• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕಿದೋ ಮುಖಭಂಗ, ಕೊನೆಗೂ ಭಯೋತ್ಪಾದನೆಗೆ ಹಣ ಪೂರೈಕೆ ಮಾಡುವ ದೇಶಗಳ ಪಟ್ಟಿಗೆ ಸೇರ್ಪಡೆ

TNN Correspondent Posted On February 24, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದ ಭಯೋತ್ಪಾದನೆ ಪೋಷಣೆಯನ್ನು ಶತಾಯ-ಗತಾಯ ಮಟ್ಟಹಾಕಲು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆ ಪೋಷಿತ ರಾಷ್ಟ್ರವೆಂದು ಬಿಂಬಿಸಲು ಪಣ ತೊಟ್ಟಿರುವ ಅಮೆರಿಕ, ತನ್ನ ಪ್ರಾಬಲ್ಯದ ಜಾಗತಿಕ ಹಣಕಾಸು ನಿಗಾಸಂಸ್ಥೆ ಮೂಲಕ ಭಯೋತ್ಪಾದನೆಗೆ ಹಣಕಾಸು ಪೂರೈಕೆ ಮಾಡುವ ಪಟ್ಟಿಗೆ ಸೇರಿಸಿದೆ.

ಹೌದು, ಇತ್ತೀಚೆಗೆ ಪಾಕಿಸ್ತಾನ ಹಲವು ಭಯೋತ್ಪಾದಕ ಸಂಘಟನೆಗಳಿಗೆ ಹಣ ಪೂರೈಕೆ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಜಾಗತಿಕ ಹಣಕಾಸು ಸಂಸ್ಥೆಯಾದ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ ಜತೆ ಲಾಬಿ ನಡೆಸಿದ ಅಮೆರಿಕ ಈಗ ಪಾಕಿಸ್ತಾನವನ್ನು ಭಯೋತ್ಪಾದನೆಗೆ ಹಣ ಪೂರೈಸುವ ರಾಷ್ಟ್ರಗಳ ಪಟ್ಟಿಗೆ ಸೇರಿಸಿದೆ.

ಇದರಿಂದ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಮುಖಭಂಗವಾಗಿದ್ದು, ಉಭಯ ರಾಷ್ಟ್ರಗಳ ನಡುವಿನ ಸಂಬಂಧದ ಮೇಲೆ ಇದು ಪರಿಣಾಮ ಬೀರಲಿದೆ ಎಂದೇ ಹೇಳಲಾಗುತ್ತಿದೆ. ಆದರೆ ಇದನ್ನು ಗಮನಿಸಿಕೊಂಡೇ ಅಮೆರಿಕ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಆದಾಗ್ಯೂ, ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗುವುದಕ್ಕೂ ಮುನ್ನವೇ ನಾವು ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈಗ ಅಧ್ಯಕ್ಷರಾದ ಬಳಿಕ ಅಂದು ನೀಡಿದ ಮಾತಿನಂತೆಯೇ ಭಯೋತ್ಪಾದಕ ಸಂಘಟನೆಗಳಿಗೆ ಹಣ ನೀಡುವ ಪಾಕಿಸ್ತಾನದ ವಿರುದ್ಧ ಸರಿಯಾಗಿಯೇ ಕ್ರಮ ಕೈಗೊಂಡಿದೆ.

ಇತ್ತೀಚೆಗೆ ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್ ನನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಿದ್ದ ಪಾಕಿಸ್ತಾನ ತಾನು ಉಗ್ರರ ಪರ ಎಂದು ಪರೋಕ್ಷವಾಗಿ ಘೋಷಿಸಿಕೊಂಡಿತ್ತು. ಆದರೆ ಇದಕ್ಕೆ ಅಮೆರಿಕ ಸರಿಯಾಗಿಯೇ ಛಾಟಿ ಬೀಸಿದ್ದು, ಪಾಕಿಸ್ತಾನದ ಮರ್ಯಾದೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಳು ಮಾಡಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search