• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತನ್ನ ಮಗು ಎರಡು ತಿಂಗಳಲ್ಲಿ ಕಣ್ಣು ಬಿಡುವ ಮೊದಲೇ ಹುತಾತ್ಮನಾದ ಹಾಸನದ ಯೋಧ!

TNN Correspondent Posted On March 14, 2018
0


0
Shares
  • Share On Facebook
  • Tweet It

ಹಾಸನ: ಒಂದು ವರ್ಷದ ಹಿಂದೆ ಆ ಯೋಧನ ಮದುವೆಯಾಗಿತ್ತು. ವರ್ಷ ತುಂಬುವ ಮೊದಲೇ ಆ ಯೋಧನಿಗೆ ಸಿಹಿ ಸುದ್ದಿ ಕಾದಿತ್ತು. ಇನ್ನೆರಡು ತಿಂಗಳು ಕಳೆದಿದ್ದರೆ ತಮ್ಮ ದಾಂಪತ್ಯದ ಕುರುಹಾಗಿ ಮನೆ ಹಾಗೂ ಮನಕ್ಕೊಂದು ಕಂದಮ್ಮನ ಪ್ರವೇಶವಾಗುವುದಿತ್ತು. ಆ ಯೋಧನಿಗೂ ಗಡಿಯಲ್ಲಿ ಮಗ ಹುಟ್ಟಿದರೆ ಹೇಗಿರಬಹುದು, ಮಗಳು ಹುಟ್ಟಿದರೆ ಏನು ಹೆಸರಿಡುವುದು ಎಂದು ನೆನಪು ಬರುತ್ತಿತ್ತೇನೋ?

ಆದರೆ ವಿಧಿಯಾಟವೇ ಬೇರೆ ಇತ್ತು. ಅದರ ಲೆಕ್ಕಾಚಾರವೇ ಬೇರೆಯಾಗಿತ್ತು. ಹೊಸ ಚಿಗುರು ಹೊರಬರುವ ಮುನ್ನವೇ ಅಪ್ಪ ಎಂಬ ಆಲದ ಮರವೇ ಇಲ್ಲ ಎಂಬ ಮಾತೇ ಕರಳು ಚುರುಕ್ ಎನಿಸುತ್ತದೆ. ಅಂತಹ ದುರದೃಷ್ಟ ಶತ್ರುವಿನದ್ದೂ ಆಗಬಾರದು ಎನಿಸುತ್ತದೆ.

ಆದರೆ ಹಾಸನದ ಯೋಧರೊಬ್ಬರ ಬಾಳಲ್ಲಿ ವಿಧಿ ಇಂತಹ ಕ್ರೂರ ಆಟವೊಂದು ಆಡಿಬಿಟ್ಟಿದೆ. ಹೌದು, ಛತ್ತೀಸ್ ಗಡದ ಸುಕ್ಮಾದಲ್ಲಿ ನಕ್ಸಲರು ಮಾಡಿದ ಅಟ್ಟಹಾಸದಲ್ಲಿ ಹಾಸನದ ಹರದೂರು ಗ್ರಾಮದ ಯೋಧ, 29 ವರ್ಷದ ಚಂದ್ರು ಹುತಾತ್ಮರಾಗಿದ್ದಾರೆ. ದಾಳಿ ವೇಳೆ ಭಾರತದ ಒಂಬತ್ತು ಯೋಧರು ಹುತಾತ್ಮರಾಗಿದ್ದು, ಹಾಸನದ ಈ ವೀರಯೋಧನೂ ಸೇರಿದ್ದಾನೆ ಎಂಬುದೇ ರಾಜ್ಯವನ್ನು ದುಃಖತಪ್ತರನ್ನಾಗಿಸಿದೆ. ಇನ್ನು ಆ ಕುಟುಂಬದ ಪರಿಸ್ಥಿತಿ ಹೇಗಾಗಿರಬೇಡ?

ಸ್ವಾಮಿ ಗೌಡ ಎಂಬುವವರ ಪುತ್ರನಾಗಿರುವ ಚಂದ್ರು ಐದು ವರ್ಷಗಳ ಹಿಂದೆ ಸೈನ್ಯ ಸೇರಿದ್ದರು. ಕಳೆದ ವರ್ಷವಷ್ಟೇ ಅಕ್ಕನ ಮಗಳ ಜತೆ ಮದುವೆಯಾಗಿದ್ದ ಚಂದ್ರು ಇನ್ನೆರಡು ತಿಂಗಳಲ್ಲಿ ಮಗು ಎತ್ತಿ ಮುದ್ದಾಡುವ ತವಕದಲ್ಲಿದ್ದ. ಆದರೆ ವಿಧಿಯ ಆಟಕ್ಕೆ ಆ ವೀರ ಯೋಧ ಹುತಾತ್ಮನಾಗಿ ಹೋದನಲ್ಲ ಎಂಬ ಬೇಸರ ಎಲ್ಲರಲ್ಲೂ ಕಾಡುತ್ತಿದೆ. ಛೇ!

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search