• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಎಂ.ಬಿ.ಪಾಟೀಲರೇ, ನೀವು ಸಮಾಜದ ಉದ್ಧಾರಕ್ಕಾಗಿ ರಾಜಕಾರಣ ಮಾಡುತ್ತಿದ್ದೀರೋ ಅಥವಾ ಒಡೆಯಲೋ?

ವಿಶಾಲ್ ಗೌಡ ಕುಶಾಲನಗರ Posted On March 22, 2018


  • Share On Facebook
  • Tweet It

ಈ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲರ ತಲೆಯಲ್ಲಿ ಬುದ್ಧಿ ತುಂಬಿದೆಯೋ ಅಥವಾ ಲದ್ದಿ ತುಂಬಿದೆಯೋ? ಇವರೇನು ಜನ ಸೇವೆಗಾಗಿ ರಾಜಕಾರಣದಲ್ಲಿದ್ದಾರೋ, ಅಥವಾ ಮತಗಳಿಗಾಗಿ ಸಮಾಜವನ್ನು ಒಡೆದು ತಮ್ಮ ಬೇಳೆ ಬೇಯಿಸಿಕೊಳ್ಳಲು ಹೊಲಸು ರಾಜಕಾರಣ ಮಾಡುತ್ತಿದ್ದಾರೋ? ಬಸವಣ್ಣ ಬಸವಣ್ಣ ಅಂತ ಇವರು ವಿಷಣ್ಣನಾಗಿ ಕುಳಿತಿರುವುದೇಕೆ? ನಾಚಿಕೆ ಎಂಬುದೇ ಆಗುವುದಿಲ್ಲವೇ ಎಂ.ಬಿ.ಪಾಟೀಲರೇ ನಿಮಗೆ?

ಹೌದು, ಸಚಿವರೂ ಎಂಬುದನ್ನೂ ನೋಡದೆ, ಬೌದ್ಧಿಕವಾಗಿ ಶೂನ್ಯಸ್ಥಾನಕ್ಕೆ ಇಳಿದಿರುವ ಎಂ.ಬಿ.ಪಾಟೀಲರಿಗೆ ಹೀಗೆ ಕೇಳಲೇಬೇಕಾಗಿದೆ. ಅದೂ ಧರ್ಮದ ವಿಚಾರದಲ್ಲಿ ಹೀನಾತಿಹೀನವಾಗಿ ವರ್ತಿಸುವ ಇವರಿಗೆ ಹೀಗೆ ಕೇಳುವುದರಲ್ಲಿ ಯಾವ ತಪ್ಪೂ ಇಲ್ಲ.

ನೀವೇ ಯೋಚನೆ ಮಾಡಿ ನೋಡಿ, ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಮೊದಲಿನಿಂದ ಇದ್ದರೂ, ಅದಕ್ಕೆ ರಾಜಕೀಯ ಬಣ್ಣ ಸಿಕ್ಕಿರಲಿಲ್ಲ. ಆದರೆ, ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಎಂ.ಬಿ.ಪಾಟೀಲ್, ಈ ಬಾರಿಯ ಚುನಾವಣೆಯಲ್ಲಿ ಸೋಲುವ ಭಯದಿಂದ, ಲಿಂಗಾಯತ ಪ್ರತ್ಯೇಕ ಧರ್ಮದ ಪರ ನಿಂತರು.

ಕೋಟಿ, ಕೋಟಿ ದುಡ್ಡು ಖರ್ಚು ಮಾಡಿ ಲಿಂಗಾಯತರ ಸಮಾವೇಶ ಮಾಡಿದರು. ರಾಜಕಾರಣಿಗಳು ಎಳೆದು ತಂದು, ಸಮಾಜ ಒಡೆಯಲು ಮುಂದಾದರು. ಕೆಲವು ಕುತ್ಸಿತ ಮನಸ್ಸಿನ ಸ್ವಾಮೀಜಿಗಳನ್ನು ವೇದಿಕೆಗೆ ತಂದು, ಅದೆಲ್ಲಿಂದಲೋ ದಾಖಲೆ ಅಂತ ಸಂಗ್ರಹಿಸಿ, ಈಗ ತಮ್ಮದೇ ಮುಖ್ಯಮಂತ್ರಿ ಮೂಲಕ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರಕ್ಕೆ ಶಿಫಾರಸು ಮಾಡಿಸಿದ್ದಾರೆ. ಹೇಳಿ ಒಬ್ಬ ರಾಜಕಾರಣಿಯಾದವನು ಸಮಾಜವನ್ನು ಒಗ್ಗೂಡಿಸಿ, ಮುನ್ನಡೆಯಬೇಕೋ, ಅಥವಾ ಸಮಾಜ ಒಡೆಯಬೇಕೋ? ಇವರ್ಯಾವ ಸೀಮೆ ನಾಯಕ ಸ್ವಾಮಿ?

ಇಂತಹ ಕುತ್ಸಿತ ಮನಸ್ಸಿನ ಎಂ.ಬಿ.ಪಾಟೀಲ್ ಈಗ, ಮತ್ತೊಂದು ವರಸೆ ತೆಗೆದಿದ್ದಾರೆ. ಬ್ರಾಹ್ಮಣರು ಸಹ ತಾವು ಹಿಂದೂ ಧರ್ಮದಿಂದ ಹೇಗೆ ಭಿನ್ನ ಎಂದು ತೋರಿಸಿದರೆ, ಅವರಿಗೂ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು ಎಂದು ಬೊಗಳೆ ಬಿಟ್ಟಿದ್ದಾರೆ. ನಾಚಿಕೆಯಾಗುವುದಿಲ್ಲವೇ ಸಚಿವರೇ ನಿಮಗೆ? ಹೊಟ್ಟೆಗೆ ಅನ್ನ ತಿನ್ನುವ ಹಾಗೆ, ಮಿದುಳಿಗೆ ವಿಚಾರಗಳೆಂಬ ಅನ್ನ ತುಂಬಿಸಿಲ್ಲವೆ? ನಿಮ್ಮನ್ನು ನೋಡಿದರೆ ಹಾಗೆ ಕಾಣಿಸುವುದಿಲ್ಲ.

ಎಂ.ಬಿ.ಪಾಟೀಲರೇ ಹೇಳುವ ಹಾಗೆ, ಬ್ರಾಹ್ಮಣರು ಯಾವುದೋ ದಾಖಲೆ ಸಂಗ್ರಹಿಸಿ ಅವರಿಗೂ ಪ್ರತ್ಯೇಕ ಧರ್ಮ ನೀಡಿ. ಮುಂದೊಂದು ದಿನ ಸಮುದಾಯದ ಆಧಾರದಲ್ಲಿ ಜಾಸ್ತಿ ಜನಸಂಖ್ಯೆಯಿರುವ ಒಕ್ಕಲಿಗರು, ಕುರುಬರು, ಗಾಣಿಗರು, ಕಬ್ಬಲಿಗರು, ರೆಡ್ಡಿಗಳೆಲ್ಲ ತಮಗೂ ಒಂದು ಧರ್ಮ ಬೇಕು ಎಂದರೆ, ಎಲ್ಲರಿಗೂ ಒಂದೊಂದು ಧರ್ಮ ನೀಡುತ್ತೀರಾ?

ಹೀಗೆ ಗಲ್ಲಿಗೊಂದು, ಬೀದಿಗೊಂದು ಧರ್ಮ ಮಾಡಿದರೆ ಸಮಾಜಕ್ಕೆ ಆಗುವ ಅನಾಹುತದ ಬಗ್ಗೆ ಲೆಕ್ಕವಿದೆಯೇ ನಿಮಗೆ? ನಿಮಗೆ ತಾಕತ್ತಿದ್ದರೆ, ಜನರ ದುಡ್ಡಲ್ಲೇ ಮೆರೆಯುತ್ತಿದ್ದೇನೆ ಎಂಬ ಯೋಚನೆಯಿದ್ದರೆ, ಅಭಿವೃದ್ಧಿ ಮಾಡಿ ಚುನಾವಣೆ ಗೆಲ್ಲಿ ಸ್ವಾಮಿ, ಹೀಗೆ ಸಮಾಜ ಒಡೆದು ರಾಜಕಾರಣ ಮಾಡುವ ಹೊಲಸು ಪ್ರವೃತ್ತಿ ಏಕೆ ನಿಮಗೆ?

ಈಗ ಇರುವ ಮೂರು ಮತ್ತೊಂದು ಧರ್ಮಗಳೇ ಹಿಂದೂ ಧರ್ಮಕ್ಕೆ ಕಂಟಕವಾಗಿವೆ. ನೀವೂ ಕಂಟಕವಾಗಲು ಹೊರಟಿದ್ದೀರಿ. ಒಬ್ಬ ರಾಜಕಾರಣಿ ಹೇಗಿರಬೇಕು ಎಂಬುದಕ್ಕೆ ವಿರುದ್ಧ ಪದವಾಗಿ ಕಾಣುತ್ತಿದ್ದೀರಿ ನೀವು. ಆತ್ಮಸಾಕ್ಷಿಯನ್ನು ಮಾರಿಕೊಂಡಿರುವ ನೀವು ಬಾಯಿಯೊಳಗೆ ನಾಲಗೆ ಇಟ್ಟುಕೊಂಡು ಸುಮ್ಮನಿರಿ, ಬಾಯಿ ಮೂಲಕವೇ ಹೊಲಸು ಕಾರಿ, ಚೆನ್ನಾಗಿರುವ ಸಮಾಜ ಒಡೆಯಬೇಡಿ. ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತದಂತೆ, ಹಾಗಾಯಿತು ನಿಮ್ಮ ಕತೆ. ಥೂ.

 

 

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
ವಿಶಾಲ್ ಗೌಡ ಕುಶಾಲನಗರ May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
ವಿಶಾಲ್ ಗೌಡ ಕುಶಾಲನಗರ May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search