• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಟಾರ್ಟಿಕಾದಲ್ಲಿ 400 ದಿನ ವಾಸವಿದ್ದು, ದಾಖಲೆ ಬರೆದ ಇಸ್ರೋದ ಮೊದಲ ಮಹಿಳಾ ವಿಜ್ಞಾನಿ

TNN Correspondent Posted On March 19, 2018
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಮಹಿಳೆಯರು ಯಾವುದೇ ಕ್ಷೇತ್ರದಲ್ಲೂ ಕಡಿಮೆ ಇಲ್ಲ ಎಂಬುದನ್ನು ಪದೇ ಪದೆ ಸಾಬೀತುಪಡಿಸುತ್ತಿದ್ದಾರೆ. ಇತ್ತೀಚೆಗೆ ಮಿಗ್ -21 ವಿಮಾನವನ್ನು ಯಶಸ್ವಿಯಾಗಿ ಚಲಾಯಿಸುವ ಮೂಲಕ ಮಹಿಳಾ ಪೈಲಟ್ ಅವನಿ ಚತುರ್ವೇದಿ ಗಮನ ಸೆಳೆದಿದ್ದರು. ಇದೀಗ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹಿಳಾ ವಿಜ್ಞಾನಿ ಅಂಟಾರ್ಟಿಕಾದಲ್ಲಿ 400 ದಿನ ವಾಸ ಮಾಡುವ  ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಇಸ್ರೋದಲ್ಲಿ ವಿಜ್ಞಾನಿಯಾಗಿರುವ  56 ವಯಸ್ಸಿನ ಮಂಗಲಾ ಮಣಿ 90 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಅಂಟಾರ್ಟಿಕಾದಲ್ಲಿ ವಾಸವಿರುವ ಮೂಲಕ ಗಮನ ಸೆಳೆದಿದ್ದಾರೆ. ಭಾರತ ‘ಇಂಡಿಯಾ ಭಾರತಿ’ ಸಂಘಟನೆಯಿಂದ 2016ರಲ್ಲಿ ಅಂಟಾರ್ಟಿಕಾಕ್ಕೆ ಸಂಶೋಧನೆಗೆ ಹೋಗಿದ್ದ 23 ಜನರ ತಂಡದಲ್ಲಿ ಮಂಗಲಾ ಮಣಿಯೊಬ್ಬರೇ ಮಹಿಳೆಯಾಗಿದ್ದು ವಿಶೇಷ.

ಅಂಟಾರ್ಟಿಕಾ ವಾಸ್ತವ್ಯ ಮಾಡುವುದು ಸವಾಲಿನ ಕೆಲವಾಗಿತ್ತು. ಅತ್ಯಂತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಿತ್ತು. ನಮ್ಮ ನಿಯಂತ್ರಣ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕವಿಟ್ಟುಕೊಂಡು ದಿನ ದೂಡುತ್ತಿದ್ದೇವು. ಪ್ರತಿ ಕ್ಷಣವೂ ಸವಾಲು ಎದುರಿಸುತ್ತಿದೆ. 2 ರಿಂದ 3 ಗಂಟೆಗಿಂತ ಹೆಚ್ಚು ಅವಧಿಯಲ್ಲಿ ನಾವು ಸಾಮಾನ್ಯ ಧಿರಿಸಿನಲ್ಲಿ ಇರಲು ಆಗುತ್ತಿರಲಿಲ್ಲ ಎಂದು ಮಣಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2016 ರಿಂದ 2017 ರವರೆಗೆ ಸುಮಾರು 400 ದಿನ ನಾವು ಅಂಟಾರ್ಟಿಕಾದಲ್ಲಿ ವಾಸ ಮಾಡಿದ್ದೇವು. ನಮ್ಮ ಇಡೀ ತಂಡ ಪರಸ್ಪರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿತ್ತು. ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವು. ನನ್ನ ಜನ್ಮದಿನವನ್ನು ನಮ್ಮ ತಂಡ ಆಚರಿಸಿದ್ದು, ಅವಿಸ್ಮರಣೀಯ ಎನ್ನುತ್ತಾರೆ ಮಣಿ.

ಈ ಮಹತ್ವದ ಸಂಶೋಧನೆಗೆ ತೆರಳುವ ಮುಂಚೆ ಮಂಗಲಾ ಮಣಿ ಅವರಿಗೆ ಭಾರತದ ಬದ್ರಿನಾಥ, ಚಮೋಲಿಗಳಲ್ಲಿ ತರಬೇತಿ ನೀಡಲಾಗಿತ್ತು. ಅಲ್ಲದೇ ಮಾನಸಿಕ, ದೈಹಿಕ ಸಾಮರ್ಥ್ಯವನ್ನು ಪರೀಕ್ಷಿಸಲಾಗಿತ್ತು. ಮಹಿಳೆಯರಲ್ಲು ಸಾಮರ್ಥ್ಯವಿದ್ದು, ಆತ್ಮಬಲದೊಂದಿಗೆ ಮುನ್ನುಗಿದ್ದರೇ ಯಾವುದೇ ಸಾಧನೆ ಮಾಡಬಹುದು ಎಂಬುದು ಮಂಗಲಾ ಮಣಿ ಅವರ ಸಲಹೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search