• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

46ನೇ ವಯಸ್ಸಲ್ಲಿ, ಮಗನೊಂದಿಗೆ 10ನೇ ಪರೀಕ್ಷೆ ಬರೆದ ಈ ಮಹಾತಾಯಿ ಸರ್ವರಿಗೂ ಸ್ಫೂರ್ತಿ

TNN Correspondent Posted On March 29, 2018
0


0
Shares
  • Share On Facebook
  • Tweet It

ಲುದಿಯಾನಾ: ಜ್ಞಾನ ಹೊಂದಲು ವಯಸ್ಸಿನ ಮಿತಿಯಿಲ್ಲ, ಯಾರು ಬೇಕಾದರೂ, ಯಾವುದೇ ವಯಸ್ಸಿನಲ್ಲಿ ಶಿಕ್ಷಣ ಪಡೆಯಬಹುದು ಎಂಬ ಸಂದೇಶವನ್ನು ಪಂಜಾಬ್ ಲುದಿಯಾನಾದ ಮಹಾತಾಯಿಯೊಬ್ಬರು ಸಾಬೀತು ಮಾಡಿದ್ದಾರೆ. ಮಗನೊಂದಿಗೆ 10ನೇ ತರಗತಿ ಪರೀಕ್ಷೆ ಬರೆಯುವ ಮೂಲಕ ವಯಸ್ಕರೂ ಶಿಕ್ಷಣ ಪಡೆಯಬಹುದು ಎಂಬ ಸಂದೇಶವನ್ನು ಸಾರಿದ್ದಾರೆ.

1989ರಲ್ಲಿ ಒಂಬತನೇ ತರಗತಿ ಪಾಸ್ ಆಗಿದ್ದ ರಜ್ನಿ ಬಲಾ ಅನಿವಾರ್ಯ ಕಾರಣಗಳಿಂದ ಮುಂದಿನ ತರಗತಿಗೆ ಹೋಗಲು ಆಗಿರಲಿಲ್ಲ. ಆದರೆ ಇದೀಗ 10ನೇ ತರಗತಿಗೆ ಪ್ರವೇಶ ಪಡೆದಿದ್ದು, ಮಗನೊಂದಿಗೆ ಬೋರ್ಡ್ ಪರೀಕ್ಷೆ ಬರೆಯುವ ಮೂಲಕ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಮೂರು ಮಕ್ಕಳನ್ನು ಹೊಂದಿರುವ ರಜ್ನಿ ಬಲಾ ಪತಿಯ ಆಶಯದಂತೆ ಶಾಲೆಗೆ ಪ್ರವೇಶ ಪಡೆದಿದ್ದಾರೆ.

ಮೂರು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದು, ಆಸ್ಪತ್ರೆಯೊಂದರಲ್ಲಿ ವಾರ್ಡ್ ಅಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಪತಿ ಒತ್ತಾಯದಂತೆ ಶಾಲೆಗೆ ಪ್ರವೇಶ ಪಡೆದಿದ್ದು, ನಿತ್ಯ ಮಗನೊಂದಿಗೆ ತರಗತಿ ಹಾಜರಾಗಿದ್ದೇನೆ. ಅಲ್ಲದೇ ಇದೀಗ 10ನೇ ತರಗತಿ ಪರೀಕ್ಷೆ ಬರೆಯುತ್ತಿದ್ದೇನೆ. ನಿಜವಾಗಲು ಪರೀಕ್ಷೆ ಪಾಸ್ ಆಗುವುದು ಸವಾಲಿನ ಕೆಲಸ ಎಂಬ ಅರಿವಾಗಿದೆ ಎನ್ನುತ್ತಾರೆ ರಜ್ನಿ ಬಲಾ.

ಪತಿಯ ಪ್ರೋತ್ಸಾಹ, ಮಕ್ಕಳ ಸಹಕಾರ, ಮನೆಯ ಹಿರಿಯರ ಬೆಂಬಲದಿಂದ ಈ ನಿರ್ಧಾರ ಕೈಗೊಂಡೆ. ನನ್ನ ಪತಿ ನಿತ್ಯ ಓದಲು ಪ್ರೋತ್ಸಾಹಿಸುತ್ತಾರೆ. ಅಲ್ಲದೇ ಮಗಳು, ಮಗ ನನ್ನ ಓದಿಗೆ ಸಹಕಾರ ನೀಡಿದ್ದಾರೆ. ಇದೇ ರೀತಿ ಪ್ರೋತ್ಸಾಹ ದೊರೆಯುವುದರಿಂದ ನಾನು ಪದವಿ ಮುಗಿಸುವವರೆಗೆ ವಿಶ್ರಮಿಸುವುದಿಲ್ಲ ಎಂದು ರಜ್ನಿ ಬಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನ್ನ ಪತ್ನಿ ಬೆಳಗ್ಗೆ ಬೇಗ ಎದ್ದು ಮಗನೊಂದಿಗೆ ಟ್ಯೂಷನ್ ಗೆ ಹೋಗುವುದು, ಶಾಲೆಗೆ ಹೋಗುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಅವಳು ಶಾಲೆ ಪೂರ್ಣಗೊಳಿಸುವುದು ನಮ್ಮೆಲ್ಲರ ಆಶಯವಾಗಿತ್ತು. ಅದು ಪೂರ್ಣವಾಗುತ್ತಿದೆ. ನಮಗೆಲ್ಲರಿಗೂ ತೀವ್ರ ಸಂತೋಷವಾಗುತ್ತಿದೆ ಎಂದು ರಜ್ನಿ ಅವರ ಪತಿ ರಾಜಕುಮಾರ ಸಾಥಿ ಬೆಂಬಲಿಸಿದ್ದಾರೆ.

0
Shares
  • Share On Facebook
  • Tweet It




Trending Now
2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
Tulunadu News July 31, 2025
ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
Tulunadu News July 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
  • Popular Posts

    • 1
      2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • 2
      ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • 3
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 4
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 5
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್

  • Privacy Policy
  • Contact
© Tulunadu Infomedia.

Press enter/return to begin your search