• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತ್ ಪುರಸಭೆಗಳಲ್ಲೂ ಕಾಂಗ್ರೆಸ್ಸಿಗಿಲ್ಲ ಸ್ಥಾನ, ಬಿಜೆಪಿಗೆ ಭರ್ಜರಿಗೆ ಗೆಲುವು

TNN Correspondent Posted On February 20, 2018
0


0
Shares
  • Share On Facebook
  • Tweet It

ಗಾಂಧಿನಗರ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಂಗ್ರೆಸ್ ಮುಕ್ತ ಭಾರತ ಕನಸು ಕೇವಲ ರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಮಾತ್ರ ನನಸಾಗುತ್ತಿಲ್ಲ, ಬದಲಿಗೆ ಹಲವು ರಾಜ್ಯಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಕಾಂಗ್ರೆಸ್ ಮುಕ್ತವಾಗುತ್ತದೆ.

ಇದಕ್ಕೆ ಉತ್ತರ ಪ್ರದೇಶದ ಬಳಿಕ ಮೋದಿ ತವರು ರಾಜ್ಯ ಗುಜರಾತಿನಲ್ಲೇ ನಿದರ್ಶನ ಸಿಕ್ಕಿದ್ದು, ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ.

ರಾಜ್ಯದ 75 ಪುರಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ತನಗಿರುವ ಪ್ರಾಬಲ್ಯ ಉಳಿಸಿಕೊಂಡರೆ, ಯಥಾಪ್ರಕಾರ ಕಾಂಗ್ರೆ ಸೋತು ಸುಣ್ಣವಾಗಿದೆ.

ಕಾಂಗ್ರೆಸ್ ಕೇವಲ 16 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಗುಜರಾತಿನಲ್ಲಿ ತನಗೆ ಅಸ್ತಿತ್ವ ಇಲ್ಲ ಎಂಬುದನ್ನು ಈ ಚುನಾವಣೆಯಿಂದ ಕಾಂಗ್ರೆಸ್ ಕಲಿಯಬೇಕು ಎಂದೇ ವಿಶ್ಲೇಷಿಸಲಾಗುತ್ತಿದೆ.

75 ಕ್ಷೇತ್ರಗಳಲ್ಲಿ 47ರಲ್ಲಿ ಬಿಜೆಪಿ ಗೆದ್ದರೆ, 16 ಕಾಂಗ್ರೆಸ್, ಬಿಎಸ್ ಪಿ, ಎನ್ ಸಿಪಿ ತಲಾ ಒಂದು; ಸ್ವತಂತ್ರ ಅಭ್ಯರ್ಥಿಗಳು ನಾಲ್ಕರಲ್ಲಿ ಹಾಗೂ ಆರು ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಉಳಿದಿದೆ.’

ಪ್ರಸ್ತುತ ರಾಜ್ಯಾದ್ಯಂತ ಇರುವ 2060 ಪುರಸಭೆ ಕ್ಷೇತ್ರದಲ್ಲಿ 1167 ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದ್ದರೆ, ಕಾಂಗ್ರೆಸ್ ಕೇವಲ 630ರಲ್ಲಿ ಮಾತ್ರ ಪ್ರಭಾವ ಉಳಿಸಿಕೊಂಡಿದೆ. ಆದಾಗ್ಯೂ ಕಳೆದ ಡಿಸೆಂಬರ್ ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದ ಅಧಿಕಾರದ ಗದ್ದುಗೆ ಏರಿದೆ. ಈಗ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮುನ್ನಡೆ ಸಾಧಿಸಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search