• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ಸಿನ ಹಾಲಿ 30 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬ ಭೀತಿ ಕಾಂಗ್ರೆಸ್ಸಿಗೆ ಹೇಗೆ ಕಾಡುತ್ತಿದೆ ಗೊತ್ತಾ?

TNN Correspondent Posted On March 24, 2018


  • Share On Facebook
  • Tweet It

ಬೆಂಗಳೂರು: ಕರ್ನಾಟಕದಲ್ಲಿ ಶತಾಯ-ಗತಾಯ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ರಾಹುಲ್ ಗಾಂಧಿಯವರಿಗೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ. ರಾಹುಲ್ ಗಾಂಧಿಯವರೇನೋ ಚುನಾವಣೆ ಹಿನ್ನೆಲೆಯಲ್ಲಿ ಹಿಂದುತ್ವದ ವೇಷ ತೊಟ್ಟು ಮಠ ಮಾನ್ಯಗಳಿಗೆ ತೆರಳುತ್ತಿದ್ದಾರೆ. ಇದರ ಭಾಗವಾಗಿ ಶನಿವಾರ ಸಹ ಅವರು ಚಾಮರಾಜನಗರ, ಮಂಡ್ಯದಲ್ಲಿ ಪ್ರವಾಸ ಕೈಗೊಂಡು ಪ್ರಚಾರ ಮಾಡಲಿದ್ದಾರೆ. ಆದರೆ ಇದರ ಬೆನ್ನಲ್ಲೇ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ.

ಹಾಗಂತ ಯಾವುದೇ ಟಿವಿ ಚಾನೆಲ್ಲಿನ ಅಥವಾ ಪತ್ರಿಕೆ, ಆನ್ ಲೈನ್ ಸಮೀಕ್ಷೆಯ ವರದಿಗಳು ಹೀಗೆ ಹೇಳುತ್ತಿಲ್ಲ. ಸ್ವತಃ ಕಾಂಗ್ರೆಸ್ ಪಕ್ಷವೇ, ಒಂದಲ್ಲ ಎರಡು ಆಂತರಿಕ ಸಮೀಕ್ಷೆಯನ್ನು ಕೈಗೊಂಡಿದ್ದು, ಅದರ ಫಲಿತಾಂಶ ಮಾತ್ರ ಕಾಂಗ್ರೆಸ್ಸಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹೌದು, ಕಾಂಗ್ರೆಸ್ ರಾಜ್ಯಾದ್ಯಂತ ಚುನಾವಣಾ ಪೂರ್ವವಾಗಿ ಎರಡು ಆಂತರಿಕ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಬರೋಬ್ಬರಿ 30 ಹಾಲಿ ಶಾಸಕರು ಈ ಬಾರಿಯ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ತಿಳಿದುಬಂದಿದೆ. ಇದರಿಂದ ಧೃತಿಗೆಟ್ಟಿರುವ ಕಾಂಗ್ರೆಸ್ ನಾಯಕರು ಈಗ ಪರಿಹಾರ ಹುಡುಕುವಲ್ಲಿ ಮಗ್ನರಾಗಿದ್ದಾರೆ.

30 ಹಾಲಿ ಶಾಸಕರು ಗೆಲ್ಲುವ ಲಕ್ಷಣಗಳು ತುಂಬ ಕಡಿಮೆ ಇರುವುದರಿಂದ ಇವರಿಗೆ ಟಿಕೆಟ್ ಕೊಡುವುದಾ? ಬೇಡವಾ? ಕೊಟ್ಟ ಬಳಿಕ ಸೋತರೆ ಏನು ಮಾಡುವುದು? ಬೇರೆಯವರಿಗೆ ಕೊಟ್ಟರೆ ಪಕ್ಷದಲ್ಲಿ ಭಿನ್ನಮತ ಭುಗಿಲೇಳುವುದಾ? ಎಂಬ ಚಿಂತೆ ನಾಯಕರನ್ನು ಕಾಡುತ್ತಿದೆ. ಅದಕ್ಕಾಗಿಯೇ ಮಾರ್ಚ್ 28 ಮತ್ತು 29ರಂದು ಸಭೆ ಕರೆದಿದ್ದು, ಇವರ ಭವಿಷ್ಯ ಸಹ ನಿರ್ಧಾರವಾಗಲಿದೆ ಎಂದು ತಿಳಿದುಬಂದಿದೆ.

ಆದರೆ ಕಾಂಗ್ರೆಸ್ಸಿನದ್ದೇ ಆಂತರಿಕ ಸಮೀಕ್ಷೆ ಪ್ರಕಾರ ಈಗಿರುವ 30 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂದು ತಿಳಿದುಬಂದಿರುವುದು ರಾಜ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಂತಹ ಅಲೆ ಇರಬಹುದು, ಯೋಚಿಸಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search