ಹೆಸರನ್ನು ಫಾತೀಮಾ ಎಂದು ಬದಲಾಯಿಸಿದ್ದ. ಅಲ್ಲದೇ ವಿಸಾ ಇಲ್ಲದೇ ಬಾಂಗ್ಲಾದೇಶಕ್ಕೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಈ ಕುರಿತು ತನಿಖೆ ನಡೆಸುತ್ತಿರುವ ಲೋಹಗಂಜ್ ಪೊಲೀಸ್ ಠಾಣೆ ಎಂಡಿ ಅನಿಚುರ್ ರೆಹೆಮಾನ್ ‘ತಮಿಳುನಾಡಿನಲ್ಲಿರುವ ಯುವತಿಯ ಸಂಬಂಧಿಕರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅವರಿಗೆ ಮಾಹಿತಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search