• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಮಾಡಿದರು ಮೋಡಿ, ಜಿಎಸ್ಟಿ ವಿರೋಧಿಗಳೇ ಜಿಡಿಪಿ ದರ ನೋಡಿ ಮಾತಾಡಿ

TNN Correspondent Posted On February 28, 2018


  • Share On Facebook
  • Tweet It

ದೆಹಲಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಮಹತ್ತರ ಯೋಜನೆ ಜಾರಿಗೆ ತರಲಿ, ಅದನ್ನು ಸುಖಾಸುಮ್ಮನೆ ವಿರೋಧಿಸಲೆಂದೇ ಕೆಲವು ಪಡೆಗಳು ಬಕಪಕ್ಷಿಗಳಂತೆ ಕಾಯುತ್ತವೆ.

ಅದಕ್ಕೆ ನೋಟು ನಿಷೇಧ, ಜಿಎಸ್ಟಿ ಜಾರಿ, ತ್ರಿವಳಿ ತಲಾಖ್ ರದ್ದು ಮಸೂದೆ, ಪಾಕಿಸ್ತಾನದ ಮೇಲೆ ಸರ್ಜಿಕಲ್ ದಾಳಿ… ಹೀಗೆ ಯಾವುದೇ ಪ್ರಮುಖ ನಿರ್ಧಾರ ಕೈಗೊಂಡರೂ ಮೋದಿ ಅವರನ್ನು ತೆಗಳಿಯೇ ತೆಗಳಿದ್ದಾರೆ. ಹಾಗೆಯೇ ತಮ್ಮ ತೆಗಳಿಕೆಯೇ ಸುಳ್ಳು ಎಂಬುದು ಪ್ರತಿ ಬಾರಿಯೂ ಸಾಬೀತಾಗಿದೆ.

ಅದರಲ್ಲೂ ಕೇಂದ್ರ ಸರ್ಕಾರ ಭ್ರಷ್ಟಾಚಾರ ತೊಲಗಿಸಲು ಹಾಗೂ ತೆರಿಗೆ ಪದ್ಧತಿ ಸುಧಾರಣೆ ಮಾಡಲು ನೋಟುನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದಾಗಲಂತೂ ಈ ಮೋದಿ ವಿರೋಧಿ ಪಡೆ ಆರ್ಥಿಕ ತಜ್ಞರಂತೆ, ಭಾರತದ ಆರ್ಥಿಕತೆ ಕುಸಿಯುತ್ತದೆ, ಜಿಡಿಪಿ ದರ ನೋಡಿ ಕುಸಿಯುತ್ತಿದೆ, ಮೋದಿ ಅವರು ದೇಶದ ವಿತ್ತೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡಿದರು ಎಂದು ಬೊಬ್ಬೆ ಹಾಕಿದರು.

ಆದರೆ ಏನಾಯಿತು ನೋಡಿ. ಭಾರತದ ನೋಟು ನಿಷೇಧ ಹಾಗೂ ಜಿಎಸ್ಟಿ ದೇಶದ ಆರ್ಥಿಕತೆ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿದ್ದು, ಭಾರತದ ಜಿಡಿಪಿ ಜಿಂಕೆಯಂತೆ ನೆಗೆಯುತ್ತಿದೆ. ಅದಕ್ಕೆ ಸಾಕ್ಷಿಯಾಗಿ ಇದುವರೆಗೆ ಇದ್ದ ಭಾರತದ ಜಿಡಿಪಿ ಶೇ.6.5 ರಿಂದ ಶೇ.7.2ನ್ನು ತಲುಪುವ ಮೂಲಕ ದೇಶದ ಅಭಿವೃದ್ಧಿಯ ಮಾನದಂಡವಾಗಿ ಕಾಣುತ್ತಿದೆ.

ಕಳೆದ ಸೆಪ್ಟೆಂಬರ್ ನಲ್ಲಿ ಶೇ.6.3ರಷ್ಟಿದ್ದ ಜಿಡಿಪಿ ವರ್ಷಾಂತ್ಯದ ವೇಳೆಗೆ 6.5 ತಲುಪಿತ್ತು. ಪ್ರಸಕ್ತ ವರ್ಷದಲ್ಲಿ ಈ ದರ ಶೇ.7.1 ತಲುಪಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ನಿರೀಕ್ಷೆಗೂ ಮೀರಿ ಜಿಡಿಪಿ ದರದಲ್ಲಿ ಬೆಳವಣಿಗೆಯಾಗಿದ್ದು, 7.2 ತಲುಪಿದೆ. ಆ ಮೂಲಕ ಜಿಎಸ್ಟಿ, ನೋಟು ನಿಷೇಧ ವಿರೋಧಿಸಿದವರಿಗೆ ಸರಿಯಾದ ಉತ್ತರವೇ ಸಿಕ್ಕಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search