• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅವಳಿ ಕರುಗಳಿಗೆ ಜನ್ಮ ನೀಡಿದ ಗೋಮಾತೆಯನ್ನು ಕಂಡೀರಾ?

TNN Correspondent Posted On July 15, 2017
0


0
Shares
  • Share On Facebook
  • Tweet It

ಸುರತ್ಕಲ್ ಸಮೀಪ ಅಪರೂಪದ ಘಟನೆ

ಮಂಗಳೂರಿನ ಹೊರವಲಯದ ಸುರತ್ಕಲ್ ನಲ್ಲಿ ಅಪರೂಪದಲ್ಲಿ ಅಪರೂಪವಾದ ಒಂದು ಘಟನೆ ನಡೆದಿದೆ. ಆದರೆ ಈ ಘಟನೆ ಮಾತ್ರ ಸಕರಾತ್ಮಕ ಎನ್ನುವುದು ವಿಶೇಷ. ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ಕುಲಾಲ್ ಭವನದ ಎದುರು ಗಣಪತಿ ಮಯ್ಯ ಎನ್ನುವವರ ಮನೆಯ ಕೊಟ್ಟಿಗೆಯಲ್ಲಿ ದನ ಅವಳಿ ಕರುಗಳಿಗೆ ಜನ್ಮ ನೀಡುವ ಮೂಲಕ ಎಲ್ಲರನ್ನು ಅಚ್ಚರಿಗೆ ಕೆಡವಿದೆ.

ಸಾಮಾನ್ಯವಾಗಿ ದನ ಏಕಕಾಲಕ್ಕೆ ಎರಡು ಕರುಗಳಿಗೆ ಜನ್ಮ ಕೊಡುವುದಿಲ್ಲ. ಆದರೆ ಜುಲೈ 9 ರಂದು ಬೆಳಿಗ್ಗೆ ಗಣಪತಿ ಮಯೂರ್ ಅವರು ತಮ್ಮ ಮನೆಯ ಕೊಟ್ಟಿಗೆಗೆ ಬೆಳಿಗ್ಗೆ 6 ಗಂಟೆಗೆ ಹೋಗುವಾಗ ಅವರ ಗೋ ಗೌರಿ ಮೊದಲ ಗಂಡು ಕರುವಿಗೆ ಜನ್ಮ ನೀಡಿದ್ದಳು. ಅಲ್ಲಿಗೆ ಸುಸೂತ್ರವಾಗಿ ಹೆರಿಗೆ ಆಯಿತಲ್ಲ ಎಂದು ಮನೆಯವರೆಲ್ಲಾ ಸಂತಸ ಪಡುತ್ತಿರುವಾಗ ಮತ್ತೊಂದು ಅಚ್ಚರಿ ಅವರನ್ನು ಕಾಯುತ್ತಿತ್ತು. ಸುಮಾರು ಏಳು ಗಂಟೆಯ ಹೊತ್ತಿಗೆ ಗೌರಿ ಮತ್ತೊಂದು ಕರುವಿಗೆ ಜನ್ಮ ನೀಡಿದ್ದಳು. ಈ ವಿಸ್ಮಯದಿಂದ ಎಲ್ಲರೂ ಮೂಕವಿಸ್ಮಿತರಾಗಿ ಹೋಗಿದ್ದರು.

ಸ್ವತ: ಚುಚ್ಚುಮದ್ದು ನೀಡಿ ದನದ ಚಿಕಿತ್ಸೆ ಮಾಡಿದ ವೈದ್ಯರಿಗೂ ಆಶ್ಚರ್ಯವಾಗಿದೆ.
ಈ ಸುದ್ದಿಯನ್ನು ತುಳುನಾಡು ನ್ಯೂಸ್ ನೊಂದಿಗೆ ಹಂಚಿಕೊಂಡ ಮನೆಯವರು ಇಂತಹ ಘಟನೆ ಹಿಂದೆ ಯಾವತ್ತಾದರೂ ಆಗಿರಬಹುದು. ಆದರೆ ಇದು ಅಪರೂಪದಲ್ಲಿ ಅಪರೂಪದ ಸಂಗತಿ. ಸಾಮಾನ್ಯವಾಗಿ ಗೋವುಗಳು ಒಂದು ಕರುವಿಗೆ ಜನ್ಮಕೊಡುವುದು ಸಾಮಾನ್ಯ ಪ್ರಕ್ರಿಯೆ. ನಮ್ಮ ದನಕ್ಕೆ ಕೂಡ ಇಲ್ಲಿಯವರೆಗೆ ಐದು ಬಾರಿ ಹೆರಿಗೆ ಆಗಿದೆ. ಐದು ಬಾರಿಯೂ ಇಂತಹ ವಿಸ್ಮಯ ನಡೆದಿಲ್ಲ. ಎರಡು ಕರು ಮತ್ತು ತಾಯಿ ಆರೋಗ್ಯವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಅವಳಿ ಕರುಗಳಿಗೆ ಜನ್ಮ ನೀಡಿದ ಗೋವನ್ನು ನೋಡಲು ತುಂಬಾ ಜನ ಕುತೂಹಲಿಗರು ಮನೆಗೆ ಆಗಮಿಸುತ್ತಿದ್ದಾರೆ. ಆಸ್ಟಿನ್ ತಳಿಯ ಈ ದನ ದಿನಕ್ಕೆ ಆರು ಲೀಟರ್ ಹಾಲನ್ನು ನೀಡುತ್ತದೆ. ಐದು ಬಾರಿಯೂ ಇಂಜೆಕ್ಷನ್ ನೀಡಿಯೇ ಹೆರಿಗೆ ಮಾಡಿಸಲಾಗಿದೆ. ಈ ಬಾರಿಯೂ ಹಾಗೆ ಮಾಡಲಾಗಿತ್ತು. ಒಟ್ಟಿನಲ್ಲಿ ಎರಡು ಹೊಸ ಸದಸ್ಯರ ಆಗಮನದಿಂದ ಮಯೂರ್ ಗಣಪತಿ ಮನೆಯಲ್ಲಿ ಸಂತಸದ ವಾತಾವರಣ ಮೂಡಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search