• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುತಾತ್ಮ ಸೈನಿಕರ ಮಕ್ಕಳ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ಎಂತಹ ಸಹಕಾರ ನೀಡಿದೆ ಗೊತ್ತಾ?

TNN Correspondent Posted On March 23, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಸೈನಿಕರು, ನಮ್ಮ ಸೇನೆ ಬಗ್ಗೆ ಗೌರ, ಹೆಮ್ಮೆಯನ್ನು ತೋರಿಸುತ್ತಾರೆ. ದೀಪಾವಳಿಯನ್ನು ಸಹ ಸೈನಿಕರ ಜತೆಯೇ ಆಚರಿಸುತ್ತಾರೆ. ಇದರ ಜತೆಗೆ ಈಗ ಹುತಾತ್ಮ ಸೈನಿಕರ ಮಕ್ಕಳ ಶಿಕ್ಷಣಕ್ಕೂ ನೆರವಾಗಿದ್ದಾರೆ.

ಹೌದು, ಒನ್ ರ್ಯಾಂಕ್, ಒನ್ ಪೆನ್ಶನ್ ಅನ್ವಯ ಕಳೆದ ಜುಲೈನಿಂದ ನೀಡುತ್ತಿದ್ದ 10 ಸಾವಿರ ರೂಪಾಯಿಯನ್ನು ರದ್ದುಗೊಳಿಸಿದ್ದು, ಇನ್ನು ಮೇಲೆ ಇದೇ ಹತ್ತು ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೇ ನೇರವಾಗಿ ನೀಡಲಿದೆ. ಇದರಿಂದ ದೇಶದ ಸುಮಾರು 3500 ಮಕ್ಕಳಿಗೆ ಸಹಾಯವಾಗಲಿದೆ ಎಂದು ತಿಳಿದುಬಂದಿದೆ.

ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಲೇ ಕಾಣೆಯಾದವರು, ದಿವ್ಯಾಂಗರಾಗಿರುವವರು ಹಾಗೂ ಹುತಾತ್ಮರಾಗಿರುವ ಸೈನಿಕರ ಮಕ್ಕಳು ಯೋಜನೆಯ ಲಾಭ ಪಡೆಯಲಿದ್ದು, ಅವರಿಗೆ ಸರ್ಕಾರ ಶೈಕ್ಷಣಿಕ ವೆಚ್ಚವಾಗಿ 10 ಸಾವಿರ ರೂ. ಒದಗಿಸುತ್ತದೆ.

ಸರ್ಕಾರಿ, ಸರ್ಕಾರಿ ಅನುದಾನಿತ, ಕೇಂದ್ರ ಸರ್ಕಾರ ನಡೆಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಜನೆಯ ಅನುಕೂಲ ಸಿಗಲಿದೆ. ಇದಕ್ಕಾಗಿ ಸರ್ಕಾರ ಪ್ರತಿ ವರ್ಷ 4 ಕೋಟಿ ರೂಪಾಯಿ ಖರ್ಚು ಮಾಡಲು ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.

ಒಟ್ಟಿನಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸುತ್ತಲೇ ಮಡಿದವರ, ಸಂಕಷ್ಟಕ್ಕೆ ಈಡಾದವರ ಮಕ್ಕಳ ನೆರವಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search