• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಣ್ಣಾ ಹಜಾರೆ ಕನಸು ಶೀಘ್ರ ಈಡೇರಿಸಲಿದ್ದಾರಾ ಮೋದಿ?

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಗಾಂಧಿವಾದಿ ಅಣ್ಣಾಹಜಾರೆ ನೇತೃತ್ವದಲ್ಲಿ ನವ ಚಳವಳಿ ಮೂಲಕ ಸಂಚಲನ ಮೂಡಿಸಿದ ಲೋಕಪಾಲ್ ಚಳವಳಿಯ ಆಶಯಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು, ಭ್ರಷ್ಟರಿಗೆ ಬಲೆ ಹಾಕುವ ಲೋಕಪಾಲ್ ನೇಮಕದ ದಿನಗಳು ಹತ್ತಿರವಾದಂತಿವೆ.

ಐದು ವರ್ಷಗಳಿಂದ ನೆನೆಗುದಿಗೆ ಬಿದಿರುವ ಮಹತ್ವದ ಲೋಕಪಾಲ್ ನೇಮಕಕ್ಕೆ ನರೇಂದ್ರ ಮೋದಿ ಸರ್ಕಾರ ಮುಂದಾಗಿರುವ ಲಕ್ಷಣ ಗೋಚರಿಸಿವೆ. ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಲೋಕಪಾಲ ಕುರಿತು ವಿವರವಾದ ಮಾಹಿತಿ ನೀಡಿದೆ.

ಸರ್ಕಾರೇತರ ಸಂಸ್ಥೆ ‘ಕಾಮನ್ ಕಾಸ್’ ಸಲ್ಲಿಸಿದ್ದ ಅರ್ಜಿಯನ್ನು ಫೆ 23 ರಂದು ವಿಚಾರಣೆ ನಡೆಸಿದ  ಸುಪ್ರೀಂಕೋರ್ಟ್, ಕೇಂದ್ರ ಸರಕಾರಕ್ಕೆ ವಿವರಣೆ ಕೇಳಿತ್ತು. ವಿವರಣೆ ನೀಡಿರುವ ಕೇಂದ್ರ ಸರ್ಕಾರ  ಮಾರ್ಚ್ 1ರಂದು ಲೋಕಪಾಲ್ ನೇಮಕ ಸಮಿತಿಯ ಸಭೆ ನಡೆಯಲಿದೆ ಎಂದು ತಿಳಿಸಿದೆ.

ಕೇಂದ್ರ ಸರಕಾರದ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಲೋಕಪಾಲ ಸಮಿತಿಯಲ್ಲಿ, ಸಿಜೆಐ ದೀಪಕ್ ಮಿಶ್ರಾ, ಪ್ರಧಾನಿ ಮೋದಿ ಮತ್ತು ಸಂಸತ್ತಿನ ಉಭಯ ಸದನಗಳ ಪ್ರತಿಪಕ್ಷದ ನಾಯಕರುಗಳು ಸದಸ್ಯರಾಗಿದ್ದಾರೆ.

ವಿರೋಧ ಪಕ್ಷಗಳಲ್ಲಿ ನಾಯಕರ ಕೊರತೆ ಎಂಬ ಕಾರಣಕ್ಕೆ ಲೋಕಪಾಲ ನೇಮಕ ಪ್ರಕ್ರಿಯೆ ವಿಳಂಬವಾಗಬಾರದೆಂದು ಏಪ್ರಿಲ್ ನಲ್ಲೇ ಸರ್ವೋಚ್ಚ ನ್ಯಾಯಾಲಯ ಕೇಂದ್ರಕ್ಕೆ ಸೂಚನೆ ನೀಡಿತ್ತು. ಕಾಂಗ್ರೆಸ್ ಅಥವಾ ಇತರ ವಿರೋಧ ಪಕ್ಷಗಳ ನಾಯಕರು ಇಲ್ಲದಿದ್ದರೂ ಲೋಕಪಾಲ್ ನೇಮಿಸಿ ಎಂದು ನ್ಯಾಯಾಲಯ ಸೂಚನೆ ನೀಡಿತ್ತು. 2014ರಲ್ಲಿ ಮೋದಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ, ವಿರೋಧ ಪಕ್ಷದಲ್ಲಿ ನಾಯಕರೇ ಇಲ್ಲ ಎಂದು ಕೋರ್ಟಿಗೆ ಹೇಳಿತ್ತು.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search