• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ಶಾಂತಿ, ಸಹಬಾಳ್ವೆಯ ಮೂರ್ತರೂಪ ಎಂದ ಮುಸ್ಲಿಂ ರಾಷ್ಟ್ರದ ನಾಯಕ ಯಾರು ಗೊತ್ತಾ?

TNN Correspondent Posted On February 18, 2018


  • Share On Facebook
  • Tweet It

ದೆಹಲಿ: ಪ್ರಕಾಶ್ ರೈ ಅಂತಹ ಅತೃಪ್ತ ಆತ್ಮಗಳು, ಆಮೀರ್ ಖಾನ್ ಅವರಂತಹ ಶ್ರೀಮಂತರು ಹಾಗೂ ಬಾಯಿ ತೆವಲು ಇರುವವರು ಭಾರತದಲ್ಲಿ ಅಸಹಿಷ್ಣುತೆ ಇದೆ, ಅಭದ್ರತೆ ಕಾಡುತ್ತಿದೆ ಎಂದು ಬೊಬ್ಬೆ ಹಾಕುತ್ತಾರೆ. ಆದರೆ, ಅದೇ ವಿಶ್ವದ ಪ್ರಮುಖ ರಾಷ್ಟ್ರಗಳ ನಾಯಕರು ಮಾತ್ರ ಭಾರತದ ಆಚಾರ-ವಿಚಾರ, ಸಂಸ್ಕೃತಿ, ಶಾಂತಿಪ್ರಿಯತೆಯನ್ನು ಹಾಡಿಹೊಗಳುತ್ತಾರೆ.

ಇದಕ್ಕೆ ಪೂರಕವಾಗಿ ಮತ್ತೊಂದು ನಿದರ್ಶನ ಸಿಕ್ಕಿದ್ದು, ಇರಾನ್ ಅಧ್ಯಕ್ಷ ಹಸನ್ ರೌಹಾನಿ ಭಾರತದ ಶಾಂತಿಪ್ರಿಯತೆಯನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಮೂರು ದಿನ ಭಾರತದ ಪ್ರವಾಸದಲ್ಲಿರುವ ಮುಸ್ಲಿಂ ರಾಷ್ಟ್ರದ ಅಧ್ಯಕ್ಷ, “ಭಾರತ ಶಾಂತಿ ಸಹಬಾಳ್ವೆಯ ಜೀವಂತ ನಿದರ್ಶನ ಹಾಗೂ ಶಾಂತಿಗೆ ಮ್ಯೂಸಿಯಂ” ಇದ್ದಂತೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಶತಶತಮಾನಗಳಿಂದ ಮುಸ್ಲಿಮರು, ಶಿಯಾ ಹಾಗೂ ಸುನ್ನಿ ಪಂಗಡಗಳು, ಬೌದ್ಧ ಧರ್ಮೀಯರು, ಸಿಖ್ಖರು ಹಾಗೂ ಹಿಂದೂಗಳು ಒಗ್ಗಟ್ಟಾಗಿ ಬಾಳುತ್ತಿದ್ದಾರೆ. ಇಂತಹ ಒಂದು ಸಹಬಾಳ್ವೆಯಿಂದಲೇ ಭಾರತ ಉತ್ತಮ ನಾಗರಿಕತೆ ಪಡೆದಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ವಿಶ್ವದಲ್ಲಿ ಇಸ್ಲಾಂ ಧರ್ಮವು ಸಹ ಶಾಂತಿ ಬಯಸುತ್ತಿದೆ. ಆದರೆ ಕೆಲವು ಮೂಲಭೂತವಾದಿಗಳ ಕುತಂತ್ರದಿಂದ ಧರ್ಮಕ್ಕೇ ಕೆಟ್ಟ ಹೆಸರು ಬರುತ್ತಿದೆ. ಅದನ್ನು ಹೋಗಲಾಡಿಸಲು ಶಿಯಾ ಹಾಗೂ ಸುನ್ನಿ ಪಂಗಡದವರು ಒಗ್ಗಟ್ಟಾಗಬೇಕು. ಶಾಂತಿ, ಸಹಬಾಳ್ವೆಯಿಂದ ಬದುಕಬೇಕು ಎಂದು ಸಹ ಸಲಹೆ ನೀಡಿದ್ದಾರೆ.

ಅದೇ ರೀತಿ, ಅವು ಮುಸ್ಲಿಂ ರಾಷ್ಟ್ರಗಳಿರಲಿ, ಅಥವಾ ಅದಾವುದೇ ಧರ್ಮ, ಸಂಸ್ಕೃತಿ ಪ್ರಧಾನ ರಾಷ್ಟ್ರಗಳಿರಬಹುದು. ಎಲ್ಲ ರಾಷ್ಟ್ರಗಳು ತಮ್ಮ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಯುದ್ಧವೇ ಅಂತಿಮ ಪರಿಹಾರ ಎಂಬುದನ್ನು ಬಿಡಬೇಕು ಎಂದಿದ್ದಾರೆ.

ಅಲ್ಲದೆ ಪ್ರಧಾನಿ ಮೋದಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿರುವ ಹಸನ್, ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ವೀಟೋ ಅಧಿಕಾರ ನೀಡಬೇಕು ಎಂದು ಸಹ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತೆ ವಿಶ್ವವ್ಯಾಪಿಯಾಗುತ್ತಿರುವುದಂತೂ ಸುಳ್ಳಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search