• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

46ನೇ ವಯಸ್ಸಲ್ಲಿ, ಮಗನೊಂದಿಗೆ 10ನೇ ಪರೀಕ್ಷೆ ಬರೆದ ಈ ಮಹಾತಾಯಿ ಸರ್ವರಿಗೂ ಸ್ಫೂರ್ತಿ

TNN Correspondent Posted On March 29, 2018


  • Share On Facebook
  • Tweet It

ಲುದಿಯಾನಾ: ಜ್ಞಾನ ಹೊಂದಲು ವಯಸ್ಸಿನ ಮಿತಿಯಿಲ್ಲ, ಯಾರು ಬೇಕಾದರೂ, ಯಾವುದೇ ವಯಸ್ಸಿನಲ್ಲಿ ಶಿಕ್ಷಣ ಪಡೆಯಬಹುದು ಎಂಬ ಸಂದೇಶವನ್ನು ಪಂಜಾಬ್ ಲುದಿಯಾನಾದ ಮಹಾತಾಯಿಯೊಬ್ಬರು ಸಾಬೀತು ಮಾಡಿದ್ದಾರೆ. ಮಗನೊಂದಿಗೆ 10ನೇ ತರಗತಿ ಪರೀಕ್ಷೆ ಬರೆಯುವ ಮೂಲಕ ವಯಸ್ಕರೂ ಶಿಕ್ಷಣ ಪಡೆಯಬಹುದು ಎಂಬ ಸಂದೇಶವನ್ನು ಸಾರಿದ್ದಾರೆ.

1989ರಲ್ಲಿ ಒಂಬತನೇ ತರಗತಿ ಪಾಸ್ ಆಗಿದ್ದ ರಜ್ನಿ ಬಲಾ ಅನಿವಾರ್ಯ ಕಾರಣಗಳಿಂದ ಮುಂದಿನ ತರಗತಿಗೆ ಹೋಗಲು ಆಗಿರಲಿಲ್ಲ. ಆದರೆ ಇದೀಗ 10ನೇ ತರಗತಿಗೆ ಪ್ರವೇಶ ಪಡೆದಿದ್ದು, ಮಗನೊಂದಿಗೆ ಬೋರ್ಡ್ ಪರೀಕ್ಷೆ ಬರೆಯುವ ಮೂಲಕ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಮೂರು ಮಕ್ಕಳನ್ನು ಹೊಂದಿರುವ ರಜ್ನಿ ಬಲಾ ಪತಿಯ ಆಶಯದಂತೆ ಶಾಲೆಗೆ ಪ್ರವೇಶ ಪಡೆದಿದ್ದಾರೆ.

ಮೂರು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದು, ಆಸ್ಪತ್ರೆಯೊಂದರಲ್ಲಿ ವಾರ್ಡ್ ಅಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಪತಿ ಒತ್ತಾಯದಂತೆ ಶಾಲೆಗೆ ಪ್ರವೇಶ ಪಡೆದಿದ್ದು, ನಿತ್ಯ ಮಗನೊಂದಿಗೆ ತರಗತಿ ಹಾಜರಾಗಿದ್ದೇನೆ. ಅಲ್ಲದೇ ಇದೀಗ 10ನೇ ತರಗತಿ ಪರೀಕ್ಷೆ ಬರೆಯುತ್ತಿದ್ದೇನೆ. ನಿಜವಾಗಲು ಪರೀಕ್ಷೆ ಪಾಸ್ ಆಗುವುದು ಸವಾಲಿನ ಕೆಲಸ ಎಂಬ ಅರಿವಾಗಿದೆ ಎನ್ನುತ್ತಾರೆ ರಜ್ನಿ ಬಲಾ.

ಪತಿಯ ಪ್ರೋತ್ಸಾಹ, ಮಕ್ಕಳ ಸಹಕಾರ, ಮನೆಯ ಹಿರಿಯರ ಬೆಂಬಲದಿಂದ ಈ ನಿರ್ಧಾರ ಕೈಗೊಂಡೆ. ನನ್ನ ಪತಿ ನಿತ್ಯ ಓದಲು ಪ್ರೋತ್ಸಾಹಿಸುತ್ತಾರೆ. ಅಲ್ಲದೇ ಮಗಳು, ಮಗ ನನ್ನ ಓದಿಗೆ ಸಹಕಾರ ನೀಡಿದ್ದಾರೆ. ಇದೇ ರೀತಿ ಪ್ರೋತ್ಸಾಹ ದೊರೆಯುವುದರಿಂದ ನಾನು ಪದವಿ ಮುಗಿಸುವವರೆಗೆ ವಿಶ್ರಮಿಸುವುದಿಲ್ಲ ಎಂದು ರಜ್ನಿ ಬಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನ್ನ ಪತ್ನಿ ಬೆಳಗ್ಗೆ ಬೇಗ ಎದ್ದು ಮಗನೊಂದಿಗೆ ಟ್ಯೂಷನ್ ಗೆ ಹೋಗುವುದು, ಶಾಲೆಗೆ ಹೋಗುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಅವಳು ಶಾಲೆ ಪೂರ್ಣಗೊಳಿಸುವುದು ನಮ್ಮೆಲ್ಲರ ಆಶಯವಾಗಿತ್ತು. ಅದು ಪೂರ್ಣವಾಗುತ್ತಿದೆ. ನಮಗೆಲ್ಲರಿಗೂ ತೀವ್ರ ಸಂತೋಷವಾಗುತ್ತಿದೆ ಎಂದು ರಜ್ನಿ ಅವರ ಪತಿ ರಾಜಕುಮಾರ ಸಾಥಿ ಬೆಂಬಲಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search