• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ಗುಟುರಿಗೆ ಹೆದರಿದ ರೌಡಿಗಳು, ಶರಣಾದವರನ್ನು ಜೈಲಿಗೆ ಹಾಕಲು ಸ್ಥಳವೇ ಸಾಕಾಗುತ್ತಿಲ್ಲ

TNN Correspondent Posted On February 19, 2018
0


0
Shares
  • Share On Facebook
  • Tweet It

ಲಖನೌ: ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥರು 2017ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಜಾರಿಗೆ ತಂದ ಪ್ರಮುಖ ಯೋಜನೆಗಳು, ತೆಗೆದುಕೊಂಡ ದಿಟ್ಟ ನಿರ್ಧಾರಗಳು ಹೇಗೆ ಮನೆಮಾತಾಗಿವೆಯೋ, ಅವರು ಕೈಗೊಂಡ ಕಾನೂನು ಸುವ್ಯವಸ್ಥೆಯೂ ಪ್ರಸ್ತುತ ರಾಜ್ಯದ ಗಡಿದಾಟಿ ಸುದ್ದಿಯಾಗುತ್ತಿದೆ.

ಹೌದು, ಸಮಾಜದ ನೆಮ್ಮದಿ ಹಾಳು ಮಾಡುತ್ತಿರುವ ರೌಡಿಗಳನ್ನು ಎನ್ ಕೌಂಟರ್ ಮಾಡಲು ಆದೇಶಿಸಿರುವ ಸಿಎಂ ಆದಿತ್ಯನಾಥರು, ಶರಣಾಗಲು ಒಪ್ಪದವರನ್ನು ಸಹ ಎನ್ ಕೌಂಟರ್ ಮಾಡುವಂತೆ ದಿಟ್ಟ ಆದೇಶ ಹೊರಡಿಸಿದ್ದಾರೆ.

ಇದರಿಂದ ಪತರಗುಟ್ಟಿರುವ ಉತ್ತರ ಪ್ರದೇಶದ ರೌಡಿಗಳು ಈಗ ಹಿಂಡು ಹಿಂಡಾಗಿ ಬಂದು ಶರಣಾಗುತ್ತಿದ್ದು, ಅವರನ್ನು ಇಡಲು ಜೈಲಿನಲ್ಲಿ ಸ್ಥಳವೇ ಸಾಕಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಉತ್ತರ ಪ್ರದೇಶ ಡಿಜಿಪಿ ಕಚೇರಿಯೇ ಮಾಹಿತಿ ನೀಡಿರುವ ಪ್ರಕಾರ, ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದ ಸುಮಾರು 142 ಕ್ರಿಮಿನಲ್ ಗಳು ಶರಣಾಗಿದ್ದಾರೆ. ಈ ಕುರಿತು ಸುಮಾರು 26 ಕ್ರಿಮಿನಲ್ ಗಳಿಗೆ ಜಾಮೀನು ಮಂಜೂರಾಗಿದ್ದರೂ ಜೈಲು ಬಿಟ್ಟಲು ಹೋಗುತ್ತಿಲ್ಲ ಎಂದು ತಿಳಿದುಬಂದಿದೆ.

ಇದಕ್ಕೆಲ್ಲ ಕಾರಣ ಯೋಗಿ ಆದಿತ್ಯನಾಥರು ಕೈಗೊಂಡ ನಿರ್ಧಾರವೇ ಆಗಿದ್ದು, 2017ರ ಮಾರ್ಚ್ 20ರಿಂದ ಇದುವರೆಗೆ ಉತ್ತರ ಪ್ರದೇಶದಲ್ಲಿ 1240 ಎನ್ ಕೌಂಟರ್ ನಡೆದಿವೆ. ಅದರಲ್ಲಿ 40ಕ್ಕೂ ಅಧಿಕ ಕ್ರಿಮಿನಲ್ ಗಳು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ರೌಡಿಗಳು ಗಾಯಗೊಂಡಿದ್ದಾರೆ.

ಅಲ್ಲದೆ, ಶರಣಾಗಲು ಒಪ್ಪದಿದ್ದರೆ ಎನ್ ಕೌಂಟರ್ ಮಾಡಿ ಎಂದು ಯೋಗಿ ಆದಿತ್ಯನಾಥರು ಆದೇಶಿಸಿರುವುದರಿಂದ ಜೀವ ಉಳಿದರೆ ಸಾಕು ಎನ್ನುತ್ತಿರುವ ರೌಡಿಗಳು, ಜೈಲಿಗೆ ಬಂದು ಶರಣಾಗುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಎಂದರೆ ಇದೇ ಅಲ್ಲವೆ? ನಮ್ಮ ಸಿದ್ದರಾಮಯ್ಯನವರು ಇಂತಹ ಕ್ರಮ ಕೈಗೊಳ್ಳಬೇಕು.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search