• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿಪುರಾದಲ್ಲಿ ಮೊದಲ ಬಾರಿಗೆ ಅರಳಲಿದೆ ಕಮಲ, ಸಮೀಕ್ಷೆ ಅನ್ವಯ ಬಿಜೆಪಿ ಹಾದಿ ಸರಳ

TNN Correspondent Posted On February 27, 2018


  • Share On Facebook
  • Tweet It

ಅಗರ್ತಲಾ: ಕರ್ನಾಟಕ ಸೇರಿ ಪ್ರಸಕ್ತ ವರ್ಷದಲ್ಲಿ ನಡೆಯುವ ಎಂಟೂ ವಿಧಾನಸಭೆ ಚುನಾವಣೆಗಳಲ್ಲಿ ಕೇಸರಿ ಧ್ವಜ ಹಾರಿಸುವ ಕನಸು ಕಂಡಿರುವ ಬಿಜೆಪಿ ಕನಸಿಗೆ ಆರಂಭದಲ್ಲೇ ರೆಕ್ಕೆಪುಕ್ಕ ಬಂದಿವೆ.

ಹೌದು, ತ್ರಿಪುರಾದಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೇ ಮೊದಲ ಬಾರಿಗೆ ತ್ರಿಪುರಾದಲ್ಲಿ ಕೇಸರಿ ಧ್ವಜ ಹಾರಾಡಲಿದೆ ಎಂದು ನ್ಯೂಸ್ ಎಕ್ಸ್ ಸಂಸ್ಥೆ ನಡೆಸಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ರಾಜ್ಯದಲ್ಲಿ ಐ.ಪಿ.ಎಫ್.ಟಿ. ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಈ ಮೈತ್ರಿಕೂಟ ಸುಮಾರು 35 ರಿಂದ 45 ಸ್ಥಾನಗಳನ್ನು ಕಬಳಿಸಿದೆ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದ್ದು, ಇದೇ ಮೊದಲ ಬಾರಿಗೆ ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ರಚಿಸುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದೇ ಹೇಳಲಾಗುತ್ತಿದೆ.

ಅತ್ತ ಕಳೆದ 25 ವರ್ಷಗಳಿಂದ ತ್ರಿಪುರಾದಲ್ಲಿ ಸಿಪಿಎಂ ಸರ್ಕಾರ ಅಸ್ತಿತ್ವದಲ್ಲಿದ್ದು, ಸಮೀಕ್ಷೆ ಪ್ರಕಾರ ಸಿಪಿಎಂ ಕೇವಲ 14-23 ಸ್ಥಾನಗಳಲ್ಲಿ ಜಯ ಗಳಿಸಿ ಅದಿಕಾರ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಅತ್ತ ಆ್ಯಕ್ಸಿಸ್ ಮೈ ಇಂಡಿಯಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲೂ ತ್ರಿಪುರಾದಲ್ಲಿ ಕೇಸರಿ ಧ್ವಜ ಹಾರಾಡಲಿದ್ದು, ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ ಸುಮಾರು 50 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಿದೆ.

ಒಟ್ಟಿನಲ್ಲಿ ಪ್ರಸ್ತುತ ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಈ ಬಾರಿ ನಡೆಯುವ ಹಲವು ವಿಧಾನಸಭೆ ಚುನಾವಣೆಗಳಲ್ಲೂ ಬಿಜೆಪಿ ನಿರೀಕ್ಷಿತ ಮುನ್ನಡೆ ಸಾಧಿಸಲಿದೆ ಎಂಬುದಕ್ಕೆ ತ್ರಿಪುರಾ ಚುನಾವಣೋತ್ತರ ಸಮೀಕ್ಷೆ ಕನ್ನಡಿ ಹಿಡಿದಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search