• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿಗೆ ದಾರಿ ನೀಡಿ, ಸೌಹಾರ್ದತೆ ಮೆರೆದ ಹಿಂದೂಗಳು

TNN Correspondent Posted On March 1, 2018
0


0
Shares
  • Share On Facebook
  • Tweet It

ಫೈಜಬಾದ್: ಇದುವರೆಗೆ ಕೇವಲ ಹಿಂದೂ ಮುಸ್ಲಿಂ ಕೋಮು ಗಲಭೆಗೆ ಪ್ರಚಾರದಲ್ಲಿರುತ್ತಿದ್ದ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೇರಿದ ನಂತರ ಹೊಸ ಶಕೆ ಆರಂಭವಾಗಿದೆ. ಹಿಂದೂ, ಮುಸ್ಲಿಂ ಎನ್ನದೇ ಕಠಿಣ ನಿರ್ಧಾರಗಳ ಮೂಲಕ ಕ್ರಿಮಿನಲ್ ಗಳ ಹೆಡೆಮುರಿ ಕಟ್ಟಿರುವ ಯೋಗಿ ಸರ್ಕಾರ, ಶಾಂತಿ, ಸೌಹಾರ್ದತೆಯನ್ನು ಸಾರುತ್ತಿದೆ. ಇನ್ನು ವಿಶ್ವದಲ್ಲೇ ಶಾಂತಿ, ಸೌಹಾರ್ದತೆ, ಸಹಕಾರ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಹಿಂದೂಗಳು ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ಭೂಮಿ ನೀಡುವ ಮೂಲಕ ಸೌಹಾರ್ದತೆಯ ವಾತಾವರಣ ಸೃಷ್ಟಿಗೆ ಕಾರಣವಾಗಿದ್ದಾರೆ.

ಉತ್ತರ ಪ್ರದೇಶದ ಸಂತ ಕಬೀರ್‌ ನಗರ ಜಿಲ್ಲೆಯಲ್ಲಿ ಮಸೀದಿಗೆ ಹೋಗಲು ದಾರಿ ನಿರ್ಮಾಣಕ್ಕೆ ಹಿಂದೂಗಳು ಭೂಮಿ ನೀಡಿದ್ದಾರೆ. ಹಿಂದೂಗಳು ಭೂಮಿ ನೀಡಿದ್ದರಿಂದ ಮುಸ್ಲಿಮರು ನಮಾಜ್‌ಗೆಂದು ಮಸೀದಿಗೆ ಹೋಗುವುದು ಸುಲಭವಾಗಲಿದೆ.

ಮಸೀದಿಗೆ ಹೋಗಲು ಮುಸ್ಲಿಮರು ಸಂಕಷ್ಟ ಪಡುತ್ತಿದ್ದರು. ಮುಸ್ಲಿಮರ ಸಮಸ್ಯೆಗೆ ಪರಿಹಾರ ಒದಗಿಸುವ ದೃಷ್ಟಿಯಿಂದ  ಹಿಂದೂಗಳು ಭೂಮಿ ನೀಡಿದ್ದಾರೆ. ಸಂತಕಬೀರ್ ಗ್ರಾಮದ ರಾಜೇಂದ್ರ ಸಿಂಗ್‌, ಕಪಿಲ್‌ ಸಿಂಗ್‌, ಮಹೇಂದ್ರ ಸಿಂಗ್‌ ಮತ್ತು ನಕ್ಚೆಂದ್‌ ಸಿಂಗ್‌ ಅವರು ಮಸೀದಿಗೆ ಹೋಗಲು ರಸ್ತೆ ನಿರ್ಮಾಣಕ್ಕೆ ನೂರು ಮೀಟರ್ ಭೂಮಿ ದಾನ ನೀಡಿದ್ದಾರೆ ಎಂದು ಗ್ರಾಮದ ಮುಖಂಡೆ ಊರ್ಮಿಳಾ ದೇವಿ ತಿಳಿಸಿದ್ದಾರೆ.

ತವೈಪರ್‌ನಲ್ಲಿ ಮುಸ್ಲಿಮರು ನಮಾಜ್‌ಗೆ ಹೋಗುತ್ತಿದ್ದ ಮಸೀದಿ ಪಕ್ಕ ಸದಾ ಕೊಳಚೆ ನೀರು ತುಂಬಿಕೊಂಡಿರುತ್ತದೆ. 1963 ರಲ್ಲಿ ನಿರ್ಮಾಣವಾದ ಮಸೀದಿ ಸುತ್ತ ಪ್ರದೇಶದಲ್ಲಿ ಜನ ಸಂಖ್ಯೆ ಹೆಚ್ಚಿದ್ದು, ಮಸೀದಿಗೆ ಹೋಗುವ ಸಮೀಪದ ದಾರಿಯಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ಇದೀಗ ಹಿಂದೂಗಳು ಭೂಮಿ ನೀಡುವ ಮೂಲಕ ಹಿಂದೂಗಳು ಉದಾರತೆ ಮೆರೆದಿದ್ದು, ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search