• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆಂಧ್ರಪ್ರದೇಶದಲ್ಲೊಂದು ಸ್ವಾಭಿಮಾನಿ ಹಿಂದೂಗಳ ಗ್ರಾಮ

TNN Correspondent Posted On March 25, 2018


  • Share On Facebook
  • Tweet It

ಹೈದರಾಬಾದ್: ಆಂಧ್ರಪ್ರದೇಶದ ಕಡಪ ಜಿಲ್ಲೆಯ ಕೇಸಲಿಂಗಯ್ಯಪಳ್ಳಿ ಗ್ರಾಮದಲ್ಲಿ ಹಿಂದೂಗಳನ್ನು ಹೊರತುಪಡಿಸಿ ಬೇರೆ ಧರ್ಮದವರಿಗೆ ಪ್ರವೇಶವಿಲ್ಲ, ಬೇರೆ ಧರ್ಮದವರು ಇಲ್ಲಿ ಪ್ರಚಾರ ಸೇರಿ ಮತ್ತೀತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ನಿಷೀಧ.

ಕಳೆದ ವರ್ಷದ ಶ್ರೀರಾಮ ನವಮಿಯಂದು ಈ ಗ್ರಾಮ ಸಂಪೂರ್ಣ ಹಿಂದೂ ಗ್ರಾಮ ಎಂದು ಘೋಷಿಸಿಕೊಂಡಿದ್ದು, ಗ್ರಾಮದ ಪ್ರವೇಶ ದ್ವಾರದಲ್ಲೇ ಕೇಸರಿ ಬಣ್ಣದಲ್ಲಿ ದೊಡ್ಡ ಸೂಚನಾ ಫಲಕ ಹಾಕಲಾಗಿದೆ. ಸೂಚನಾ ಫಲಕದಲ್ಲಿ ಸ್ಪಷ್ಟವಾಗಿ ಈ ಗ್ರಾಮಕ್ಕೆ ಅನ್ಯ ಧರ್ಮದವರಿಗೆ ಪ್ರವೇಶವಿಲ್ಲ ಎಂಬ ಸೂಚನೆಯನ್ನು ನೀಡಲಾಗಿದೆ. ಬೇರೆ ಧರ್ಮದವರು ಅಪ್ಪಿ ತಪ್ಪಿ ನಿಯಮಗಳನ್ನು ಮೀರಿ ಗ್ರಾಮದಲ್ಲಿ ಪ್ರವೇಶಿಸಿದರೇ ಶಿಕ್ಷೆ ನೀಡಲಾಗುತ್ತದೆ ಎನ್ನುತ್ತಾರೆ ಗ್ರಾಮಸ್ಥರು.

ಅಲ್ಲದೇ ಸೂಚನಾ ಫಲಕದಲ್ಲಿ ಮತಾಂತರದ ಕುರಿತು ಎಚ್ಚರಿಕೆ ನೀಡಿದ್ದು, ಒಬ್ಬ ವ್ಯಕ್ತಿ ಮತಾಂತರವಾದರೇ, ತನ್ನ ತಾಯಿಯನ್ನು ಬದಲಾಯಿಸಿದಂತೆ ಎಂಬ ಸಂದೇಶವನ್ನು ಸಾರಿದೆ. 1,500 ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಕಾಪು ಸಮುದಾಯ ಮತ್ತು ಇತರೆ ಹಿಂದುಗಳಿದ ಜಾತಿಗಳಿದ್ದರೂ, ಎಲ್ಲರೂ ಹಿಂದೂಗಳು ಎಂಬ ಭಾವದೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಇಡೀ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮದ ಕುಟುಂಬಗಳಿಲ್ಲದಿರುವುದು ವಿಶೇಷ.

ಕಳೆದ ವರ್ಷದ ಕೆಲವು ಕ್ರಿಶ್ಚಯನ್ ಮಷಿನರಿಗಳು ನಮ್ಮ ಗ್ರಾಮಕ್ಕೆ ಬಂದು ಕ್ರಿಸ್ತನನ್ನು ಪ್ರಾರ್ಥಿಸಿದರೇ ರೋಗಗಳು ಗುಣಮುಖವಾಗುತ್ತವೆ ಎಂದು ಬೊಗಳೇ ಬಿಟ್ಟು ಮತಾಂತರಕ್ಕೆ ಪ್ರಯತ್ನಿಸುತ್ತಿದ್ದರು. ಆಗ ಗ್ರಾಮದ ಎಲ್ಲರೂ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಅವರನ್ನು ಗ್ರಾಮದಿಂದ ಹೊರ ದಬ್ಬಿದ್ದೇವು. ಅಲ್ಲದೇ ಕಳೆದ ವರ್ಷ ಶ್ರೀರಾಮನವಮಿ ದಿನ ಗ್ರಾಮವನ್ನು ಹಿಂದೂಗಳ ಗ್ರಾಮ ಎಂದು ಘೋಷಿಸಿದ್ದೇವೆ ಎನ್ನುತ್ತಾರೆ ಗ್ರಾಮದ ಬಿ.ರಾಮಣ್ಣ.

ಗ್ರಾಮದ ಕೆಲವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದರು. ಅವರನ್ನು ಬ್ರಹ್ಮಗಿರಿ ಮಠದ  ಸ್ವಾಮಿ ಅಚಲಾನಂದರ ಬಳಿ ಕರೆದುಕೊಂಡು ಹೋಗಿ, ಜ್ಞಾನೋದಯ ಮಾಡಿ ಹಿಂದೂ ಧರ್ಮಕ್ಕೆ ಮರಳಿ ಕರೆದುಕೊಂಡು ಬರಲಾಗಿದೆ ಎಂದು ಗ್ರಾಮಸ್ಥ ರಾಮಣ್ಣ ತಿಳಿಸಿದ್ದಾರೆ.

ಗ್ರಾಮವನ್ನು ಪ್ರವೇಶಿಸಿಸುವ ಅನ್ಯಧರ್ಮದವರಿಗೆ ಮಹಿಳೆಯರಿಂದ ಪೊರಕೆ ಸೇವೆ ಮಾಡುತ್ತೇವೆ. ಅಲ್ಲದೇ ಜೈ ಶ್ರೀರಾಮ ಘೋಷಣೆ ಕೂಗುತ್ತೇವೆ. ಅದಕ್ಕೂ ಮೀರಿ ನಾವು ನಮ್ಮ ಧರ್ಮದ ಶ್ರೇಷ್ಠತೆ ಬಗ್ಗೆ ಚರ್ಚಿಸಲು ಸಿದ್ಧ ಎನ್ನುತ್ತಾರೆ ಗ್ರಾಮಸ್ಥರು.

 

 

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search