• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಸೌದಿ ಅರೇಬಿಯಾಗೆ ಹೋಗಿದ್ದಕ್ಕೆ, ಆ ರಾಷ್ಟ್ರ ಭಾರತದಲ್ಲಿ ಎಷ್ಟು ಬಂಡವಾಳ ಹೂಡಲು ಮುಂದಾಗಿದೆ ಗೊತ್ತಾ?

TNN Correspondent Posted On February 15, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುವ ವಿದೇಶ ಪ್ರವಾಸಗಳನ್ನು ಟೀಕಿಸುವವರಿಗೆ ಸಮರ್ಪಕವಾದ ಉತ್ತರವೊಂದು ಮೊನ್ನೆ ಮೋದಿ ಅವರು ಕೈಗೊಂಡ ಸೌದಿ ಅರೇಬಿಯಾ ಪ್ರವಾಸದಲ್ಲಿ ಸಿಕ್ಕಿದೆ.

ಹೌದು, ಮೋದಿ ಸೌದಿ ಅರೇಬಿಯಾ ರಾಜಕುಮಾರನನ್ನು ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ ಬೆನ್ನಲ್ಲೇ, ಸೌದಿ ಅರೇಬಿಯಾ ಭಾರತದಲ್ಲಿ ಅಪಾರ ಬಂಡವಾಳ ಹೂಡಲು ಬಯಸಿದೆ.

ಮುಂದಿನ ನಾಲ್ಕರಿಂದ ಐದು ವರ್ಷದ ಅವಧಿಯಲ್ಲಿ, ಭಾರತದ ಭದ್ರತೆ, ಸರಕು ಸಾಗಣೆ ಸೇರಿ ಹಲವು ಕ್ಷೇತ್ರಗಳಲ್ಲಿ ಸುಮಾರು 300 ಬಿಲಿಯನ್ ಡಾಲರ್, ಅಂದರೆ 19 ಲಕ್ಷ ಕೋಟಿ ರೂಪಾಯಿಗಿಂತ ಅಧಿಕ ಹಣ ಭಾರತದಲ್ಲಿ ಹೂಡಲು ಸೌದಿ ನಿರ್ಧರಿಸಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಿತಾಬ್ ಕಾಂತ್ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಎರಡು ಬಾರಿ ಸೌದಿ ಅರೇಬಿಯಾಗೆ ಭೇಟಿ ನೀಡಿದ್ದು, ಆ ರಾಷ್ಟ್ರದ ಜತೆಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಸೌದಿ ಅರೇಬಿಯಾ ಸಹ ಭಾರತದಲ್ಲಿ ಹೂಡುವ ಪ್ರಮುಖ ರಾಷ್ಟ್ರವಾಗುವ ಇರಾದೆ ವ್ಯಕ್ತಪಡಿಸಿದ್ದು, ಅದರ ಭಾಗವಾಗಿ ಬಂಡವಾಳ ಹೂಡಲು ಮುಂದಾಗಿದೆ ಎಂದು ಕಾಂತ್ ವಿವರಿಸಿದ್ದಾರೆ.

ಅಷ್ಟೇ ಅಲ್ಲ, 30-45 ದಿನಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ “ನೂತನ ಸಾಮರ್ಥ್ಯ ನೀತಿ” ಪ್ರಕಟಿಸಲಿದ್ದು, ಭಾರತ ಗ್ಯಾಸ್ ಉತ್ಪಾದನೆಯ ಪ್ರಮುಖ ತಾಣವಾಗಿ ಮಾರ್ಪಡಿಸುವ ಯೋಜನೆಯಿಂದೆ. ಈ ದಿಸೆಯಲ್ಲಿ ಸೌದಿ ಅರೇಬಿಯಾದ ಬಂಡವಾಳ ಹೂಡಿಕೆ ಆಶಾದಾಯಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುತ್ತಿರುವ ವಿದೇಶ ಪ್ರವಾಸಗಳಿಂದ ಭಾರತದ ಘನತೆ, ಶಕ್ತಿ ಜಾಗತಿಕವಾಗಿ ಬೆಳೆಯುತ್ತಿರುವ ಜತೆಗೆ ಭಾರತಕ್ಕೆ ಅಪಾರ ಪ್ರಮಾಣದ ಬಂಡವಾಳ ಸಹ ಹರಿದುಬರುತ್ತಿರುವುದು ದೇಶದ ಅಭಿವೃದ್ಧಿಗೆ ಸಹಾಯಕವಾಗಲಿದೆ. ಹಾಗೆಯೇ ಇದನ್ನು ಮೋದಿ ವಿರೋಧಿಗಳು ಅರ್ಥಮಾಡಿಕೊಳ್ಳಬೇಕಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search