• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉರ್ವಾದ ಬಯೋಗ್ಯಾಸ್ ಘಟಕದಿಂದ ಉರಿಯುವುದು ಒಂದೇ ಟ್ಯೂಬ್ ಲೈಟ್!

TNN Correspondent Posted On July 17, 2017
0


0
Shares
  • Share On Facebook
  • Tweet It

22 ಲಕ್ಷ 42 ಸಾವಿರ ರೂಪಾಯಿ ಕಳೆದ ಆರು ವರ್ಷದಿಂದ ಹಾಗೆ ವೇಸ್ಟಾಗುತ್ತಿದೆ. ಇದನ್ನು ನಮ್ಮ ಮಂಗಳೂರು ಮಹಾನಗರ ಪಾಲಿಕೆ ಅಥವಾ ಶಾಸಕರು ನೋಡಿದ್ದಾರಾ? ಇನ್ನು ನೇರವಾಗಿ ಅಭಿವೃದ್ಧಿಯ ವಿಷಯಕ್ಕೆ ಬರೋಣ. ಇಲ್ಲ, ಒಬ್ಬ ಸಾಮಾನ್ಯ ನಾಗರಿಕ ಇಡೀ ಜೀವನ ದುಡಿದರೂ ಇಷ್ಟು ಹಣ ಒಟ್ಟು ಮಾಡುವುದು ಕಷ್ಟಸಾಧ್ಯ. ಹಾಗಿರುವಾಗ ನಾವು ನೀವು ಕಟ್ಟುವ ತೆರಿಗೆಯ ಹಣ ಹಾಗೆ ಮಂಗಳೂರಿನ ಉರ್ವಾ ಮಾರ್ಕೆಟಿನಲ್ಲಿ ದಂಡವಾಗಿ ಬಿದ್ದಿದೆಯಲ್ಲ, ಆ ಹಣಕ್ಕೆ ಒಂದು ವ್ಯವಸ್ಥೆ ಮಾಡಬೇಕಲ್ಲ.

2011 ರಲ್ಲಿ ಪಾಲಿಕೆ ಏನು ಮಾಡಿತು ಎಂದರೆ ಬಯೋ ಗ್ಯಾಸ್ ಮೂಲಕ ವಿದ್ಯುತ್ ಉತ್ಪಾದನೆ ಮಾಡೋಣ ಎಂದು ನಿರ್ಧರಿಸಿತು. ಸರಿ, ಯಾವುದೇ ಯೋಜನೆ ಕೆಟ್ಟದ್ದಲ್ಲ ಅಥವಾ ಬಯೋ ಗ್ಯಾಸ್ ಘಟಕ ಮಾಡಬಾರದು ಎಂದು ನಾನು ಹೇಳುತ್ತಿಲ್ಲ. ಆದರೆ ನೀವು 22 ಲಕ್ಷ ರೂಪಾಯಿ ಹಾಕಿದ ನಂತರ ಅದಕ್ಕೆ ಸರಿಯಾಗಿ ವಿದ್ಯುತ್ ಉತ್ಪಾದಿಸಿ ಜನರಿಗೆ ಪೂರೈಕೆ ಮಾಡಿದ್ದರೆ ನಿಮ್ಮನ್ನು ಅಭಿನಂದಿಸಬಹುದಿತ್ತು. ಆದರೆ ಇವತ್ತಿನ ತನಕ ಆ ಬಯೋ ಗ್ಯಾಸ್ ಘಟಕದಿಂದ ಉತ್ಪಾದನೆಯಾದ ವಿದ್ಯುತ್ ನಿಂದ ಘಟಕದ ಒಂದೇ ಒಂದು ಟ್ಯೂಬ್ ಲೈಟ್ ಕೂಡ ಉರಿಯುತ್ತಿಲ್ಲ. ಇಷ್ಟಾಗಿಯೂ ಪಾಲಿಕೆಗೆ ಸಮಾಧಾನ ಇಲ್ಲ. ಪ್ರತಿ ತಿಂಗಳು ಈ ಘಟಕದ ನಿರ್ವಹಣೆಗೆಂದು ನಲ್ವತ್ತು ಸಾವಿರ ರೂಪಾಯಿ ಖರ್ಚು ಮಾಡುತ್ತಿದೆ. ಎಷ್ಟೋ ಕಡೆ ಎಷ್ಟೋ ಕುಟುಂಬಗಳು ಎರಡು ಹೊತ್ತಿನ ಊಟಕ್ಕೆ ಹಣ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದರೆ ಮತ್ತೊಂದೆಡೆ ಇದೇ ಪಾಲಿಕೆ ದಂಡಕ್ಕೆ 40 ಸಾವಿರ ಕೊಟ್ಟು ಬಿಳಿಯಾನೆಯನ್ನು ಸಾಕುತ್ತಿದೆ. ಹೆಚ್ಚು ಮಾತನಾಡಿದರೆ ಶಾಸಕರ ಬೆಂಬಲಿಗರಿಗೆ ಬೇಸರವಾಗುತ್ತದೆ. ಹಾಗಂತ ಮೊನ್ನೆ ಉರ್ವಾ ಮೈದಾನದ ಹತ್ತಿರ ಏನೋ ಗಿಡ ನೆಡಲು ಎಂದು ಶಾಸಕರು ಹೋಗಿದ್ದರಲ್ಲ, ಆಗ ಈ ಘಟಕಕ್ಕೂ ಭೇಟಿ ಕೊಟ್ಟಿದ್ದರೆ ಒಳ್ಳೆಯದಿತ್ತು.

ಒಂದು ಯೋಜನೆಗೆ ಹಣ ತರುವುದು ಮಾತ್ರ ಶಾಸಕರ ಜವಾಬ್ದಾರಿ ಅಲ್ಲ. ತನ್ನ ಕ್ಷೇತ್ರದಲ್ಲಿ ಆ ಯೋಜನೆಗೆ ಹಾಕಿದ ಹಣ ವೇಸ್ಟ್ ಆಗಿ ಹೋಗುತ್ತಿದೆಯೇನೊ ಎಂದು ಕೂಡ ನೋಡುವುದು ಅವರ ಧರ್ಮ. ಇಲ್ಲದಿದ್ದರೆ ಯೋಜನೆಗಳು ಇರುವುದು ತಮ್ಮ ಬೆಂಬಲಿಗ ಗುತ್ತಿಗೆದಾರರ ಕಿಸೆ ಮತ್ತು ತಮ್ಮ ಚುನಾವಣಾ ವೆಚ್ಚ ನೋಡಿಕೊಳ್ಳಲು ಎಂದಾಗುತ್ತದೆ. ಆವತ್ತು ಈ ಯೋಜನೆ ತರುವಾಗ ನಮ್ಮ ಪಾಲಿಕೆಯಲ್ಲಿ ದೂರದೃಷ್ಟಿಯ ಆಯುಕ್ತರು ಬಂದು ಅಧಿಕಾರ ನಡೆಸುತ್ತಿದ್ದರು. ಆದರೆ ಆಯುಕ್ತ ಹರೀಶ್ ಕುಮಾರ್ ತುಂಬಾ ವರ್ಷ ಮಂಗಳೂರಿನಲ್ಲಿ ಇದ್ದರೆ ಎಲ್ಲಾ ಅಭಿವೃದ್ಧಿ ಅವರೇ ಮಾಡಿ ನಂತರ ನಮಗೆ ಏನೂ ಕೆಲಸ ಉಳಿಯುವುದಿಲ್ಲ ಎಂದು ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಆವತ್ತು ಆಯುಕ್ತ ಹರೀಶ್ ಕುಮಾರ್ ಅವರದ್ದು ಏನು ಪ್ಲಾನ್ ಇತ್ತೆಂದ್ರೆ ಮಂಗಳೂರು ಸೆಂಟ್ರಲ್ ಮಾರುಕಟ್ಟೆಯಲ್ಲಿ ದಿನಕ್ಕೆ ಸುಮಾರು 200 ಕೆಜಿ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಆ ವೇಸ್ಟ್ ಅನ್ನು ಹಾಗೆ ವೇಸ್ಟ್ ಮಾಡುವ ಬದಲು ಅದನ್ನು ಉಪಯೋಗಿಸಿ ವಿದ್ಯುತ್ ತಯಾರಿಸುವ ಎನ್ನುವ ಯೋಚನೆ ಬಂದಿತ್ತು. ಹಾಗೆ ಈ ಘಟಕ ಪ್ರಾರಂಭವಾಗಿತ್ತು. ಅವರು ಅತ್ತ ಹೋದ ನಂತರ ಇತ್ತ ಅದರ ಗುತ್ತಿಗೆ ಪಡೆದುಕೊಂಡಿರುವವರು ಪುನ: ಸೆಂಟ್ರಲ್ ಮಾರುಕಟ್ಟೆ ತನಕ ಹೋಗಲು ಆಲಸ್ಯವಾಗಿ ಅಲ್ಲಿಯೇ ಪಕ್ಕದ ಹರೇ ರಾಮ ಹರೇ ಕೃಷ್ಣ ಅವರ ಅಕ್ಷಯ್ ಪಾತ್ರೆಯ ವೇಸ್ಟ್ ತಂದು ಸುರಿದು ವಿದ್ಯುತ್ ಉತ್ಪಾದಿಸುತ್ತಾರೆ. ಇವರು ಉತ್ಪಾದಿಸಿದ ವಿದ್ಯುತ್ ನಿಂದ ಅವರ ಜನರೇಟರ್ ಮಾತ್ರ ಕೆಲಸ ಮಾಡುತ್ತದೆ. ಅಲ್ಲಿಗೆ ಕಲ್ಲಿನ ಮೇಲೆ ನೀರು ನಿತ್ಯ ಸುರಿದು ಅದನ್ನು ಮೆದು ಮಾಡುವ ಕೆಲಸ ನಡೆಯುತ್ತಿದೆ!

ಈ ಬಗ್ಗೆ ಈಗಿನ ಆಯುಕ್ತ ಮೊಹಮ್ಮದ್ ನಝೀರ್ ಅವರತ್ರ ಕೇಳಿದರೆ ಉತ್ತರ ಏನು ಗೊತ್ತಾ ” ಮೆಸ್ಕಾಂ ನಲ್ಲಿ ಟಾಕ್ ಆಗ್ತಾ ಇದೆ. ಫುಲ್ ಸ್ವಿಂಗ್ ನಲ್ಲಿ ಶುರು ಮಾಡುತ್ತೇವೆ” ಬಹುಶ: ಇಲೆಕ್ಷನ್ ಹತ್ತಿರ ಬರುವಾಗ ಶಾಸಕರಿಗೆ ನಿಂತು ಫೋಟೋ ತೆಗೆಯಲು ಒಂದಾದರೂ ಯೋಜನೆ ಬೇಕಲ್ಲ, ಬಹುಶ: ಅದಕ್ಕೆ ಆಯುಕ್ತರು ಚುನಾವಣೆಗೆ ಸರಿಯಾಗಿ ತಮಗೆ ಕೆಲಸ ಕೊಟ್ಟ ಧಣಿಗಳಿಗೆ ಉಪಕಾರವಾಗುವಂತೆ ಕೊನೆಯ ಘಳಿಗೆಯಲ್ಲಿ ಏನಾದರೂ ಮಾಡಲು ಕಾಯುತ್ತಾ ಇರಬಹುದು.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search