• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶಾದ್ಯಂತ ಏಕಕಾಲದಲ್ಲೇ ಚುನಾವಣೆ ನಡೆಸಲು ಮೋದಿ, ಅಮಿತ್ ಷಾ ಮಾಡಿರುವ ಯೋಜನೆ ಏನು ಗೊತ್ತಾ?

TNN Correspondent Posted On February 28, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರಚನೆಯಾದ ಮೇಲೆ ಭಾರತದಲ್ಲಿ ಮಹತ್ತರ ಹಾಗೂ ದಿಟ್ಟ ಬದಲಾವಣೆಗಳಾಗುತ್ತಿರುವ ಬೆನ್ನಲ್ಲೇ, ನರೇಂದ್ರ ಮೋದಿ ಹಾಗೂ ಅಮಿತ್ ಷಾ ಜೋಡಿ, ಮತ್ತೊಂದು ಮಹತ್ವದ ಬದಲಾವಣೆಗೆ ಸಜ್ಜಾಗಿದೆ ಎಂದು ತಿಳಿದುಬಂದಿದೆ.

ಹೌದು, ದೇಶದಲ್ಲಿ ಒಂದು ದೇಶ, ಒಂದು ಚುನಾವಣೆ ಎಂಬ ಕಲ್ಪನೆ ಮೂಡಿಸಿ, ಅದನ್ನು ಸಾಕಾರಗೊಳಿಸಲು ಈ ಜೋಡಿ ಮುಂದಾಗಿದ್ದು, ಈ ಕುರಿತು ಚರ್ಚಿಸಲು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ನಡೆಸುವ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆ ಮೇಲೂ ಮೋದಿ-ಶಾ ಕಣ್ಣಿಟ್ಟಿದ್ದು, ಗೆಲುವಿಗೆ ತಂತ್ರ ರೂಪಿಸುವ ಕುರಿತು ಮುಖ್ಯಮಂತ್ರಿಗಳ ಅಭಿಪ್ರಾಯ ಸಂಗ್ರಹಿಸುತ್ತದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಜನರ ಕಲ್ಯಾಣಕ್ಕಾಗಿ ಯಾವ ಯೋಜನೆ ಜಾರಿಗೊಳಿಸಬೇಕು, ಬಡವರ ಪರ ಆಡಳಿತ ನೀಡಲು ಯಾವ ಯೋಜನೆ ಸಹಕಾರಿ? ಅಭಿವೃದ್ಧಿಗಾಗಿ ಏನು ಮಾಡಬೇಕು? ಇದುವರೆಗೂ ಜಾರಿಗೆ ತಂದ ಯೋಜನೆಗಳು ಎಷ್ಟರಮಟ್ಟಿಗೆ ಪರಿಣಾಮ ಬೀರಿವೆ? ಆಗಬೇಕಾದ ಸುಧಾರಣೆಗಳಾವವು? ಎಂಬುದರ ಕುರಿತು ಚರ್ಚೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ಈ ಎಲ್ಲ ಅಂಶಗಳಲ್ಲಿ ಮಹತ್ತರವಾಗಿ ದೇಶಾದ್ಯಂತ ಏಕಕಾಲದಲ್ಲೇ ಚುನಾವಣೆ ನಡೆಸುವ ಕುರಿತು ಚರ್ಚೆ ಮಾಡಲಾಗುತ್ತದೆ ಎಂಬ ಅಂಶ ಗಮನ ಸೆಳೆದಿದ್ದು, ಅದಕ್ಕಾಗಿ ಸರ್ಕಾರ ಯಾವ ನಡೆ ಇಡುತ್ತದೆ? ಹೇಗೆ ಸಿದ್ಧತೆ ಮಾಡುತ್ತದೆ ಎಂಬುದು ಕುತೂಹಲ ಕೆರಳಿಸಿದೆ. ಅಷ್ಟಕ್ಕೂ ಮೋದಿ ಎಂದರೇನೆ ಕುತೂಹಲ ಅಲ್ಲವೇ?

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search