• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ, ಮೋದಿ ವಿದೇಶಕ್ಕೆ ತೆರಳುವ ಜತೆಗೆ ಅವರನ್ನೂ ದೇಶಕ್ಕೆ ಕರೆಸುವ ನೈಪುಣ್ಯ ಹೊಂದಿರುವುದು ಸಾಬೀತು!

TNN Correspondent Posted On February 14, 2018
0


0
Shares
  • Share On Facebook
  • Tweet It

ದೆಹಲಿ: ಜನವರಿ 26ರ ಗಣರಾಜ್ಯೋತ್ಸವದ ವೈಭವವನ್ನು ಭಾರತ ಬಿಡಿ ವಿಶ್ವವೇ ಬೆರಗಾಗಿ ನೋಡಿತು. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಆಸಿಯಾನ್ ರಾಷ್ಟ್ರಗಳ ನಾಯಕರನ್ನು ಭಾರತಕ್ಕೆ ಕರೆಸಿದ ಮೋದಿ ಅವರು ವಿಶ್ವವನ್ನೇ ನಿಬ್ಬೆರಗಾಗಿಸಿದರು. ದೇಶದ ಶಕ್ತಿ ತೋರಿಸಿದರು.

ಮೊದಲಿನಿಂದಲೂ ಮೋದಿ ಅವರು ವಿದೇಶಕ್ಕೆ ತೆರಳುತ್ತಾರೆ, ವಿದೇಶದಲ್ಲೇ ಜಾಸ್ತಿ ಇರುತ್ತಾರೆ ಎಂದು ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಟೀಕಿಸುತ್ತವೆ. ಆದರೆ ವಿದೇಶಕ್ಕೆ ತೆರಳಿ ಭಾರತವನ್ನು ಹೇಗೆ ಅಭಿವೃದ್ಧಿಗೊಳಿಸುತ್ತಿದ್ದಾರೆ, ಭಾರತದಲ್ಲಿ ಹೇಗೆ ವಿದೇಶಿ ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ ಎಂಬುದನ್ನು ತಮ್ಮ ವೈಯಕ್ತಿಕಕ್ಕೋಸ್ಕರ ಈ ವಿರೋಧ ಪಕ್ಷದವರು ಹೇಳಲ್ಲ.

ಹಾಗಂತ ಮೋದಿ ಅವರು ಬರೀ ವಿದೇಶ ಪ್ರವಾಸ ಮಾಡುತ್ತಿಲ್ಲ, ಅವರನ್ನೂ ನಮ್ಮ ದೇಶಕ್ಕೆ ಕರೆಸುತ್ತಿದ್ದಾರೆ ಎಂಬುದಕ್ಕೆ ಗಣರಾಜ್ಯೋತ್ಸವವೇ ಸಾಕ್ಷಿ. ಅದರ ಮುಂದುವರೆದ ಭಾಗ ಎಂಬಂತೆ ಈ ಮೋದಿ ಅವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಹೌದು, ಫೆ.15ರಂದು ಇರಾನ್ ಅಧ್ಯಕ್ಷ ಹಸನ್ ರೌಹಾನಿಯವರು ಭಾರತಕ್ಕೆ ಆಗಮಿಸಲಿದ್ದು, ಪ್ರಧಾನಿ ಮೋದಿ ಅವರ ಜತೆ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿ, ದ್ವಿಪಕ್ಷೀಯ ಮಾತುಕತೆ, ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಅಷ್ಟೇ ಅಲ್ಲ, ಕಳೆದ ವರ್ಷ ಇರಾನ್ ಚಬಹಾರ್ ಬಂದರು ಆರಂಭಿಸುವ ಮೂಲಕ ಭಾರತಕ್ಕೆ ತಾಂತ್ರಿಕತೆ ಹಾಗೂ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದ್ದು ಹಾಗೂ ಅದರ ಮರುವರ್ಷವೇ ಇರಾನ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ಭಾರತದ ನಿರೀಕ್ಷೆ ಹೆಚ್ಚಿದೆ ಹಾಗೂ ಈ ಭೇಟಿ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ.

 

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search