• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಂಗಳೂರು ವಿವಿ ಆವರಣದ ಶ್ರೀಗಂಧ ಕಳ್ಳತನವಾದರೂ ಮಲಗಿದೆಯಾ ಅರಣ್ಯ ಇಲಾಖೆ, ವಿವಿ ಆಡಳಿತ?

TNN Correspondent Posted On March 13, 2018
0


0
Shares
  • Share On Facebook
  • Tweet It

ಬೆಂಗಳೂರು: ಕಸ ವಿಲೇವಾರಿ ಮಾಡದೆ, ರಸ್ತೆಯ ಗುಂಡಿ ಮುಚ್ಚದೆ ಸಿಲಿಕಾನ್ ಸಿಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ, ಈಗ ಬೆಂಗಳೂರಿನಲ್ಲಿ ಮತ್ತೊಂದು ಪ್ರಮಾದ ನಡೆದಿದ್ದು, ಸರ್ಕಾರ, ವಿವಿ ಆಡಳಿತ ಮಂಡಳಿ ಏನು ಮಾಡುತ್ತಿದೆ ಎಂಬ ಮಾತುಕೇಳಿಬಂದಿವೆ.

ಹೌದು, ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಜೈವಿಕ ಉದ್ಯಾನದಲ್ಲಿ ಹೇರಳವಾಗಿ ಶ್ರೀಗಂಧದ ಮರ ಬೆಳೆದಿದ್ದು, ಕಳೆದ ಒಂದು ವರ್ಷದಲ್ಲಿ ಸುಮಾರು 36ಕ್ಕೂ ಅಧಿಕ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಹಕ್ಕು ಕಾಯಿದೆ (ಆರ್ ಟಿಇ) ಅನ್ವಯ ವಿಶ್ವವಿದ್ಯಾಲಯವೇ ಈ ಕುರಿತು ಮಾಹಿತಿ ನೀಡಿದ್ದು, ಕಳೆದ ವರ್ಷದ ಡಿಸೆಂಬರ್ ತಿಂಗಳೊಂದರಲ್ಲೇ ಸುಮಾರು 26 ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಆದಾಗ್ಯೂ, ಒಂದು ಸಾವಿರ ಎಕರೆಯಲ್ಲಿ ವಿವಿ ಕ್ಯಾಂಪಸ್ ವ್ಯಾಪಿಸಿದ್ದು, ಹೇರಳವಾಗಿ ಶ್ರೀಗಂಧದ ಮರಗಳು ಬೆಳೆದಿವೆ. ಆದರೆ ಕೆಲವು ಕಾಳಧನಿಕರು, ದಂಧೆಕೋರರು ಮರಗಳನ್ನು ಕಡಿಯಲು ಮುಂದಾಗಿದ್ದು, ಇಷ್ಟಾದರೂ ವಿವಿ ಆಡಳಿತವಾಗಲಿ, ಅರಣ್ಯ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಆದಾಗ್ಯೂ, ಈ ಕುರಿತು ಹಲವು ಆರ್ಟಿಇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಪ್ರತಿ ಬಾರಿ ದೂರು ನೀಡಿದಾಗಲೂ ವಿವಿ ಆಡಳಿತ ಮಂಡಳಿ ಗಸ್ತುಪಡೆ ನಿಯೋಜಿಸುತ್ತದೆ. ಆದರೆ ಆ ಗಸ್ತು ಪಡೆ ಕೆಲವೇ ದಿನಗಳಿಗೆ ಸೀಮಿತವಾಗಲಿದ್ದು, ಮತ್ತೆ ಎಂದಿನ ಚಾಳಿ ಮುಂದುವರಿಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯ ಖಂಡಿಸದ ಅರಣ್ಯ ಇಲಾಖೆ, ಸರ್ಕಾರವೇನು ಮಲಗಿದೆಯಾ ಎಂಬುದು ಸಿಲಿಕಾನ್ ಸಿಟಿ ಜನರ ಆಕ್ರೋಶಭರಿತ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search