• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಭಾರತೀಯ ಸೈನಿಕರು ಉಗ್ರರನ್ನು ಹೊಡೆದುರುಳಿಸುವ ಜತೆಗೆ ಐಸಿಸ್ ಅಸ್ತಿತ್ವಕ್ಕೂ ಅವಕಾಶ ಕೊಟ್ಟಿಲ್ಲ!

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಸಕ್ತ ಸಾಲಿನಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತದ ಮೇಲೆ ಹಲವು ಬಾರಿ ದಾಳಿ ಮಾಡಿದ್ದಾರೆ. ಪಾಕಿಸ್ತಾನಿ ಸೈನಿಕರೇ 50ಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ತಿಳಿದುಬಂದಿದೆ. ಪ್ರತಿ ಬಾರಿ ದಾಳಿ ಮಾಡಿದಾಗಲೂ ಸೈನಿಕರನ್ನೇ ಗುರಿಯಾಗಿಸಿದೆ. ಕೆಲವೊಮ್ಮೆ ಸಾರ್ವಜನಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ.

ಇದನ್ನೆಲ್ಲ ಅವಲೋಕಿಸಿದಾಗ, ಕಾಶ್ಮೀರದಲ್ಲಿ ಪದೇಪದೆ ನಡೆಯುತ್ತಿರುವ ದಾಳಿಯನ್ನು ಗಮನಿಸಿದಾಗ, ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಸಂಘಟನೆ ನೆಲೆಯೂರಿದೆಯಾ? ಐಸಿಎಸ್ ಉಗ್ರರು ಜಮ್ಮು-ಕಾಶ್ಮೀರದ ಕಾಡುಗಳಲ್ಲಿ ಅವಿತಿದ್ದಾರಾ? ಈ ಸಂಘಟನೆ ಕಾಶ್ಮೀರದ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಜತೆ ಕೈ ಜೋಡಿಸಿದೆಯಾ ಎಂಬ ಕುರಿತು ಅನುಮಾನಗಳು ಮೂಡಿದ್ದವು. ಚರ್ಚೆಗಳು ಶುರುವಾಗಿದ್ದವು.

ಆದರೆ ನಮ್ಮ ಸೈನಿಕರು ಪಾಕಿಸ್ತಾನಿ ಸೈನಿಕರ ಗುಂಡಿಗೆ ಪ್ರತಿ ಗುಂಡು ಹಾರಿಸಿ, ಉಗ್ರರ ದಾಳಿಗೆ ಪ್ರತ್ಯುತ್ತರ ನೀಡಿ, ದಿಟ್ಟ ಹೋರಾಟ ನಡೆಸುವ ಜತೆಗೆ, ಐಸಿಸ್ಸಿನ ಲವಲೇಶವೂ ಜಮ್ಮು-ಕಾಶ್ಮೀರವನ್ನು ಪ್ರವೇಶಿಸಲು ಬಿಟ್ಟಿಲ್ಲ ಎಂಬುದು ಖಚಿತವಾಗಿದೆ. ಆ ಮೂಲಕ ನಮ್ಮ ಯೋಧರು ದಕ್ಷ ಹೋರಾಟದ ಜತೆಗೆ, ಮುನ್ನೆಚ್ಚರಿಕೆಯಿಂದಲೂ ಇದ್ದಾರೆ ಎಂಬುದು ಸಾಬೀತಾಗಿದೆ.

ಹೌದು, ಈ ಕುರಿತು ಕೇಂದ್ರ ಗೃಹ ಸಚಿವಾಲಯವೇ ಸ್ಪಷ್ಟನೆ ನೀಡಿದ್ದು, ಜಮ್ಮು-ಕಾಶ್ಮೀರದಲ್ಲಿ ಐಸಿಎಸ್ ಉಗ್ರ ಸಂಘಟನೆಯ ಯಾವುದೇ ಉಗ್ರರು, ಐಸಿಸ್ ಘಟಕದ ಅಸ್ತಿತ್ವ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಫಾರೂಕ್ ಅಹ್ಮದ್ ಯಾಟೂ ಎಂಬುವವರನ್ನು ಉಗ್ರರು ಭಾನುವಾರ ಹತ್ಯೆ ಮಾಡಿದ ಬಳಿಕ, ಕಣಿವೆ ರಾಜ್ಯದಲ್ಲಿ ಐಸಿಸ್ ಸಂಘಟನೆ ನೆಲೆಯೂರಿದೆ ಎಂಬ ಅನುಮಾನ ಬಲವಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವಾಲಯ ಮಾಹಿತಿ ಸಂಗ್ರಹಿಸಿದ್ದು, ಐಸಿಎಸ್ ಅಸ್ತಿತ್ವದಲ್ಲಿಲ್ಲ ಎಂದು ಸ್ಪಷ್ಟಪಡಿಸಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search