• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ಆಯ್ತು, ಈಗ ಬಹುಪತ್ನಿತ್ವ ಕೊನೆಗಾಣಿಸಲು ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಂ ಮಹಿಳೆಯರು!

TNN Correspondent Posted On March 11, 2018
0


0
Shares
  • Share On Facebook
  • Tweet It

ದೆಹಲಿ: ತ್ರಿವಳಿ ತಲಾಖ್ ವಿರುದ್ಧ ಲಕ್ಷಾಂತರ ಮಹಿಳೆಯರು ಹೋರಾಡಿದ ಫಲವಾಗಿ ತ್ರಿವಳಿ ತಲಾಖ್ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬಳಿಕ, ಈ ಅನಿಷ್ಠ ಪದ್ಧತಿ ವಿರುದ್ಧ ಕಾನೂನು ರಚಿಸಲು ಮುಂದಾಗಿದೆ.

ತ್ರಿವಳಿ ತಲಾಖ್ ವಿರುದ್ಧ ಮುಸ್ಲಿಂ ಮಹಿಳೆಯರಿಗೆ ಸಿಕ್ಕ ನ್ಯಾಯ ಹಾಗೂ ಅಭೂತಪೂರ್ವ ಗೆಲುವಿನ ಬಳಿಕ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿರುವ ಮುಸ್ಲಿಂ ಮಹಿಳೆಯರು ಈಗ ಇಸ್ಲಾಮಿನಲ್ಲಿ ಅಸ್ತಿತ್ವದಲ್ಲಿರುವ ಬಹುಪತ್ನಿತ್ವ ಪದ್ಧತಿ ವಿರುದ್ಧ ಹೋರಾಡಲು ಮುಂದಾಗಿದ್ದಾರೆ.

ಹೌದು, ದೆಹಲಿ ಮೂಲದ ಹಸೀನಾ ಬೇಗಂ ಹಾಗೂ ಕಾಸಿಂಬಿ (ಹೆಸರು ಬದಲಾಯಿಸಲಾಗಿದೆ) ಎಂಬ ಇಬ್ಬರು ಮಹಿಳೆಯರು ಬಹುಪತ್ನಿತ್ವ ಪದ್ಧತಿ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆ ಮೂಲಕ ಇವರು ಬಹುಪತ್ನಿತ್ವ ಪದ್ಧತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಮೊದಲ ಮಹಿಳೆಯರು ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.

ಇಸ್ಲಾಂ ಕಾನೂನಿನಲ್ಲಿ ಒಬ್ಬ ಪುರುಷ ನಾಲ್ಕು ಮಹಿಳೆಯರನ್ನು ಮದುವೆಯಾಗುವ ಅವಕಾಶವಿದ್ದು, ಇದರಿಂದ ಮುಸ್ಲಿಂ ಮಹಿಳೆಯರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ಅನಿಷ್ಠ ಪದ್ಧತಿ ನಿಷೇಧಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಹಸೀನಾ ಬೇಗಂ 2008ರಲ್ಲಿ ವ್ಯಕ್ತಿಯೊಬ್ಬನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮದುವೆಯಾದ ಹೊಸತರಲ್ಲಿ ಚೆನ್ನಾಗಿಯೇ ಇದ್ದ ಗಂಡ, ಬಳಿಕ ವರದಕ್ಷಿಣೆ ತೆಗೆದುಕೊಂಡು ಬಾ ಸೇರಿ ಹಲವು ಕ್ಷುಲ್ಲಕ ಕಾರಣಕ್ಕಾಗಿ ಕಿರುಕುಳ ನೀಡಿದ್ದಾನೆ. ಕೊನೆಗೆ ಕಳೆದ ಜನವರಿಯಲ್ಲಿ ಬೇರೊಬ್ಬಳನ್ನು ಮದುವೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಕಾಸಿಂಬಿ ಪರಿಸ್ಥಿತಿಯೂ ಇದೇ ಅಗಿದೆ. ಹಾಗಾಗಿ ಬಹುಪತ್ನಿತ್ವ ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ಒಟ್ಟಿನಲ್ಲಿ ಮುಸ್ಲಿಂ ಮಹಿಳೆಯರ ಜೀವನ ನಿರ್ವಹಣೆಗೆ, ನೆಮ್ಮದಿಯ ಜೀವನಕ್ಕೆ ಕಂಟಕವಾಗಿದ್ದ ತ್ರಿವಳಿ ತಲಾಖ್ ರದ್ದುಗೊಳಿಸಿದ ಬಳಿಕ ಅವರಲ್ಲೊಂದು ಆಶಾಭಾವನೆ ಮೂಡಿದ್ದು, ಈಗ ಬಹುಪತ್ನಿತ್ವವನ್ನೂ ನಿಷೇಧಿಸಿದರೆ ಮಹಿಳೆಯರ ನೆಮ್ಮದಿ ಜೀವನಕ್ಕೆ ರಹದಾರಿಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

* ಸಾಂದರ್ಭಿಕ ಚಿತ್ರಗಳು

ಚಿತ್ರಕೃಪೆ: ಇಂಟರ್ನೆಟ್

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search