• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಹಿಳಾ ತಾಕತ್ತು ತೋರಿದ ಅವನಿ ಚತುರ್ವೇದಿ, ಏಕಾಂಗಿಯಾಗಿ ಯುದ್ಧ ವಿಮಾನ ಹಾರಾಟ ಮಾಡಿ ಇತಿಹಾಸ ಸೃಷ್ಟಿ

TNN Correspondent Posted On February 22, 2018


  • Share On Facebook
  • Tweet It

ಅಹಮದಾಬಾದ್: ಭಾರತ ಮಹಿಳೆಯರ ತಾಕತ್ತು ಇದೀಗ ಬಾನಂಗಳದಲ್ಲಿ ಪ್ರದರ್ಶಿತವಾಗುತ್ತಿದ್ದು, ಭಾರತದ ಸೈನ್ಯದಲ್ಲಿರುವ ಮಹಿಳೆಯೊಬ್ಬರು ಮಿಗ್ 21 ಬಿಸನ್ ಯುದ್ಧ ವಿಮಾನವನ್ನು ಏಕಾಂಗಿಯಾಗಿ ಹಾರಾಟ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದಲ್ಲೇ ತನ್ನ ಸೈನಿಕ ಬಲದ ಮೂಲಕ ಗಮನ ಸೆಳೆದಿರುವ ಭಾರತೀಯ ಸೇನೆ ಇದೀಗ ಹೊಸ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಏಕಾಂಗಿಯಾಗಿ ಮಹಿಳಾ ಪೈಲಟ್‌ವೊಬ್ಬರು ಯುದ್ಧ ವಿಮಾನ ಹಾರಾಟ ನಡೆಸುವ ಮೂಲಕ ಐತಿಹಾಸಿಕ ಘಟನೆ ನಿರ್ಮಾಣ ಮಾಡಿದ್ದಾರೆ.

ಅವನಿ ಚತುರ್ವೇದಿ ಯುದ್ಧ ವಿಮಾನವನ್ನು ಏಕಾಂಗಿಯಾಗಿ ಹಾರಾಟ ನಡೆಸಿದ ಭಾರತೀಯ ಸೇನೆಯ ಮಹಿಳಾ ಪೈಲಟ್‌ ಅಧಿಕಾರಿ. ಗುಜರಾತ್‌ನ ಜಮ್‌ನಗರ್‌ನಲ್ಲಿ ಸೋಮವಾರ ಅವನಿ ಚತುರ್ವೇದಿ ಒಬ್ಬರೇ ಮಿಗ್‌-21 ಬಿಸನ್‌ ಯುದ್ಧ ವಿಮಾನ ಹಾರಾಟ ನಡೆಸಿದ್ದಾರೆ. ಭಾರತೀಯ ವಾಯುಪಡೆ ಹಾಗೂ ಭಾರತಕ್ಕೆ ಇದೊಂದು ಅನನ್ಯ ಸಾಧನೆ ಎಂದು ವಾಯುಪಡೆಯ ಕಮಾಂಡರ್‌ ಪ್ರಶಾಂತ್‌ ದೀಕ್ಷಿತ್‌ ತಿಳಿಸಿದ್ದಾರೆ.

ಮಿಗ್‌-21 ಬಿಸನ್‌ ಯುದ್ಧ ವಿಮಾನ ಹಾರಾಟ ನಡೆಸಿ ಅವನಿ ಚತುರ್ವೇದಿ ಭಾರತೀಯ ಸೈನ್ಯದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದ್ದಾರೆ. ಮಿಗ್‌-21 ಬಿಸನ್‌ ಯುದ್ಧ ವಿಮಾನ ವಿಶ್ವದಲ್ಲೇ ಅತ್ಯಧಿಕ (ಪ್ರತಿ ಗಂಟೆಗೆ 340 ಕಿ.ಮೀ.) ಲ್ಯಾಂಡಿಂಗ್‌ ಹಾಗೂ ಟೇಕ್‌ಆಫ್‌ ವೇಗ ಹೊಂದಿದೆ ಎಂದು ಪ್ರಶಾಂತ್‌ ದೀಕ್ಷಿತ್‌ ತಿಳಿಸಿದ್ದಾರೆ.
2016ರ ಜೂನ್‌ 8ರಂದು ಅವನಿ ಚತುರ್ವೇದಿ, ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಅವರನ್ನು ಭಾರತದ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್‌‌ಗಳೆಂದು ಘೋಷಿಸಲಾಗಿತ್ತು.
ಅವಾನಿ ಚತುರ್ವೇದಿ, ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಅವರ ತರಬೇತಿ ಜನವರಿಯಲ್ಲಿ ಪೂರ್ಣಗೊಂಡಿದೆ. ಶೀಘ್ರವೇ ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಕೂಡ ಯುದ್ಧ ವಿಮಾನದ ಹಾರಾಟ ನಡೆಸಲಿದ್ದಾರೆ. ಅವನಿ ಚತುರ್ವೇದಿ ಮಧ್ಯಪ್ರದೇಶದ ರೇವಾ ಜಿಲ್ಲೆಯವರಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search