• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಾಂಗ್ಲಾ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳು ಹಿಂದೂ ಯುವತಿ ಅನುಮಾನಾಸ್ಪದ ಸಾವು

TNN Correspondent Posted On February 13, 2018
0


0
Shares
  • Share On Facebook
  • Tweet It

ಢಾಕಾ: ಬಾಂಗ್ಲಾದೇಶದ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳುನಾಡಿನ ಹಿಂದೂ ಯುವತಿ ಬಾಂಗ್ಲಾದೇಶಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾಳೆ. ಕೇಂದ್ರ ಬಾಂಗ್ಲಾದೇಶದ ಮುನ್ಶಿಗಂಜ್ ಜಿಲ್ಲೆಯ ಲೋಹಗಂಜ್ ಠಾಣಾದ ಹಟ್ ವೋಗ್ಡಿಯಾ ಗ್ರಾಮದಲ್ಲಿ ಮೃತಪಟ್ಟಿದ್ದು, ಹಲವು ಅನುಮಾನಗಳನ್ನು ಮೂಡಿಸಿದೆ. ಈ ಘಟನೆ ಶುಕ್ರವಾರ ನಡೆದಿದೆ. ಯುವತಿ ಭಾರತೀಯ ನಾಗರೀಕತ್ವವವನ್ನು ಹೊಂದಿದ್ದು, ತಮಿಳುನಾಡಿನ ಮೂಲದವಳಾಗಿದ್ದಾಳೆ.

ಯುವತಿ ದೇವಿ (ಫಾತೀಮಾ) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಆದರೆ ಯುವತಿಯ ಅಕ್ಕಪಕ್ಕದವರು ಹೇಳುವ ಪ್ರಕಾರ ವಾಸ್ತವವ ಬೇರೆಯೇ ಇದೆ. ಯುವತಿಯ ಪತಿ ಮಾಧಕ ವ್ಯಸನಿಯಾಗಿದ್ದ, ನಿತ್ಯ ಯುವತಿಗೆ ಕಿರುಕುಳ ನೀಡುತ್ತಿದ್ದ. ಯುವತಿ ಸಾಯುವ ಮುನ್ನಾದಿನವೇ ನೆರೆಹೊರೆಯವರು ಇಬ್ಬರ ಜಗಳವನ್ನು ಕೇಳಿಸಿಕೊಂಡಿದ್ದರು ಎನ್ನಲಾಗಿದೆ.

ಯುವತಿ ಮರಣ ಹೊಂದಿದ ತಕ್ಷಣ ಅವಳ ಅತ್ತೆ ಶವವನ್ನು ಹೂತು ಹಾಕಲು ಸಿದ್ಧತೆ ನಡೆಸಿದ್ದಳು. ಆದರೆ ಅನುಮಾನಸ್ಪದ ಸಾವು ಎಂದು ಅರಿತ ಲೋಹಗಂಜ್ ಠಾಣೆ ಪೊಲೀಸರು ಬಿಕ್ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ ಎಂದು ಢಾಕಾ ಮೂಲದ ಅಂತರ್ಜಾಲ ಪತ್ರಿಕೆ eibela.com ವರದಿ ಮಾಡಿದೆ.

ಕೆಲ ದಿನಗಳ ಹಿಂದೆ ಕೆಲಸ ಅರಸಿ ತಮಿಳುನಾಡಿಗೆ ಬಂದಿದ್ದ ರೀಮು ಎಂಬಾತ ಹಿಂದೂ ಯುವತಿಯನ್ನು ಪ್ರೀತಿಸಿ, ಮತಾಂತರಿಸಿ ಮದುವೆಯಾಗಿ. ದೇವಿಯ ಹೆಸರನ್ನು ಫಾತೀಮಾ ಎಂದು ಬದಲಾಯಿಸಿದ್ದ. ಅಲ್ಲದೇ ವಿಸಾ ಇಲ್ಲದೇ ಬಾಂಗ್ಲಾದೇಶಕ್ಕೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಈ ಕುರಿತು ತನಿಖೆ ನಡೆಸುತ್ತಿರುವ ಲೋಹಗಂಜ್ ಪೊಲೀಸ್ ಠಾಣೆ ಎಂಡಿ ಅನಿಚುರ್ ರೆಹೆಮಾನ್ ‘ತಮಿಳುನಾಡಿನಲ್ಲಿರುವ ಯುವತಿಯ ಸಂಬಂಧಿಕರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅವರಿಗೆ ಮಾಹಿತಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search