• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದಲ್ಲಿ ಮತಾಂತರಗೊಳಿಸಿದರೆ ಇನ್ನು ಐದು ವರ್ಷ ಜೈಲು ಶಿಕ್ಷೆ, ಧರ್ಮಾಂಧರಿಗೆ ಬಿಜೆಪಿ ಸರ್ಕಾರ ಗುನ್ನ!

TNN Correspondent Posted On March 14, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳ ಇಸ್ಲಾಂ ಧರ್ಮಗುರುಗಳು ಹಾಗೂ ಕ್ರೈಸ್ತ ಮಿಷನರಿಗಳು ಹಿಂದೂಗಳ ಮತಾಂತರದಲ್ಲಿ ತೊಡಗಿರುವ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಉತ್ತರಾಖಂಡದಲ್ಲಿ ಮತಾಂತರ ವಿರುದ್ಧ ಬಿಜೆಪಿ ಸರ್ಕಾರ ಮಹತ್ತರ ಹೆಜ್ಜೆಯೊಂದನ್ನು ಇಟ್ಟಿದೆ.

ಹಣ, ಮನೆ, ಕಾರು, ಉದ್ಯೋಗ ಸೇರಿ ಹಲವು ಆಮಿಷವೊಡ್ಡಿ ಅಕ್ರಮವಾಗಿ ಮತಾಂತರ ಮಾಡುವುದನ್ನು ನಿಷೇಧಿಸಲು ಉತ್ತರಾಖಂಡ ರಾಜ್ಯ ಸರ್ಕಾರ “ಧರ್ಮ ಸ್ವತಂತ್ರತಾ ಅಧಿನಿಯಮ” ಎಂಬ ಕರಡು ಮಸೂದೆಯನ್ನು ಅಂಗೀಕರಿಸಿದೆ.

ಯಾವುದೇ ವ್ಯಕ್ತಿಗೆ ಹಣ, ಕಾರು ಸೇರಿ ಯಾವುದೇ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಒಂದು ವೇಳೆ ಹೀಗೆ ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ, ಅಂತಹವರಿಗೆ ಒಂದರಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಡವರೇ ಇವರ ಗುರಿಯಾಗಿರುವುದರಿಂದ ಮಸೂದೆ ರಚನೆ ವೇಳೆ ಜಾಣತನ ಮೆರೆದಿರುವ ರಾಜ್ಯ ಸರ್ಕಾರ, ಎಸ್ಸಿ, ಎಸ್ಟಿಯವರನ್ನು ಮತಾಂತರಗೊಳಿಸಿದರೆ ಕನಿಷ್ಠ 2 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ನೇತೃತ್ವದ ರಾಜ್ಯ ಸರ್ಕಾರ ಈ ಕರಡು ಮಸೂದೆಗೆ ಅಂಗೀಕಾರ ನೀಡಿದ್ದು, ಈ ಮಸೂದೆ ಕಾಯಿದೆಯಾಗಿ ಜಾರಿಯಾದರೆ ಮತಾಂತರಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ.

ಒಟ್ಟಿನಲ್ಲಿ ದೇಶಾದ್ಯಂತ ಲವ್ ಜಿಹಾದ್, ಕ್ರಿಶ್ಚಿಯನ್ ಮಿಷನರಿಗಳ ಮತಾಂತರ, ಇಸ್ಲಾಂ ಮೂಲಭೂತವಾದಿಗಳ ಉಪಟಳದಿಂದ ಹಲವು ಹಿಂದೂಗಳು ಮತಾಂತರದ ಪಿಡುಗಿಗೆ ಬಲಿಯಾಗುತ್ತಿದ್ದು, ರಾಜ್ಯ ಸರ್ಕಾರದ ಈ ಕರಡು ಮಸೂದೆ ಮತಾಂತರಿಗಳಿಗೆ ಗುನ್ನ ನೀಡಿದಂತಾಗಿದೆ. ಎಲ್ಲ ರಾಜ್ಯಗಳಲ್ಲೂ ಇಂಥದ್ದೊಂದು ಕಾನೂನು ಜಾರಿಗೊಳಿಸುವುದು ಧರ್ಮ ರಕ್ಷಣೆ ದೃಷ್ಟಿಯಿಂದ ಒಳಿತು.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search