• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಕ್ಕೆ ಸನ್ಮಾರ್ಗ ತೋರಿಸುವ ಶಕ್ತಿ ಭಾರತಕ್ಕೆ ಮಾತ್ರ: ಮೋಹನ್ ಭಾಗವತ್ ಜೀ

TNN Correspondent Posted On February 26, 2018
0


0
Shares
  • Share On Facebook
  • Tweet It

ಮೀರತ್: ಭಾರತ ಮಾತ್ರ ವಿಶ್ವಕ್ಕೆ ಸನ್ಮಾನ ತೋರುವ ಶಕ್ತಿ ಹೊಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಪಶ್ಚಿಮ ಉತ್ತರ ಪ್ರದೇಶದ ಮೀರನ್ ನಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ “ರಾಷ್ಟ್ರೋದಯ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ದೇಶದ ಪ್ರತಿ ನಾಗರೀಕರು ಒಗ್ಗಟ್ಟಿನಿಂದ ಇರಬೇಕು. ಭಾರತದ ಏಕತೆಗೆ ಧಕ್ಕೆ ಉಂಟು ಮಾಡುವ ಪಿತೂರಿಗಳು ನಡೆದಿವೆ. ಅವುಗಳನ್ನು ಎದುರಿಸಲು ಪ್ರತಿ ಭಾರತೀಯ ಒಗ್ಗೂಡಬೇಕು. ಇಲ್ಲದಿದ್ದರೇ ದುಷ್ಟಶಕ್ತಿಗಳು ಭಾರತವನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೇ ಎಂದು ಹೇಳಿದರು.

ಎಲ್ಲ ಹಿಂದೂಗಳು ಒಂದೇ. ನಾವು ಹೆಮ್ಮೆಯಿಂದ ಒಂದೇ ಎಂಬ ಭಾವದಿಂದ ಇರಬೇಕು. ಹಿಂದೂಗಳ ಏಕತೆಗೆ ಶ್ರಮಿಸುವುದು ನಮ್ಮ ಕಾರ್ಯ. ಆಗ ಹಿಂದೂಗಳಿಗೆ ಉಂಟಾಗಿರುವ ತೊಡಕುಗಳನ್ನು ತಡೆಗಟ್ಟಿ ಎಲ್ಲವನ್ನೂ ಎದುರಿಸಬಹುದು. ನಾವು ಏಕತೆ ಸಾಧಿಸದಿದ್ದರೇ ದುಷ್ಟಶಕ್ತಿಗಳನ್ನು ಅದನ್ನು ಉಪಯೋಗಿಸಿಕೊಂಡು, ನಮ್ಮನ್ನು ಒಡೆದು ಆಳುತ್ತಾರೆ ಎಂದು ಹೇಳಿದರು.

ದೇಶದಲ್ಲಿ 1,70,000 ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು ದೇಶದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಡಲು ಸಿದ್ಧರಿದ್ದಾರೆ ಎಂದು ಹೇಳಿದರು.

ಮೀರತ್ ನಲ್ಲಿ ನಡೆದ ರಾಷ್ಟ್ರೋದಯ ಸಮ್ಮೇಳನದಲ್ಲಿ 3 ಲಕ್ಷಕ್ಕಿಂತ ಅಧಿಕ ಸ್ವಯಂ ಸೇವಕರು ಭಾಗವಹಿಸಿದ್ದು ವಿಶೇಷವಾಗಿತ್ತು. ಶಿಸ್ತಿಗೆ ಹೆಸರಾದ ಸಂಘಟನೆಯ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

0
Shares
  • Share On Facebook
  • Tweet It




Trending Now
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
  • Popular Posts

    • 1
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 2
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search