• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ರಾಜ್ಯ ಬಜೆಟ್ ಅಲ್ಲ, ಅಲ್ಪಸಂಖ್ಯಾತರ ಬಜೆಟ್!

TNN Correspondent Posted On February 17, 2018
0


0
Shares
  • Share On Facebook
  • Tweet It

ಬೆಂಗಳೂರು: ಸಮಾಜವಾದ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುತ್ತಲೇ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು, ಸಿಎಂ ಪದವಿಗೇರುತ್ತಲೇ ಅಹಿಂದ ಪರ ವಾಲಿದರು, ಹಿಂದೂಗಳ ಹತ್ಯೆಯಾದರೂ ಸುಮ್ಮನಾದರು, ಹಿಂದೂಗಳ ಸಂಪ್ರದಾಯಕ್ಕೆ ಮೌಢ್ಯದ ಲೇಪನ ಹಚ್ಚಿದರು, ಮಠಗಳನ್ನು ಸರ್ಕಾರದ ಸುಪರ್ದಿಗೆ ಒಯ್ಯಲು ಯತ್ನಿಸಿದರು.

ಇದರ ಜತೆಗೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಒಲವು ತೋರಿಸಿದರು. ಮುಸ್ಲಿಮರಿಗಾಗಿಯೇ ಶಾದಿ ಭಾಗ್ಯ ಯೋಜನೆ ಜಾರಿಗೆ ತಂದು ಟೀಕೆಗೊಳಗಾದರು. ಟಿಪ್ಪು ಜಯಂತಿ ಆಚರಿಸಿ ಮುಸ್ಲಿಮರ ಓಲೈಕೆಗೆ ನಿಂತರು. ಹಲವು ಗಲಾಟೆಗಳಲ್ಲಿ ದಾಖಲಾದ ಪ್ರಕರಣ ಹಿಂಪಡೆಯುವಾಗ, ಹಿಂದೂಗಳನ್ನು ಮರೆತು, ಬರೀ “ಮುಗ್ಧ ಅಲ್ಪಸಂಖ್ಯಾತರ” ವಿರುದ್ಧದ ಪ್ರಕರಣ ಹಿಂಪಡೆಯಲು ಹೊರಟು ಟೀಕೆಗೊಳಗಾದರು.

ಇಂತಿಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಬಜೆಟ್ ನಲ್ಲಿಯೂ ಅಲ್ಪಸಂಖ್ಯಾತರ ಪರವಾಗಿಯೇ ನಿಂತಿದ್ದಾರೆ. ಖಂಡಿತವಾಗಿಯೂ ಅಲ್ಪಸಂಖ್ಯಾತರಿಗೆ ಯೋಜನೆ ನೀಡಬೇಕು, ಆದರೆ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರಿಗಷ್ಟೇ ಹಣ ಮೀಸಲಿಟ್ಟದ್ದಾರೆ ಎನ್ನುವ ಮಟ್ಟಿಗೆ ಬಜೆಟ್ ನ್ನು ಅಲ್ಪಸಂಖ್ಯಾತಮಯಗೊಳಿಸಿದ್ದಾರೆ.

ನಾನು ಹಿಂದೂ ಎನ್ನುವ ಸಿಎಂ ಬಜೆಟ್ಟಿನಲ್ಲಿ ಎಲ್ಲಿಯೂ ಹಿಂದೂಗಳಿಗೆ ಇಷ್ಟು ಅನುದಾನ ಅಂತ ಕೊಟ್ಟಿಲ್ಲ. ಬಜೆಟ್ ಕಾಪಿ ಹುಡುಕಾಡಿದರೂ ಸಿಗುವುದಿಲ್ಲ. ಹಾಗಾದರೆ ಬರೀ ಅಲ್ಪಸಂಖ್ಯಾತರಿಗಷ್ಟೇ ಮುಖ್ಯಮಂತ್ರಿಯವರು ಜಾರಿಗೆ ತಂದ ಯೋಜನೆ ಯಾವುದು, ಅವರಿಗಷ್ಟೇ ಎಷ್ಟು ಹಣ ನೀಡಿದ್ದಾರೆ ಎಂಬುದನ್ನು ನೀವೇ ನೋಡಿ ಹಾಗೂ ಸಿದ್ದರಾಮಯ್ಯನವರ ಹಿಂದೂ ವಿರೋಧಿ ಮನಸ್ಥಿತಿಯನ್ನು ಅರಿಯಿರಿ.

  • ಬೆಂಗಳೂರಿನ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಅಲ್ಪ ಸಂಖ್ಯಾತರ ಅಧ್ಯಯನ ಪೀಠ ಸ್ಥಾಪನೆ
  • ಅಲ್ಪಸಂಖ್ಯಾತ ಮಹಿಳೆಯರಿಗೆ ಸ್ಟಾರ್ಟ್ ಅಪ್ ಕೈಗೊಳ್ಳಲು ಬೇಕಾದ ಸಾಲಕ್ಕೆ 15 ಕೋಟಿ ರೂ. ಮಂಜೂರು.
  • ಕರ್ನಾಟಕ ವಕ್ಫ್ ಪರಿಷತ್ತಿನ ಕಾರ್ಪಸ್ ಫಂಡಿಗೆ 20 ಕೋಟಿ ರೂ. ಅನುದಾನ.
  • ಅಲ್ಪಸಂಖ್ಯಾತರ ವಸತಿ ನಿಲಯ, ಶಾಲೆ, ಕಾಲೇಜುಗಳಲ್ಲಿ ದುರ್ಘಟನೆಗೊಳಗಾದ ಅಲ್ಪಸಂಖ್ಯಾತರಿಗೆ ಪರಿಹಾರ.
  • ಮದರಸಾಗಳಿಗೆ 15 ಕೋಟಿ ರೂಪಾಯಿ ಸಹಾಯಧನ ಮಂಜೂರು.
  • ಅಲ್ಪಸಂಖ್ಯಾತರಿಗೆ ಸಾಲ ನೀಡಲು ಹೊಸ ಯೋಜನೆ ಘೋಷಣೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಕೈಗೊಳ್ಳಲು ಸಾಲ ಯೋಜನೆಗಾಗಿ 30 ಕೋಟಿ ರೂ. ಮಂಜೂರು.
  • ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ಮುಂಗಡಪತ್ರದಲ್ಲಿ ಮಂಜೂರು.

ಹೀಗೆ ಸಾಲು ಸಾಲಾಗಿ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರಿಗೆ ಬಜೆಟ್ಟಿನಲ್ಲಿ ಯೋಜನೆ, ಹಣ ನೀಡಿದ್ದಾರೆ. ಆದರೆ ಹಿಂದೂ ಎನ್ನುವ ಸಿಎಂ ಸಾಹೇಬ್ರು ಹಿಂದೂಗಳಿಗಾಗಿ ಏನು ಮಾಡಿದ್ದಾರೆ? ಸಿದ್ದರಾಮಯ್ಯನವರು ಇದಕ್ಕೆ ಉತ್ತರಿಸಬೇಕು.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search