• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇರುವ ಶಸ್ತ್ರಾಸ್ತ್ರದಲ್ಲೇ ನಮ್ಮ ಸೈನಿಕರು ಸಮರ್ಥವಾಗಿ ಹೋರಾಟಬಲ್ಲರು ಎಂದ ರಾವತ್, ಕೇಂದ್ರ ವಿರೋಧಿಗಳಿಗೆ ಉರಿ

TNN Correspondent Posted On March 19, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಬಿಪಿನ್ ರಾವತ್ ಕೇಂದ್ರ ಸರ್ಕಾರ ಶಸ್ತ್ರಾಸ್ತ್ರ ಖರೀದಿಗೆ ನೀಡುತ್ತಿರುವ ಹಣ ಸಮರ್ಪಕ ಎನಿಸುತ್ತಿಲ್ಲ ಎಂದು ತುಸು ಅಸಮಾಧಾನ ಹೊರಹಾಕುತ್ತಲೇ, ಕೆಲ ಮೋದಿ ವಿರೋಧಿಗಳು, ಎಡಬಿಡಂಗಿಗಳು, ಸ್ವಯಂಘೋಷಿತ ಬುದ್ಧಿಜೀವಿಗಳು ಕೇಂದ್ರ ಸರ್ಕಾರವನ್ನು ತೆಗಳಿದ್ದರು. ಕೇಂದ್ರ ಸರ್ಕಾರ ಸುಮ್ಮನೆ ದೇಶಪ್ರೇಮ, ಸೈನಿಕರ ಗುಣಗಾನ ಮಾಡುತ್ತದೆ. ಆದರೆ ಅವರಿಗೆ ಸರಿಯಾದ ಶಸ್ತ್ರಾಸ್ತ್ರ ನೀಡಿಲ್ಲ ಎಂದು ಬೊಬ್ಬೆ ಹಾಕಿದರು.

ಇದಾದ ಬಳಿಕ ಎಚ್ಚೆತ್ತುಕೊಂಡ ಸಂಸದೀಯ ಸಮಿತಿ, ಶಸ್ತ್ರಾಸ್ತ್ರ ಖರೀದಿಗಾಗಿ ವರದಿಯೊಂದನ್ನು ಸಂಸತ್ತಿಗೆ ನೀಡಿದೆ. ಆದಾಗಲೇ ಶಸ್ತ್ರಾಸ್ತ್ರ ಸಂಗ್ರಹಣೆಗೆ ಏನೇನು ತಯಾರಿ ಬೇಕೋ, ಅದೆಲ್ಲವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ.

ಇದರಿಂದ ಸಮಾಧಾನಗೊಂಡ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭಾರತೀಯ ಸೈನ್ಯದಲ್ಲಿರುವ ಶಸ್ತ್ರಾಸ್ತ್ರಗಳು ಹಳೆಯದಾಗಿವೆ ನಿಜ. ಈಗ ಅವುಗಳ ಸಂಗ್ರಹಣೆ ಪ್ರಕ್ರಿಯೆಯೂ ಚಾಲ್ತಿಯಲ್ಲಿದೆ. ಆದರೂ, ಪರಿಸ್ಥಿತಿ ಹೇಗೆಯೇ ಇದ್ದರು. ಎಂತಹ ವಿಷಮ ಪರಿಸ್ಥಿತಿಯೇ ಎದುರಾದರೂ, ಇರುವ ಶಸ್ತ್ರಾಸ್ತ್ರಗಳನ್ನೇ ಬಳಸಿಕೊಂಡು ಹೇಗೆ ಹೋರಾಡಬೇಕು ಎಂಬುದು ಭಾರತೀಯ ಸೈನಿಕರಿಗೆ ಗೊತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಸೈನ್ಯಕ್ಕೆ ಕೇಂದ್ರ ಸರ್ಕಾರ ನೀಡುವ ಎಲ್ಲ ಹಣವೂ ಸೈನಿಕರ ನಿರ್ಹವಣೆಗೆ ಮಾತ್ರ ಖರ್ಚಾಗುತ್ತದೆ ಎಂಬ ಮಾತು ಸುಳ್ಳು. ಸೈನ್ಯಕ್ಕೆ ವಿನಿಯೋಗಿಸುವ ಹಣದಲ್ಲಿ ಶೇ.35ರಷ್ಟನ್ನು ಶಸ್ತ್ರಾಸ್ತ್ರ ಖರೀದಿಗೆ ನೀಡಲಾಗುತ್ತದೆ. ನಮ್ಮ ಸೈನ್ಯ ಎಂದಿಗೂ ಸಮರ್ಥವಾಗಿದ್ದು, ಯಾವುದೇ ವಿಷಮ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.

ಬಿಪಿನ್ ರಾವತ್ ಅವರ ಈ ಹೇಳಿಕೆಯಿಂದ, ಸಣ್ಣ ಲೋಪವನ್ನೇ ದೊಡ್ಡದು ಮಾಡಿ, ಕೇಂದ್ರ ಸರ್ಕಾರವನ್ನು ತೆಗಳಿದ್ದ ಕೆಲ ಅತೃಪ್ತ ಮನಸ್ಸುಗಳಿಗೆ ಉರಿ ಆರಂಭವಾಗಿದ್ದು ಮಾತ್ರ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search