• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮೆಚ್ಚಿದ ಆ ಬಾಲಕಿಯ ಕಾರ್ಯ ಒಂದು ಸಾರ್ಥಕ ಕೆಲಸಕ್ಕೆ ನಾಂದಿ ಹಾಡಿತಲ್ಲ ಎಂಬುದೇ ಸ್ಫೂರ್ತಿದಾಯಕ!

TNN Correspondent Posted On March 7, 2018
0


0
Shares
  • Share On Facebook
  • Tweet It

ಬೆಂಗಳೂರು: ಒಬ್ಬ ನಾಗರಿಕ, ಒಬ್ಬ ನಾಯಕ ಹೇಗಿರಬೇಕು ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇರೆಲ್ಲೂ ಸಿಗಲಿಕ್ಕಿಲ್ಲ. ಹಾಗೆಯೇ ಒಂದು ಉತ್ತಮ ಕೆಲಸ ಹೇಗೆ ಜನಮನ್ನಣೆ ಪಡೆಯುತ್ತದೆ, ಹೇಗೆ ಬದಲಾವಣೆಗೆ ಮುನ್ನುಡಿ ಬರೆಯುತ್ತದೆ ಎಂಬುದಕ್ಕೆ ಈ ಘಟನೆಯೇ ಉದಾಹರಣೆ.

ಆಕೆಯ ಹೆಸರು ಮಲ್ಲಮ್ಮ. ಕೇವಲ 15 ವರ್ಷದ ಇ ಬಾಲಕಿ ಪ್ರಧಾನಿ ಮೋದಿ ಜಾರಿಗೊಳಿಸಿದ ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರಣೆಗೊಂಡು ದೂರದ ಕೊಪ್ಪಳದ ದಾನಾಪುರ ಎಂಬ ಕುಗ್ರಾಮದ ತನ್ನ ಮನೆಯಲ್ಲಿ ಶೌಚಾಲಯ ಕಟ್ಟಿಸಬೇಕು ಎಂದು ಮೂರು ದಿನ ಹಟ ಹಿಡಿದು, ಉಪವಾಸ ಬಿದ್ದು, ಆ ಕಾರ್ಯದಲ್ಲಿ ಯಶಸ್ವಿಯಾಗಿದ್ದಳು.

ಇದನ್ನು ಮೆಚ್ಚಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಂತಹ ಬಾಲಕಿಯರು ನಮಗೆಲ್ಲ ಸ್ಫೂರ್ತಿ ಎಂದಿದ್ದರು.

ಈಗ ಮಲ್ಲಮ್ಮಳ ಈ ಕಾರ್ಯ ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ದಾರಿಯಾಗಿದ್ದು, “ಸಂಡಾಸ್’’ ಎಂಬ ಚಿತ್ರ ತಂಡ ಈಗ ದಾನಾಪುರದಲ್ಲಿ ನೂರು ಶೌಚಾಲಯ ಕಟ್ಟಿಸಲು ಮುಂದಾಗಿದೆ. ಅಷ್ಟೇ ಅಲ್ಲ, ಚಿತ್ರದಲ್ಲಿ ಬಾಲನಟಿಯಾಗಿ ನಟಿಸುತ್ತಿರುವ ಪ್ರತ್ಯಕ್ಷಾ ಎಂಬ ಬಾಲಕಿ ತನಗೆ ಚಿತ್ರದಿಂದ ಬರುವ ಒಂದು ಲಕ್ಷ ರೂಪಾಯಿ ಸಂಭಾವನೆಯನ್ನು ಗ್ರಾಮದಲ್ಲಿ ಶೌಚಾಲಯ ಕಟ್ಟಿಸಲು ನೀಡಿ ಮಾನವೀಯತೆ ಹಾಗೂ ಮಾದರಿ ಕೆಲಸ ಮಾಡಲು ಮುಂದಾಗಿದ್ದಾಳೆ.

ಒಟ್ಟಿನಲ್ಲಿ ಪೊರಕೆ ಹಿಡಿದು ತಾವೇ ರಸ್ತೆ ಶುಚಿಗೊಳಿಸುವ ಮೂಲಕ ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿದ್ದ ಮೋದಿ ಅವರ ಒಂದು ನಡೆ ದೇಶಾದ್ಯಂತ ಅಭಿಯಾನವಾಗಿ ಮಾರ್ಪಟ್ಟಿದ್ದು, ಮಲ್ಲಮ್ಮ, ಪ್ರತ್ಯಕ್ಷಾ ಅವರಂತಹವರ ಸಂಖ್ಯೆ ನೂರ್ಮಡಿಯಾಗಲಿ ಎಂಬುದೇ ನಮ್ಮ ಆಶಯ.

0
Shares
  • Share On Facebook
  • Tweet It




Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search