• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಟ್ಟಿದ್ದ ಗುಂಡಿನ ಬಿಸಿ, ಗಡಚಿರೋಲಿಯಲ್ಲಿ ಕೆಂಪು ಉಗ್ರರ ಶರಣಾಗತಿ

TNN Correspondent Posted On March 29, 2018


  • Share On Facebook
  • Tweet It

ಗಡಚಿರೋಲಿ: ಕೇಂದ್ರ ಸರ್ಕಾರ ನಕ್ಸಲರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ದೇಶದಲ್ಲಿ ಕೆಂಪು ಉಗ್ರರ ಉಪಟಳ ಕಡಿಮೆಯಾಗುತ್ತ ಬಂದಿದ್ದು, ಇದೀಗ ಮಹಾರಾಷ್ಟ್ರದ ಗಡಚಿರೋಲಿಯಲ್ಲಿ ಐದು ಉಗ್ರರು ಪೊಲೀಸರಿಗೆ ಶರಣಾಗತಿಯಾಗಿದ್ದಾರೆ.

ಶರಣಾಗತಿಯಾಗಿರುವ ಕ್ರಾಂತಿಕಾರಿ ಮುಖಂಡರ ಪ್ರತಿಯೊಬ್ಬರ ತಲೆಗೆ 25 ಲಕ್ಷ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಜೀವ ಉಳಿಸಿಕೊಳ್ಳಲು ನಕ್ಸಲರು ಇದೀಗ ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ. ಈ ಕುರಿತು ಬುಧವಾರ ಮಹಾರಾಷ್ಟ್ರ ಪೊಲೀಸರು ಘೋಷಣೆ ಮಾಡಿದ್ದು, ಎಲ್ಲರನ್ನು ಕೆಲ ದಿನಗಳವರೆಗೆ ವಿಚಾರಣೆ ನಡೆಸಿ, ನಂತರ ಸಮಾಜದ ಮುಖ್ಯವಾಹಿನಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ನಕ್ಸಲ್ ಪ್ಲಟೂನ್ 4 ‘ಎ’  ತಂಡದ ಕಮಾಂಡರ್ ಸೈನು ಅಲಿಯಾಸ್ ಮಿರ್ಗು ಜಿರು ವಡೆಹಾ(35) ಶರಣಾಗಿದ್ದು, ಈತನ ವಿರುದ್ಧ 17 ಕೊಲೆ ಪ್ರಕರಣಗಳು ದಾಖಲಾಗಿವೆ. ಈತನ ತಲೆಗೆ 12 ಲಕ್ಷ ಘೋಷಣೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಅರ್ಜುನ್ ಬರ್ಸಯ್ಯ ಪೊಯಾ(25), ಚಾಯಾ ಅಲಿಯಾಸ್ ರಾಜೆ ದೇವು ಕುಡಿಯಾತಿ (23), ವೇಣು ಅಲಿಯಾಸ್ ಬಿಜಾವು ಸುಂದರ್ ಕೊವಾಚಿ (23) ಶರಣಾದವರು.

ಕಳೆದ ತಿಂಗಳು ಇಬ್ಬರು ನಕ್ಸರಲನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಮುಗಿಸಿದ ನಂತರ ಎರಡನೇ ಬಾರಿಗೆ ನಕ್ಸಲರು ಶರಣಾಗತಿಯಾಗುತ್ತಿರುವುದು. 22 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಗಡಚಿರೋಲಿಯಲ್ಲಿ ಈ ಮಟ್ಟದಲ್ಲಿ ನಕ್ಸಲರ ಶರಣಾಗತಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search