• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಿಳಾ ತಾಕತ್ತು ತೋರಿದ ಅವನಿ ಚತುರ್ವೇದಿ, ಏಕಾಂಗಿಯಾಗಿ ಯುದ್ಧ ವಿಮಾನ ಹಾರಾಟ ಮಾಡಿ ಇತಿಹಾಸ ಸೃಷ್ಟಿ

TNN Correspondent Posted On February 22, 2018
0


0
Shares
  • Share On Facebook
  • Tweet It

ಅಹಮದಾಬಾದ್: ಭಾರತ ಮಹಿಳೆಯರ ತಾಕತ್ತು ಇದೀಗ ಬಾನಂಗಳದಲ್ಲಿ ಪ್ರದರ್ಶಿತವಾಗುತ್ತಿದ್ದು, ಭಾರತದ ಸೈನ್ಯದಲ್ಲಿರುವ ಮಹಿಳೆಯೊಬ್ಬರು ಮಿಗ್ 21 ಬಿಸನ್ ಯುದ್ಧ ವಿಮಾನವನ್ನು ಏಕಾಂಗಿಯಾಗಿ ಹಾರಾಟ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದಲ್ಲೇ ತನ್ನ ಸೈನಿಕ ಬಲದ ಮೂಲಕ ಗಮನ ಸೆಳೆದಿರುವ ಭಾರತೀಯ ಸೇನೆ ಇದೀಗ ಹೊಸ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಏಕಾಂಗಿಯಾಗಿ ಮಹಿಳಾ ಪೈಲಟ್‌ವೊಬ್ಬರು ಯುದ್ಧ ವಿಮಾನ ಹಾರಾಟ ನಡೆಸುವ ಮೂಲಕ ಐತಿಹಾಸಿಕ ಘಟನೆ ನಿರ್ಮಾಣ ಮಾಡಿದ್ದಾರೆ.

ಅವನಿ ಚತುರ್ವೇದಿ ಯುದ್ಧ ವಿಮಾನವನ್ನು ಏಕಾಂಗಿಯಾಗಿ ಹಾರಾಟ ನಡೆಸಿದ ಭಾರತೀಯ ಸೇನೆಯ ಮಹಿಳಾ ಪೈಲಟ್‌ ಅಧಿಕಾರಿ. ಗುಜರಾತ್‌ನ ಜಮ್‌ನಗರ್‌ನಲ್ಲಿ ಸೋಮವಾರ ಅವನಿ ಚತುರ್ವೇದಿ ಒಬ್ಬರೇ ಮಿಗ್‌-21 ಬಿಸನ್‌ ಯುದ್ಧ ವಿಮಾನ ಹಾರಾಟ ನಡೆಸಿದ್ದಾರೆ. ಭಾರತೀಯ ವಾಯುಪಡೆ ಹಾಗೂ ಭಾರತಕ್ಕೆ ಇದೊಂದು ಅನನ್ಯ ಸಾಧನೆ ಎಂದು ವಾಯುಪಡೆಯ ಕಮಾಂಡರ್‌ ಪ್ರಶಾಂತ್‌ ದೀಕ್ಷಿತ್‌ ತಿಳಿಸಿದ್ದಾರೆ.

ಮಿಗ್‌-21 ಬಿಸನ್‌ ಯುದ್ಧ ವಿಮಾನ ಹಾರಾಟ ನಡೆಸಿ ಅವನಿ ಚತುರ್ವೇದಿ ಭಾರತೀಯ ಸೈನ್ಯದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದ್ದಾರೆ. ಮಿಗ್‌-21 ಬಿಸನ್‌ ಯುದ್ಧ ವಿಮಾನ ವಿಶ್ವದಲ್ಲೇ ಅತ್ಯಧಿಕ (ಪ್ರತಿ ಗಂಟೆಗೆ 340 ಕಿ.ಮೀ.) ಲ್ಯಾಂಡಿಂಗ್‌ ಹಾಗೂ ಟೇಕ್‌ಆಫ್‌ ವೇಗ ಹೊಂದಿದೆ ಎಂದು ಪ್ರಶಾಂತ್‌ ದೀಕ್ಷಿತ್‌ ತಿಳಿಸಿದ್ದಾರೆ.
2016ರ ಜೂನ್‌ 8ರಂದು ಅವನಿ ಚತುರ್ವೇದಿ, ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಅವರನ್ನು ಭಾರತದ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್‌‌ಗಳೆಂದು ಘೋಷಿಸಲಾಗಿತ್ತು.
ಅವಾನಿ ಚತುರ್ವೇದಿ, ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಅವರ ತರಬೇತಿ ಜನವರಿಯಲ್ಲಿ ಪೂರ್ಣಗೊಂಡಿದೆ. ಶೀಘ್ರವೇ ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಕೂಡ ಯುದ್ಧ ವಿಮಾನದ ಹಾರಾಟ ನಡೆಸಲಿದ್ದಾರೆ. ಅವನಿ ಚತುರ್ವೇದಿ ಮಧ್ಯಪ್ರದೇಶದ ರೇವಾ ಜಿಲ್ಲೆಯವರಾಗಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?

  • Privacy Policy
  • Contact
© Tulunadu Infomedia.

Press enter/return to begin your search