• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕೆ ಒತ್ತು, ಶತಾಬ್ದಿ ರೈಲಿನಲ್ಲಿ ಸಂಪೂರ್ಣ ಮಹಿಳಾ ಸಿಬ್ಬಂದಿ ನೇಮಕ

TNN Correspondent Posted On March 8, 2018
0


0
Shares
  • Share On Facebook
  • Tweet It

ಮುಂಬೈ: ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಸರ್ಕಾರ ಇದೀಗ ಹೊಸ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮಹಿಳೆಯರಿಗೆ ನಾನಾ ಕ್ಷೇತ್ರದಲ್ಲಿ ನೂತನ ಅವಕಾಶವನ್ನು ನೀಡಿದೆ. ರೈಲ್ವೆ ಇಲಾಖೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಇಟ್ಟಿದ್ದು, ಮುಂಬೈ ಅಹಮದಾಬಾದ್ ಶತಾಬ್ದಿ ಎಕ್ಸಪ್ರೇಸ್ ರೈಲಿನಲ್ಲಿ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಶತಾಬ್ದಿ ಎಕ್ಸಪ್ರೆಸ್ ರೈಲಿನಲ್ಲಿ ಮಹಿಳಾ ಸಿಬ್ಬಂದಿ ಕಾರ್ಯ ನಿರ್ವಹಿಸಲು ಆರಂಭಿಸಿದ್ದಾರೆ. ಭಾರತದ ರೈಲ್ವೆ ಇಲಾಖೆ ಇತಿಹಾಸದಲ್ಲಿ ಇದು ನೂತನ ಪ್ರಯೋಗವಾಗಿದೆ. ಹೆಚ್ಚಾಗಿ ಪ್ಲಾಟ್ ಫಾರ್ಮ್ ಟಿಕೆಟ್ ಪರಿಶೀಲನೆಗೆ ಸಿಮೀತವಾಗಿದ್ದ ಮಹಿಳೆ ಟಿಕೆಟ್ ಪರಿಶೀಲಕರನ್ನು ಇದೀಗ ರೈಲ್ವೆ ಟಿಕೆಟ್ ಪರಿಶೀಲಕರಾಗಿ ನೇಮಿಸಲಾಗಿದೆ ಎನ್ನುತ್ತಾರೆ ಪಶ್ಚಿಮ ವಲಯ ರೈಲ್ವೆ ಕಮಿಷನರ್ ಆರತಿ ಸಿಂಗ್ ಪರಿಹರ್.

ಈ ಕುರಿತು ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ರೈಲ್ವೆ ಇಲಾಖೆ ನಿರ್ದೇಶಕ ವೇದ್ ಪ್ರಕಾಶ ‘ಈ ನಿರ್ಧಾರ ಮಹಿಳಾ ಸಬಲೀಕರಣದತ್ತ ಒಂದು ದೃಢ ಹೆಜ್ಜೆ. ಇದುವರೆಗೆ ಶತಾಬ್ದಿ ಎಕ್ಸಪ್ರೆಸ್ ರೈಲಿನಲ್ಲಿ ಕೇವಲ ಇಬ್ಬರು ಮಹಿಳಾ ಟಿಕೆಟ್ ಪರಿಶೀಲಕರಿದ್ದರು. ಇದೀಗ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಶತಾಬ್ದಿ ರೈಲು ಮುಂಬೈ ಅಹಮದಾಬಾದ್ ಮಧ್ಯೆ 492 ಕಿಮೀ ಸಂಚರಿಸುತ್ತದೆ. ಪ್ರತಿ ಮಹಿಳಾ ಸಿಬ್ಬಂದಿ 6 ಗಂಟೆ 20 ನಿಮಿಷ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಚೈಪುರ ರೈಲು ನಿಲ್ದಾಣವನ್ನು ಸಂಪೂರ್ಣ ಮಹಿಳಾ ಸಿಬ್ಬಂದಿ ನೇಮಿಸುವ ಮೂಲಕ ಮಹಿಳೆಯರಿಗೆ ಭರ್ಜರಿ ಕೊಡುಗೆ ಕೇಂದ್ರ ರೈಲ್ವೆ ಇಲಾಖೆ ನೀಡಿತ್ತು. ಅಲ್ಲದೇ ಮುಂಬೈನ ಮುತ್ತುಂಗ್ ರೈಲ್ವೆ ನಿಲ್ದಾಣದಲ್ಲೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿ, ಮಹಿಳಾ ಸಶಕ್ತಿಕರಣಕ್ಕೆ ರೈಲ್ವೆ ಇಲಾಖೆ ಕೊಡುಗೆ ನೀಡಿತ್ತು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search