• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಹಿಂದೂ ಈದ್ ಆಚರಿಸುವುದಿಲ್ಲ ಎಂದು ವಿಧಾನಸೌಧದಲ್ಲೇ ಘರ್ಜಿಸಿದ ಯೋಗಿ ಆದಿತ್ಯನಾಥ್

TNN Correspondent Posted On March 7, 2018
0


0
Shares
  • Share On Facebook
  • Tweet It

ಲಖನೌ: ಹೋಳಿ ಹಬ್ಬದ ಸಂಭ್ರಮದ ವೇಳೆ ಪತ್ರಕರ್ತರೊಬ್ಬರು ‘ನೀವು ಕೇವಲ ಹಿಂದೂ ಹಬ್ಬಗಳನ್ನು ಮಾತ್ರ ಆಚರಿಸುತ್ತೀರಿ. ಈದ್ ಎಲ್ಲಿ ಆಚರಿಸುತ್ತೀರಿ ಎಂಬ ಪ್ರಶ್ನೆಗೆ ‘ನಾನು ಹಿಂದೂ ಈದ್ ಆಚರಿಸುವುದಿಲ್ಲ ಎಂದು ಖಡಕ್ ಉತ್ತರ ನೀಡಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಮತ್ತೊಮ್ಮೆ ವಿಧಾನಸೌಧದಲ್ಲೇ ಆ ಮಾತುಗಳನ್ನು ಪುನರ್ ಉಚ್ಚರಿಸುವ ಮೂಲಕ ತಮ್ಮ ನೇರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ವಿರೋಧಿಸಿ ಪ್ರತಿಪಕ್ಷಗಳು ವಿಧಾನಸೌಧದಲ್ಲಿ ಪ್ರಶ್ನಿಸಿದಾಗ ‘ಅದೇ ದಾಟಿಯಲ್ಲಿ ಉತ್ತರ ನೀಡುವ ಮೂಲಕ ತಮ್ಮ ಧರ್ಮನಿಷ್ಠೆಯನ್ನು ಮೆರೆದಿದ್ದಾರೆ. ಅಲ್ಲದೇ ಭವ್ಯ ಸಂಸ್ಕೃತಿ ಹೊಂದಿರುವ ಹಿಂದೂ ಧರ್ಮದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಚುನಾವಣೆಗಾಗಿ ಜನಿವಾರ ಧರಿಸುವ ಹಿಂದೂ ನಾನಲ್ಲ. ನಾನು ಧರ್ಮನಿಷ್ಠ ಹಿಂದೂ. ನನಗೆ ಡೋಂಗಿ ಮಾಡಲು ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೂ ಟಾಂಗ್ ನೀಡಿದ್ದಾರೆ. ನಾನು ಅವಕಾಶವಾದಿಯಲ್ಲ.  ಒಮ್ಮೆ ಟೋಪಿ ಧರಿಸಿ, ಮತ್ತೊಮ್ಮೆ ಜನಿವಾರ ಧರಿಸಿ ನಾಟಕವಾಡುವುದು ನನಗೆ ತಿಳಿದಿಲ್ಲ. ನನ್ನ ಧರ್ಮ ಹಿಂದೂ, ನಾನು ಅದರ ಹಬ್ಬಗಳನ್ನು ಮಾತ್ರ ಆಚರಿಸುತ್ತೇನೆ ಎಂಬ ಸ್ಪಷ್ಟ ಮಾತುಗಳನ್ನಾಡುವ ಮೂಲಕ ಪ್ರತಿಪಕ್ಷಗಳ ಬಾಯಿ ಮುಚ್ಚಿಸಿದ್ದಾರೆ.

ನಾನು ಧರ್ಮದ ರೀತಿ ರಿವಾಜುಗಳನ್ನು ಹೆಮ್ಮೆಯಿಂದ ಆಚರಿಸುತ್ತೇನೆ. ಅಲ್ಲದೇ ಇತರೆ ಧರ್ಮಗಳವರ ಆಚರಣೆಗಳನ್ನು ಗೌರವಿಸುತ್ತೇನೆ. ಆದರೆ ನಾನು ಇತರೆ ಧರ್ಮಗಳ ಹಬ್ಬಗಳನ್ನು ಆಚರಿಸುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಸ್ಪಷ್ಟ ನಿಲುವನ್ನು ಜಗತ್ತಿಗೆ ಸಾರಿದ್ದಾರೆ.

ವಿಧಾನಸೌಧದಲ್ಲಿ ಮಾತಾಡುತ್ತಾ ‘ಹೋಳಿ ಹಬ್ಬದ ವೇಳೆ ನಮಾಜ್ ಮಾಡುವ ವೇಳೆಯನ್ನು ಬದಲಾಯಿಸಿ ಹೋಳಿ ಆಚರಿಸಲು ಅನುಕೂಲ ಕಲ್ಪಿಸಿದ ಮುಸ್ಲಿಂ ಧರ್ಮಗುರುಗಳು, ಕೋಮು ಸೌಹಾರ್ದತೆಯ ಸಂದೇಶ ಸಾರಿದಕ್ಕೆ ಧನ್ಯವಾದಗಳನ್ನು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search