• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖಟರ್ ಮುಸ್ಲಿಂ ರಾಷ್ಟ್ರ ಸೌದಿಯಲ್ಲಿ ಮಹಿಳೆಯರಿಗೆ ಸ್ವತಂತ್ರ ಉದ್ದಿಮೆ ಆರಂಭಿಸಲು ಅವಕಾಶ

TNN Correspondent Posted On February 19, 2018
0


0
Shares
  • Share On Facebook
  • Tweet It

ರಿಯಾದ್: ಖಟರ್ ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾ ಕಾಲಕ್ಕೆ ತಕ್ಕಂತೆ ಬದಲಾವಣೆಗೆ ತೆರೆದುಕೊಳ್ಳುತ್ತಿದ್ದು, ಇದೀಗ ಮಹಿಳೆಯರಿಗೆ ಸಂಬಂಧಿಕರ ನೆರವು ಇಲ್ಲದೇ ಸ್ವಂತ ಉದ್ದಿಮೆ ಆರಂಭಿಸಲು ಅವಕಾಶ ನೀಡಿದೆ. ಈ ಮೂಲಕ ಮುಸ್ಲಿಂ ಧರ್ಮದಲ್ಲಿ ಮಹಿಳೆಯರಿಗೆ ವಿಧಿಸಲಾಗಿದ್ದ ಕಟ್ಟುಪಾಡುಗಳಿಗೆ ಕೊನೆ ಮೊಳೆ ಹೊಡೆಯಲು ಸೌದಿ ಅರೇಬಿಯಾ ಸರ್ಕಾರ ನಿರ್ಧರಿಸಿದೆ.

ಪುರುಷ ಪ್ರಧಾನ ರಾಷ್ಟ್ರದಲ್ಲಿ ಈ ಮಹತ್ವದ ನಿಯಮ ಜಾರಿಗೆ ತರುವ ಮೂಲಕ ಸೌದಿ ಅರೇಬಿಯಾ ಸರ್ಕಾರ ಹೊಸ ಇತಿಹಾಸ ಮೂಡಿಸಿದೆ. ಮಹಿಳೆಯರು ಇನ್ನು ಮುಂದೆ ಸ್ವಂತ ಉದ್ಯಮವನ್ನು ಪುರುಷರ ಸಹಕಾರವಿಲ್ಲದೇ ಆರಂಭಿಸಬಹುದು. ಅಲ್ಲದೇ ಆನ್ ಲೈನ್ ಮೂಲಕ ಸೇವೆ ಸಲ್ಲಿಸಬಹುದು ಎಂದು ಸೌದಿ ಸರ್ಕಾರದ ಉದ್ದಿಮೆ ಮತ್ತು ಹೂಡಿಕೆ ಇಲಾಖೆ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಈ ಮೊದಲು ಮಹಿಳೆಯರು ಉದ್ದಿಮೆ ನಡೆಸಲು ಪೋಷಕರನ್ನು ಹೊಂದಿರಬೇಕಿತ್ತು. ಪತಿ ಅಥವಾ ತಂದೆಯ ಅನುಮತಿ ಪಡೆಯಬೇಕಿತ್ತು. ಇದೀಗ ಆ ನಿಯಮಕ್ಕೆ ವಿರಾಮ ಹೇಳಲಾಗಿದ್ದು, ಸೌದಿ ಅರೇಬಿಯಾದ ಆದಾಯ ಹೆಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಮಹಿಳೆಯರಿಗೆ ಉದ್ಯೋಗ ನೀಡುವುದರ ಜತೆಗೆ, ತೈಲೋಧ್ಯಮದಲ್ಲಿ ಬದಲಾವಣೆಗಳನ್ನು ತರಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಮಹಿಳಾ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತಿದೆ.

ಸೌದಿ ಅರೇಬಿಯಾದ ರಾಜ ಮಹಮ್ಮದ್ ಬಿನ್ ಸಲ್ಮಾನ್ ಈ ಕ್ರಾಂತಿಕಾರಿಕ ನಿಲುವುಗಳನ್ನು ಕೈಗೊಂಡಿದ್ದಾರೆ. ಇತ್ತೀಚೆಗೆ ಸೌದಿಯಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಗೆ ಅನುಮತಿ ನೀಡಲಾಗಿತ್ತು. ಅಲ್ಲದೇ ಕ್ರೀಡೆಯಲ್ಲಿ ಯೋಗ ಅಳವಡಿಸಿಕೊಳ್ಳಲಾಗಿತ್ತು ಮತ್ತು ಬಹಿರಂಗವಾಗಿ ಫುಟ್ಬಾಲ್ ನೋಡಲು ಅವಕಾಶ ನೀಡಲಾಗಿತ್ತು. ಸೌದಿ ಅರೇಬಿಯಾ ಮೂಡ ನಿಯಮಗಳನ್ನು ತೊರೆದು ಇದೀಗ ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದೆ. ಅಲ್ಲದೇ ಹೊಸ ಬದಲಾವಣೆಗೆ ತೆರೆದುಕೊಂಡು ಮಹಿಳೆಯರಿಗೆ ಸ್ವಾತಂತ್ರ್ಯ ನೀಡುತ್ತಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search