• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದ ಹಿಂದೂಗಳೆಲ್ಲ ಇಲ್ಲಿಯ ಮೂಲನಿವಾಸಿಗಳೇ ಎಂದು ಸಾಬೀತುಪಡಿಸಲು ಮೋದಿ ಸರ್ಕಾರ ಏನು ಮಾಡಿದೆ ಗೊತ್ತಾ?

TNN Correspondent Posted On March 9, 2018


  • Share On Facebook
  • Tweet It

ದೆಹಲಿ: ಬೌದ್ಧ ಧರ್ಮ ಸ್ಥಾಪನೆಯಾಗುವ ಮೊದಲು ಗೌತಮ ಬುದ್ಧ ಹಿಂದೂವಾಗಿದ್ದ, ಜೈನ ಧರ್ಮ ಸ್ಥಾಪನೆಗೂ ಮುನ್ನ ತೀರ್ಥಂಕರ ಹಿಂದೂ, ಸಿಂಧೂ ನಾಗರಿಕತೆ ಹಿಂದೂ ಧರ್ಮದ ಮೂಲ ಬೇರು, ಸಿಂಧೂ ನಾಗರಿಕೆಯಿಂದಲೇ ಭಾರತಕ್ಕೆ ಹಿಂದೂಸ್ಥಾನ ಎಂಬ ಹೆಸರು ಬಂತು ಎಂಬುದು ಇತಿಹಾಸದಿಂದ ಗೊತ್ತಾಗುತ್ತದೆಯಾದರೂ, ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ದೇಶದಲ್ಲಿರುವ ಹಿಂದೂಗಳು ಇಲ್ಲಿಯ ಮೂಲ ನಿವಾಸಿಗಳು ಅಲ್ಲ, ಬೇರೆ ಕಡೆಯಿಂದ ವಲಸೆ ಬಂದವರು ಎಂದು ಬೊಬ್ಬೆ ಹಾಕುತ್ತವೆ. ಹಿಂದೂಸ್ಥಾನದಲ್ಲೇ ಹಿಂದೂ ಎಂಬ ಪದ ಇದ್ದರೂ, ತಮ್ಮ ಬಾಯಿ ತೆವಲು ತೀರಿಸಿಕೊಳ್ಳಲು ಕಪಟತನ ತೋರುತ್ತವೆ.

ಹಾಗಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಹಿಂದೂಗಳೆಲ್ಲ ಇಲ್ಲಿಯ ಮೂಲ ನಿವಾಸಿಗಳೇ ಎಂಬುದನ್ನು ಸಾಬೀತುಪಡಿಸಲು ಮಾಸ್ಟರ್ ಪ್ಲಾನ್ ಮಾಡಿದ್ದು, ಭಾರತದ ಹಿಂದೂಗಳು ಹೆಮ್ಮೆಯಿಂದ ನಾವು ಹಿಂದೂಸ್ಥಾನಿಗಳೇ, ನಮ್ಮ ನೆಲ ಇದೇ ಎಂದು ಹೇಳಿಕೊಳ್ಳುವ ಕಾಲ ದೂರವಿಲ್ಲ ಎಂದೇ ಹೇಳಲಾಗುತ್ತಿದೆ.

ನಿಜ, ಭಾರತದ ಹಿಂದೂಗಳು ಇಲ್ಲಿಯ ಮೂಲ ನಿವಾಸಿಗಳೇ ಎಂದು ಸಾಕ್ಷ್ಯಾಧಾರದ ಸಮೇತ ಸಾಬೀತುಪಡಿಸಲು ಕೇಂದ್ರ ಸರ್ಕಾರ 2016ರಲ್ಲೇ ತಜ್ಞರ ಸಮಿತಿ ರಚಿಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸರ್ಕಾರ ರಚಿಸಿದ ತಜ್ಞರ ಸಮಿತಿ ಸದಸ್ಯರೊಂದಿಗೆ ರಾಯಿಟರ್ಸ್ ವರದಿಗಾರರು ಸಂದರ್ಶನ ನಡೆಸಿದ್ದು, ದೇಶದ ಹಿಂದೂಗಳೆಲ್ಲ ಮೂಲ ನಿವಾಸಿಗಳೇ ಎಂಬುದು ಎಲ್ಲರಿಗೂ ತಿಳಿಯಲಿ ಹಾಗೂ ಇತಿಹಾಸದಲ್ಲಿ ಈ ಅಂಶ ದಾಖಲಾಗಲಿ ಎಂಬ ದಿಸೆಯಲ್ಲಿ ಸರ್ಕಾರ ಮುಂದಡಿಯಿಟ್ಟಿರುವುದಾಗಿ ತಜ್ಞರ ಸಮಿತಿಯ ಸದಸ್ಯರು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ, ಈ ಕುರಿತು ಸಮಿತಿ ಅಧ್ಯಕ್ಷ ಕೆ.ಎನ್.ದೀಕ್ಷಿತ್ ರಾಯಿಟರ್ಸ್ ಸಂಸ್ಥೆಯೊಂದಿಗೆ ಮಾತನಾಡಿದ್ದು, ದೇಶದ ಇತಿಹಾಸದ ಪುಟಗಳಲ್ಲಿ ಹಿಂದೂಗಳೆಲ್ಲ ಭಾರತದ ಮೂಲ ನಿವಾಸಿಗಳೇ ಎಂಬುದನ್ನು ಸಾಬೀತುಪಡಿಸುವ ದಿಸೆಯಲ್ಲಿ ಸಂಶೋಧನೆ ನಡೆಸುವಂತೆ ಕೇಂದ್ರ ಸರ್ಕಾರ ಸೂಚಿಸಿದ್ದು, ಈ ಕುರಿತು ವರದಿ ನೀಡುವಂತೆ ನಿರ್ದೇಶಿಸಿದೆ. ಈ ದಿಸೆಯಲ್ಲಿ ನಮ್ಮ ತಂಡ ಕಾರ್ಯೋನ್ಮುಖವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಮಹೋನ್ನತ ನಡೆಯಿಂದ ಭಾರತೀಯ ಹಿಂದೂಗಳಿಗೆಲ್ಲ ಸಿಹಿ ಸುದ್ದಿ ಕಾದಿದೆ ಎಂದೇ ಹೇಳಲಾಗುತ್ತಿದ್ದು, ಸತ್ಯಾಂಶ ಬಯಲಾದರೆ ಅದೆಷ್ಟು ಜನರ ಎದೆ ಧಸಕ್ ಎನ್ನುವುದೋ ಎಂಬ ಕುತೂಹಲ ಸಹ ಮೂಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search