• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿಪುರಾದಲ್ಲಿ ಮೊದಲ ಬಾರಿಗೆ ಅರಳಲಿದೆ ಕಮಲ, ಸಮೀಕ್ಷೆ ಅನ್ವಯ ಬಿಜೆಪಿ ಹಾದಿ ಸರಳ

TNN Correspondent Posted On February 27, 2018
0


0
Shares
  • Share On Facebook
  • Tweet It

ಅಗರ್ತಲಾ: ಕರ್ನಾಟಕ ಸೇರಿ ಪ್ರಸಕ್ತ ವರ್ಷದಲ್ಲಿ ನಡೆಯುವ ಎಂಟೂ ವಿಧಾನಸಭೆ ಚುನಾವಣೆಗಳಲ್ಲಿ ಕೇಸರಿ ಧ್ವಜ ಹಾರಿಸುವ ಕನಸು ಕಂಡಿರುವ ಬಿಜೆಪಿ ಕನಸಿಗೆ ಆರಂಭದಲ್ಲೇ ರೆಕ್ಕೆಪುಕ್ಕ ಬಂದಿವೆ.

ಹೌದು, ತ್ರಿಪುರಾದಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೇ ಮೊದಲ ಬಾರಿಗೆ ತ್ರಿಪುರಾದಲ್ಲಿ ಕೇಸರಿ ಧ್ವಜ ಹಾರಾಡಲಿದೆ ಎಂದು ನ್ಯೂಸ್ ಎಕ್ಸ್ ಸಂಸ್ಥೆ ನಡೆಸಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ರಾಜ್ಯದಲ್ಲಿ ಐ.ಪಿ.ಎಫ್.ಟಿ. ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಈ ಮೈತ್ರಿಕೂಟ ಸುಮಾರು 35 ರಿಂದ 45 ಸ್ಥಾನಗಳನ್ನು ಕಬಳಿಸಿದೆ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದ್ದು, ಇದೇ ಮೊದಲ ಬಾರಿಗೆ ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ರಚಿಸುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದೇ ಹೇಳಲಾಗುತ್ತಿದೆ.

ಅತ್ತ ಕಳೆದ 25 ವರ್ಷಗಳಿಂದ ತ್ರಿಪುರಾದಲ್ಲಿ ಸಿಪಿಎಂ ಸರ್ಕಾರ ಅಸ್ತಿತ್ವದಲ್ಲಿದ್ದು, ಸಮೀಕ್ಷೆ ಪ್ರಕಾರ ಸಿಪಿಎಂ ಕೇವಲ 14-23 ಸ್ಥಾನಗಳಲ್ಲಿ ಜಯ ಗಳಿಸಿ ಅದಿಕಾರ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಅತ್ತ ಆ್ಯಕ್ಸಿಸ್ ಮೈ ಇಂಡಿಯಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲೂ ತ್ರಿಪುರಾದಲ್ಲಿ ಕೇಸರಿ ಧ್ವಜ ಹಾರಾಡಲಿದ್ದು, ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ ಸುಮಾರು 50 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಿದೆ.

ಒಟ್ಟಿನಲ್ಲಿ ಪ್ರಸ್ತುತ ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಈ ಬಾರಿ ನಡೆಯುವ ಹಲವು ವಿಧಾನಸಭೆ ಚುನಾವಣೆಗಳಲ್ಲೂ ಬಿಜೆಪಿ ನಿರೀಕ್ಷಿತ ಮುನ್ನಡೆ ಸಾಧಿಸಲಿದೆ ಎಂಬುದಕ್ಕೆ ತ್ರಿಪುರಾ ಚುನಾವಣೋತ್ತರ ಸಮೀಕ್ಷೆ ಕನ್ನಡಿ ಹಿಡಿದಿವೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search