• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಣ್ಸನ್ನೆ ಮೂಲಕ ವಿಶ್ವದ ಗಮನ ಸೆಳೆದ ಬೆಡಗಿ ವಿರುದ್ಧವೂ ಮೂಲಭೂತವಾದಿ ಮುಸ್ಲಿಂ ಯುವಕನ ದೂರು

TNN Correspondent Posted On February 14, 2018


  • Share On Facebook
  • Tweet It

ಹೈದರಾಬಾದ್: ಕಣ್ಸನ್ನೆಯನ್ನೇ ಕೇಂದ್ರವಾಗಿಟ್ಟು ನಿರ್ಮಿಸಲಾದ ಗೀತೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಗೀತೆಯನ್ನು ನಾಯಕಿ, ಕಣ್ಸನ್ನೆ ಮೂಲಕ ವಿಶ್ವದ ಗಮನ ಸೆಳೆದ ಪ್ರಿಯಾ ವಾರಿಯರ್ ವಿರುದ್ಧವೂ ಮೂಲಭೂತವಾದಿ ಮುಸ್ಲಿಂ ಯುವಕನೊಬ್ಬ ದೂರು ನೀಡಿದ್ದಾನೆ.

ಮಲೆಯಾಳಂನ ಆರು ಅಡಾರ್ ಲವ್ ಚಿತ್ರದ ಮಾಣಿಕ್ಯ ಮಾಲಾರಾಯ್ ಪೂವಿ ಹಾಡಿನಲ್ಲಿ ನಟಿಸಿರುವ ಪ್ರಿಯಾ ವಾರಿಯರ್ ಮತ್ತು ಗೀತೆ ಸಂಯೋಜಕನ ವಿರುದ್ಧವೂ ಹೈದರಾಬಾದ್ ನಲ ಫಲಕ್ಕುನ್ನಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ದೂರು ನೀಡಿರುವ ಮುಖಿತ್ ಖಾನ್ ‘ಹಾಡಿನಲ್ಲಿ ಪ್ರವಾದಿ ಮಹಮ್ಮದರ ಬಗ್ಗೆ ಅವಹೇಳನ ಮಾಡಲಾಗಿದೆ. ಮಲೆಯಾಳಂನಲ್ಲಿ ಹಾಡು ಅರ್ಥವಾಗದೇ ಇರುವಾಗ ಗೂಗಲ್ ಟ್ರಾನ್ಸಲೆಟ್ ಗೆ ಹಾಕಿದಾಗ ಹಾಡಿನ ಕುರಿತು ಇಂಗ್ಲಿಷ್ ನಲ್ಲಿ ಪ್ರವಾದಿ ಮಹಮ್ಮದರ ಬಗ್ಗೆ ಅವಮಾನ ಮಾಡುವ ಅಂಶಗಳು ಕಂಡು ಬಂದಿವೆ ಎಂದು ದೂರು ನೀಡಿದ್ದೇನೆ ಎಂದು ತಿಳಿಸಿದ್ದಾನೆ. ಅಲ್ಲದೇ ಟಿವಿಯೊಂದರಲ್ಲಿ ಮಾತನಾಡಿದ ದೂರುದಾರ ಮುಖಿತ್ ಖಾನ್ ‘ನನಗೆ ದೂರು ನೀಡುವ ಸ್ವಾತಂತ್ರ್ಯವಿಲ್ಲವೇ ಎಂದು ಹೇಳುವ ಮೂಲಕ ನಗೆಪಾಟಲಿಗೆ ಈಡಾಗಿದ್ದಾನೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಒರು ಆಡಾರ್ ಲವ್ ಚಿತ್ರ ನಿರ್ದೇಶಕ ‘ಹಾಡಿನಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಂಶಗಳಿಲ್ಲ. ಹಾಡಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘನೆ, ಮೆಚ್ಚುಗೆ ವ್ಯಕ್ತವಾಗಿದೆ. ಇಂತಹ ಅಂಶಗಳು ಇದ್ದರೇ ವಿಶ್ವಾದ್ಯಂತ ಗಮನ ಸೆಳೆಯಲು ಆಗುತ್ತಿತ್ತಾ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದ ಪ್ರಿಯಾ

ಪ್ರಿಯಾ ಪ್ರಕಾಶ್ ವಾರಿಯರ್ ತಮ್ಮ ಅದ್ಭುತ ನಟನೆಯ ಮೂಲಕ ಗಮನ ಸೆಳೆದಿದ್ದು, ಹಾಡು ವಿಶ್ವಾದ್ಯಂತ ಭಾರಿ ಅಭಿಮಾನಿಗಳನ್ನು ಸೃಷ್ಟಿಸಿದೆ. ಇನ್ಸಸ್ಟಾಗ್ರಾಂನಲ್ಲಿ ಒಂದೇ ದಿನದಲ್ಲೇ 6 ಲಕ್ಷಕ್ಕೂ ಹೆಚ್ಚಿನ ಹಿಂಬಾಲಕರನ್ನು ಪಡೆಯುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಪ್ರಸ್ತುತ 17 ಲಕ್ಷ ಫಾಲೋವರ್ ಗಳನ್ನು ಹೊಂದುವ ಮೂಲಕ ಬ್ಲೂಟಿಕ್ ಮಾರ್ಕ್ ಪ್ರಿಯಾ ಅಕೌಂಟ್ ಪಡೆದಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search