• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪತ್ರಕರ್ತರಲ್ಲೂ ಅಲ್ಪಸಂಖ್ಯಾತರನ್ನು ಹುಡುಕಿ, ಅವರನ್ನು ಒಡೆಯುವ ಸಿದ್ದರಾಮಯ್ಯನವರೇ ನಿಮಗೆ ಜ್ಞಾನ ಇಲ್ಲವೇ?

ವಿಶಾಲ್ ಗೌಡ ಕುಶಾಲನಗರ Posted On March 7, 2018


  • Share On Facebook
  • Tweet It

ಈ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾಕೆ ಹೀಗೆ? ಇವರಿಗೆ ಏನಾಗಿದೆ? ಸಮಾಜವಾದದ ತಕ್ಕಡಿ ಹಿಡಿದು ಅಧಿಕಾರಕ್ಕೆ ಬಂದ ಇವರು, ಆ ತಕ್ಕಡಿಯ ಒಂದು ಬದಿ ಅಲ್ಪಸಂಖ್ಯಾತರನ್ನೇ ಏಕೆ ಜಾಸ್ತಿ ಇಟ್ಟು ತೂಗಬೇಕು? ಯಾಕೆ ಇಂತಹ ಕೀಳು ರಾಜಕಾರಣ ಮಾಡಬೇಕು?

ಇಂತಹ ಕುತ್ಸಿತ ಮನಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರಂಭದಿಂದಲೇ ಮುನ್ನುಡಿ ಬರೆದರು. ಮುಸ್ಲಿಂ ಸಮುದಾಯದವರಿಗಷ್ಟೇ ಶಾದಿಭಾಗ್ಯ ತಂದು ಟೀಕೆಗೊಳಗಾದರು. ಒಂದೇ ಸಮುದಾಯ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಮಕ್ಕಳಲ್ಲೂ ಜಾತಿಯ ವಿಷ ಬೀಜ ಬಿತ್ತಲು ಮುಂದಾದರು.

ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಲ್ಲೂ ಜಾತಿ, ಅಲ್ಪಸಂಖ್ಯಾತರನ್ನು ಹುಡುಕಿ ಸೌಲಭ್ಯ ನೀಡಲು ಮುಂದಾಗಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯನವರು, ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೂಲಕ ಅಲ್ಪಸಂಖ್ಯಾತರ ಒಡೆತನದ ಮಾಧ್ಯಮ ಸಂಸ್ಥೆ ಹಾಗೂ ಪತ್ರಕರ್ತರಿಗೆ ಚುನಾವಣೆ ಹೊಸ್ತಿಲಲ್ಲಿ ಭಾರಿ ಉಡುಗೊರೆ ನೀಡಲು ಹೊರಟಿದ್ದಾರೆ.

ಅಲ್ಪಸಂಖ್ಯಾತರ ಒಡೆತನದ ಮಾಧ್ಯಮ ಸಂಸ್ಥೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು, ಹಾಗೂ ಈ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಲ್ಯಾಪ್ ಟಾಪ್, ಕ್ಯಾಮೆರಾ ಸೇರಿ ಮಾಧ್ಯಮ ಕಿಟ್ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ಸಿದ್ದರಾಮಯ್ಯನವರೇ ಇಂತಹ ಒನ್ ವೇ ಯೋಜನೆಗಳನ್ನು ಜಾರಿಗೆ ತಂದು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಯಾಕೆ ಹೀಗೆ ಒಂದೇ ಸಮುದಾಯಕ್ಕೆ ಸೌಲಭ್ಯ ನೀಡಿ, ನಿಮ್ಮ ಪರ ಕೆಲಸ ಮಾಡಿ ಎಂದು ಪರೋಕ್ಷವಾಗಿ ಆಮಿಷ ಒಡ್ಡುತ್ತಿದ್ದೀರಿ? ಯಾಕೆ ಪತ್ರಕರ್ತರನ್ನೂ ನಿಮ್ಮ ಬುಟ್ಟಿಗೆ ಹಾಕಿಕೊಳ್ಳಲು ಮುಂದಾಗಿದ್ದೀರಿ? ಹೀಗೆ ಮಾಡುವ ನೀವೆಂತಹ ಜನನಾಯಕ ಸ್ವಾಮಿ?

ಖಂಡಿತ, ನೀವು ಒಬ್ಬ ಮುಖ್ಯಮಂತ್ರಿಯಾಗಿ ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ನೀಡುವುದು ಒಳ್ಳೆಯದು. ಕಳೆದ ಬಜೆಟ್ಟಿನಲ್ಲಿ ಪತ್ರಕರ್ತರಿಗೆ ವಿಮಾ ಸೌಲಭ್ಯ ನೀಡಿರುವುದು ಸಹ ಸ್ವಾಗತಾರ್ಹವೇ? ಆದರೆ ಇದೆಂತಹ ಓಲೈಕೆಯ ಯೋಜನೆ ಸ್ವಾಮಿ?

ಯಾವ ಪತ್ರಿಕಾ ಸಂಸ್ಥೆಯೂ ಜಾಹೀರಾತು ಪಡೆಯದಷ್ಟು ಸಾಮರ್ಥ್ಯ ಹೊಂದಿಲ್ಲ ಎಂದಲ್ಲ. ಯಾವ ಪತ್ರಕರ್ತರೂ ವರದಿ ಮಾಡಲು ಕ್ಯಾಮೆರಾ, ಲ್ಯಾಪ್ ಟಾಪ್, ಕಂಪ್ಯೂಟರ್ ಹೊಂದಿಲ್ಲ ಎಂದಲ್ಲ. ಹೀಗಿರುವಾಗ ಈಗ ಇರುವ ಸೌಲಭ್ಯಗಳನ್ನೇ ನೀಡಿ ನೀವು ಏನು ಸಾಧಿಸಲು ಹೊರಟಿದ್ದೀರಿ?

ನೀವೇನೋ ಅಹಿಂದ ಪರ ಮುಖ್ಯಮಂತ್ರಿ ಎಂದು ಈಗ ನಾನೂ ಹಿಂದೂ ಎಂದು ಚುನಾವಣೆ ಹಿನ್ನೆಲೆಯಲ್ಲಿ ಮಾತನಾಡುತ್ತಿದ್ದೀರಿ. ಆದರೆ ನಿಮ್ಮ ಅಜೆಂಡಾಯುತ ಯೋಜನೆ ಜಾರಿಯಿಂದ ಪತ್ರಕರ್ತರು ನಿಮ್ಮ ಪರ ಕೆಲಸ ಮಾಡಬೇಕೇ? ನಿಮ್ಮನ್ನು ಹಾಡಿ ಹೊಗಳಬೇಕೆ? ಅದಕ್ಕಾಗಿಯೇ ಈ ಅಲ್ಪಸಂಖ್ಯಾತ ಪತ್ರಕರ್ತರ ಪರವಾಗಿ ಯೋಜನೆ ಜಾರಿಗೊಳಸಿದ್ದೀರಾ? ನಿಮಗೆ ಬುದ್ಧಿ, ಜ್ಞಾನ ಎರಡೂ ಇಲ್ಲವೇ ಸಿಎಂ ಅಥವಾ ನಿಮ್ಮ ಒಳಮರ್ಮ ಅರಿಯದಷ್ಟು ದಡ್ಡರೇ ಜನ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
ವಿಶಾಲ್ ಗೌಡ ಕುಶಾಲನಗರ May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
ವಿಶಾಲ್ ಗೌಡ ಕುಶಾಲನಗರ May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search