• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶಿ ವಿಶ್ವನಾಥ ದೇವಾಲಯ ಬಳಿಯ ಮಸೀದಿ ಎದುರು ಸುರಂಗ ಮಿನಿ ನಗರ ಪತ್ತೆ, ಭಯೋತ್ಪಾದನೆಗೆ ಸಂಚು?

TNN Correspondent Posted On February 18, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯಕ್ಕೆ ಬಿಗಿ ಭದ್ರತೆಯಿದ್ದರೂ ಭಯೋತ್ಪಾದಕರು ಮಾತ್ರ ಆಗಾಗ ನಾವು ಬಾಂಬು ಹಾಕುತ್ತೇವೆ ಎಂದು ಹೆದರಿಕೆ ಹಾಕುತ್ತಾರೆ, ಎಚ್ಚರಿಸುತ್ತಾರೆ. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಈ ದೇವಾಲಯ ಎಂದಿಗೂ ಉಗ್ರರ ಟಾರ್ಗೆಟ್ ಲಿಸ್ಟ್ ನಲ್ಲಿ ಇರುತ್ತದೆ.

ಇದಕ್ಕೆ ಪೂರಕವಾಗಿ ಕಾಶಿ ವಿಶ್ವನಾಥ ದೇವಾಲಯ ಬಳಿಕ ಮಸೀದಿಯೊಂದರ ಎದುರು ನೆಲಮಹಡಿಯಲ್ಲಿ ಕೊರೆದ ಮಿನಿ ನಗರ ಅಥವಾ ಸಮುಚ್ಚಯವೊಂದು ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಾರಣಸಿಯ ದಲ್ಮಂಡಿ ಪ್ರದೇಶದ ಲಾಂಗ್ಡಾ ಹಫೀಜ್ ಮಸೀದಿ ಎದುರಿನಲ್ಲಿ ಭೂಮಿಯ ಆಳಕ್ಕೆ ಸುರಂಗ ಕೊರೆದಿದ್ದು, ಅಲ್ಲೇ ಸಮ್ಮುಚ್ಚಯ (ಕಾಂಪ್ಲೆಕ್ಸ್) ಪತ್ತೆಯಾಗಿದೆ. ಅಕ್ರಮ ಒತ್ತುವರಿ ತಡೆ ಪಡೆ ಎಂದಿನಂತೆ ಗಸ್ತು ನಡೆಸುವಾಗ, ನಿರ್ಮಾಣ ಹಂತದಲ್ಲಿರುವ ಸುರಂಗ ಪತ್ತೆಯಾಗಿದೆ.

ಎಸ್ಎಸ್ ಪಿ ಆರ್.ಕೆ.ಭಾರದ್ವಾಜ್ ತಂಡ ಈ ಸುರಂಗ ಸಮುಚ್ಚಯವನ್ನು ಪತ್ತೆ ಹಚ್ಚಿದ್ದು, ಯಾರು ಈ ಸಮುಚ್ಚಯ ನಿರ್ಮಿಸುತ್ತಿದ್ದಾರೆ? ಯಾವ ಕಾರಣಕ್ಕಾಗಿ ಭೂಮಿಯ ಆಳದಲ್ಲಿ ಸುರಂಗ ಕೊರೆಯುತ್ತಿದ್ದಾರೆ? ಎಂಬ ಕುರಿತು ಅನುಮಾನಗಳು ಉದಯಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುರಂಗ ಸಮುಚ್ಚಯವು ಸುಮಾರು 5000 ಚದುರ ಮೀಟರ್ ನಷ್ಟು ವಿಸ್ತಾರ ಹೊಂದಿದ್ದು, ಭಯೋತ್ಪಾದನೆ ದಾಳಿ, ಸಂಚಿಗಾಗಿ ಸಮುಚ್ಚಯ ನಿರ್ಮಿಸುತ್ತಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪಕ್ಕದಲ್ಲೇ ಕಾಶಿ ವಿಶ್ವನಾಥ ದೇವಾಲಯವೂ ಇರುವುದರಿಂದ ಪೊಲೀಸರು ಸಮಗ್ರ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search