• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಣ್ಣಾ ಹಜಾರೆ ಕನಸು ಶೀಘ್ರ ಈಡೇರಿಸಲಿದ್ದಾರಾ ಮೋದಿ?

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಗಾಂಧಿವಾದಿ ಅಣ್ಣಾಹಜಾರೆ ನೇತೃತ್ವದಲ್ಲಿ ನವ ಚಳವಳಿ ಮೂಲಕ ಸಂಚಲನ ಮೂಡಿಸಿದ ಲೋಕಪಾಲ್ ಚಳವಳಿಯ ಆಶಯಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು, ಭ್ರಷ್ಟರಿಗೆ ಬಲೆ ಹಾಕುವ ಲೋಕಪಾಲ್ ನೇಮಕದ ದಿನಗಳು ಹತ್ತಿರವಾದಂತಿವೆ.

ಐದು ವರ್ಷಗಳಿಂದ ನೆನೆಗುದಿಗೆ ಬಿದಿರುವ ಮಹತ್ವದ ಲೋಕಪಾಲ್ ನೇಮಕಕ್ಕೆ ನರೇಂದ್ರ ಮೋದಿ ಸರ್ಕಾರ ಮುಂದಾಗಿರುವ ಲಕ್ಷಣ ಗೋಚರಿಸಿವೆ. ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಲೋಕಪಾಲ ಕುರಿತು ವಿವರವಾದ ಮಾಹಿತಿ ನೀಡಿದೆ.

ಸರ್ಕಾರೇತರ ಸಂಸ್ಥೆ ‘ಕಾಮನ್ ಕಾಸ್’ ಸಲ್ಲಿಸಿದ್ದ ಅರ್ಜಿಯನ್ನು ಫೆ 23 ರಂದು ವಿಚಾರಣೆ ನಡೆಸಿದ  ಸುಪ್ರೀಂಕೋರ್ಟ್, ಕೇಂದ್ರ ಸರಕಾರಕ್ಕೆ ವಿವರಣೆ ಕೇಳಿತ್ತು. ವಿವರಣೆ ನೀಡಿರುವ ಕೇಂದ್ರ ಸರ್ಕಾರ  ಮಾರ್ಚ್ 1ರಂದು ಲೋಕಪಾಲ್ ನೇಮಕ ಸಮಿತಿಯ ಸಭೆ ನಡೆಯಲಿದೆ ಎಂದು ತಿಳಿಸಿದೆ.

ಕೇಂದ್ರ ಸರಕಾರದ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಲೋಕಪಾಲ ಸಮಿತಿಯಲ್ಲಿ, ಸಿಜೆಐ ದೀಪಕ್ ಮಿಶ್ರಾ, ಪ್ರಧಾನಿ ಮೋದಿ ಮತ್ತು ಸಂಸತ್ತಿನ ಉಭಯ ಸದನಗಳ ಪ್ರತಿಪಕ್ಷದ ನಾಯಕರುಗಳು ಸದಸ್ಯರಾಗಿದ್ದಾರೆ.

ವಿರೋಧ ಪಕ್ಷಗಳಲ್ಲಿ ನಾಯಕರ ಕೊರತೆ ಎಂಬ ಕಾರಣಕ್ಕೆ ಲೋಕಪಾಲ ನೇಮಕ ಪ್ರಕ್ರಿಯೆ ವಿಳಂಬವಾಗಬಾರದೆಂದು ಏಪ್ರಿಲ್ ನಲ್ಲೇ ಸರ್ವೋಚ್ಚ ನ್ಯಾಯಾಲಯ ಕೇಂದ್ರಕ್ಕೆ ಸೂಚನೆ ನೀಡಿತ್ತು. ಕಾಂಗ್ರೆಸ್ ಅಥವಾ ಇತರ ವಿರೋಧ ಪಕ್ಷಗಳ ನಾಯಕರು ಇಲ್ಲದಿದ್ದರೂ ಲೋಕಪಾಲ್ ನೇಮಿಸಿ ಎಂದು ನ್ಯಾಯಾಲಯ ಸೂಚನೆ ನೀಡಿತ್ತು. 2014ರಲ್ಲಿ ಮೋದಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ, ವಿರೋಧ ಪಕ್ಷದಲ್ಲಿ ನಾಯಕರೇ ಇಲ್ಲ ಎಂದು ಕೋರ್ಟಿಗೆ ಹೇಳಿತ್ತು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search