• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಾಸ್ಮಿನ್ ಮೊಹಮ್ಮದ್ ಗೆ ಶಿಕ್ಷೆ ಪ್ರಕಟ, ಐಸಿಸ್ ಗೂ, ಭಾರತಕ್ಕೂ ನಂಟು ಅಷ್ಟೊಂದು ಬಲವಾಗಿದೆಯಾ?

TNN Correspondent Posted On March 25, 2018
0


0
Shares
  • Share On Facebook
  • Tweet It

ತಿರುವನಂತಪುರ: ಐಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದಲ್ಲಿ ಯಾಸ್ಮಿನ್ ಮೊಹಮ್ಮದ್ ಜಹೀರ್ ಎಂಬಾಕೆಗೆ ಕೇರಳದ ಕೊಚ್ಚಿ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಭಾರತ ಹಾಗೂ ಐಸಿಸ್ಸಿಗೂ ನಂಟಿದೆಯಾ ಎಂಬ ಅನುಮಾನ ದಟ್ಟವಾಗಿವೆ.

ಅಷ್ಟೇ ಅಲ್ಲ, ಯಾಸ್ಮಿನ್ ಮೊಹಮ್ಮದ್ ಜಹೀರ್ ಐಸಿಸ್ ಜತೆ ನಂಟು ಹೊಂದಿರುವ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮೊದಲ ವ್ಯಕ್ತಿ ಎಂಬ ಕುಖ್ಯಾತಿಗೂ ಭಾಜನವಾಗಿರುವುದು ಜಾಲದ ಹಿಂದಿನ ಪದರುಗಳ ಕುರಿತು ಭೀತಿ ಹುಟ್ಟಿಸಿದೆ.

ಬಿಹಾರದ ಈಕೆ ಕಾಸರಗೋಡಿನಿಂದ 15 ಜನರನ್ನು ಐಸಿಸ್ ಸಂಘಟನೆಗೆ ನೇಮಕ ಮಾಡಿದ ಆರೋಪದಲ್ಲಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 2016ರಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಆಫ್ಘಾನಿಸ್ತಾನಕ್ಕೆ ತೆರಳುವಾಗ ತಡೆಹಿಡಿದು ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ ಬಳಿಕ 15 ಜನರನ್ನು ನೇಮಿಸಿದ್ದಾಳೆ ಎಂಬುದು ತಿಳಿದುಬಂದಿತ್ತು.

ಯಾಸ್ಮಿನ್, ರಷಿ ಅಬ್ದುಲ್ಲಾ ಎಂಬಾತನ ಎರಡನೇ ಪತ್ನಿಯಾಗಿದ್ದು, ಈಕೆಯ ಗಂಡ ಸಹ ಐಸಿಸ್ ಜತೆ ನಂಟು ಹೊಂದಿರುವ ಆರೋಪ ಹೊಂದಿದ್ದಾನೆ. ಕೇರಳದ 20 ಯುವಕರನ್ನು ಐಸಿಸ್ ಸಂಘಟನೆಗೆ ಸೇರಿಸಿ ನಾಪತ್ತೆಯಾಗಿರುವ ಈತನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಪ್ರಸ್ತುತ ಯಾಸ್ಮೀನ್ ಗೆ ಭಾರತೀಯ ದಂಡ ಸಂಹಿತೆ 120, 125 ಬಿ ಹಾಗೂ ಕಾನೂನು ವಿರೋಧಿ ಚಟುವಟಿಕೆಗಳ ತಡೆ ಕಾಯಿದೆ 38, 39 ಹಾಗೂ 40ನೇ ಕಲಂ ಅನ್ವಯ ಏಳು ವರ್ಷ ಜೈಲು ಹಾಗೂ ಇಪ್ಪತ್ತೈದು ಸಾವಿರ ರೂಪಾಯಿ ದಂಡ ವಿಧಿಸಿದೆ.

ಒಟ್ಟಿನಲ್ಲಿ ಉಗ್ರರ ಜತೆ ನಂಟು ಹೊಂದಿರುವ ಪ್ರಕರಣದಲ್ಲಿ ಯಾಸ್ಮಿನ್ ಗೆ ಜೈಲು ಶಿಕ್ಷೆ ವಿಧಿಸಿರುವುದು ಹಾಗೂ ಈಕೆಯ ಗಂಡನೂ ಐಸಿಸ್ ಜತೆ ನಂಟು ಹೊಂದಿರುವ ಕುರಿತು ಪ್ರಕರಣ ಎದುರಿಸುತ್ತಿದ್ದು, ಕೇರಳದಲ್ಲಿ ನಿಧಾನವಾಗಿ ಐಸಿಸ್ ಬೇರುಗಳು ಒಳಹೋಗುತ್ತಿವೆಯಾ ಎಂಬ ಅನುಮಾನ ಹುಟ್ಟುಹಾಕಿದೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search