• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಸೌದಿ ಅರೇಬಿಯಾಗೆ ಹೋಗಿದ್ದಕ್ಕೆ, ಆ ರಾಷ್ಟ್ರ ಭಾರತದಲ್ಲಿ ಎಷ್ಟು ಬಂಡವಾಳ ಹೂಡಲು ಮುಂದಾಗಿದೆ ಗೊತ್ತಾ?

TNN Correspondent Posted On February 15, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುವ ವಿದೇಶ ಪ್ರವಾಸಗಳನ್ನು ಟೀಕಿಸುವವರಿಗೆ ಸಮರ್ಪಕವಾದ ಉತ್ತರವೊಂದು ಮೊನ್ನೆ ಮೋದಿ ಅವರು ಕೈಗೊಂಡ ಸೌದಿ ಅರೇಬಿಯಾ ಪ್ರವಾಸದಲ್ಲಿ ಸಿಕ್ಕಿದೆ.

ಹೌದು, ಮೋದಿ ಸೌದಿ ಅರೇಬಿಯಾ ರಾಜಕುಮಾರನನ್ನು ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ ಬೆನ್ನಲ್ಲೇ, ಸೌದಿ ಅರೇಬಿಯಾ ಭಾರತದಲ್ಲಿ ಅಪಾರ ಬಂಡವಾಳ ಹೂಡಲು ಬಯಸಿದೆ.

ಮುಂದಿನ ನಾಲ್ಕರಿಂದ ಐದು ವರ್ಷದ ಅವಧಿಯಲ್ಲಿ, ಭಾರತದ ಭದ್ರತೆ, ಸರಕು ಸಾಗಣೆ ಸೇರಿ ಹಲವು ಕ್ಷೇತ್ರಗಳಲ್ಲಿ ಸುಮಾರು 300 ಬಿಲಿಯನ್ ಡಾಲರ್, ಅಂದರೆ 19 ಲಕ್ಷ ಕೋಟಿ ರೂಪಾಯಿಗಿಂತ ಅಧಿಕ ಹಣ ಭಾರತದಲ್ಲಿ ಹೂಡಲು ಸೌದಿ ನಿರ್ಧರಿಸಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಿತಾಬ್ ಕಾಂತ್ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಎರಡು ಬಾರಿ ಸೌದಿ ಅರೇಬಿಯಾಗೆ ಭೇಟಿ ನೀಡಿದ್ದು, ಆ ರಾಷ್ಟ್ರದ ಜತೆಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಸೌದಿ ಅರೇಬಿಯಾ ಸಹ ಭಾರತದಲ್ಲಿ ಹೂಡುವ ಪ್ರಮುಖ ರಾಷ್ಟ್ರವಾಗುವ ಇರಾದೆ ವ್ಯಕ್ತಪಡಿಸಿದ್ದು, ಅದರ ಭಾಗವಾಗಿ ಬಂಡವಾಳ ಹೂಡಲು ಮುಂದಾಗಿದೆ ಎಂದು ಕಾಂತ್ ವಿವರಿಸಿದ್ದಾರೆ.

ಅಷ್ಟೇ ಅಲ್ಲ, 30-45 ದಿನಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ “ನೂತನ ಸಾಮರ್ಥ್ಯ ನೀತಿ” ಪ್ರಕಟಿಸಲಿದ್ದು, ಭಾರತ ಗ್ಯಾಸ್ ಉತ್ಪಾದನೆಯ ಪ್ರಮುಖ ತಾಣವಾಗಿ ಮಾರ್ಪಡಿಸುವ ಯೋಜನೆಯಿಂದೆ. ಈ ದಿಸೆಯಲ್ಲಿ ಸೌದಿ ಅರೇಬಿಯಾದ ಬಂಡವಾಳ ಹೂಡಿಕೆ ಆಶಾದಾಯಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುತ್ತಿರುವ ವಿದೇಶ ಪ್ರವಾಸಗಳಿಂದ ಭಾರತದ ಘನತೆ, ಶಕ್ತಿ ಜಾಗತಿಕವಾಗಿ ಬೆಳೆಯುತ್ತಿರುವ ಜತೆಗೆ ಭಾರತಕ್ಕೆ ಅಪಾರ ಪ್ರಮಾಣದ ಬಂಡವಾಳ ಸಹ ಹರಿದುಬರುತ್ತಿರುವುದು ದೇಶದ ಅಭಿವೃದ್ಧಿಗೆ ಸಹಾಯಕವಾಗಲಿದೆ. ಹಾಗೆಯೇ ಇದನ್ನು ಮೋದಿ ವಿರೋಧಿಗಳು ಅರ್ಥಮಾಡಿಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search