• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚುನಾವಣೆ ಬಳಿಕವೂ ಮೋದಿ ಅಭಿವೃದ್ಧಿ ಮಂತ್ರ, ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಶೇ.100ರಷ್ಟು ಅನುದಾನ ಕೇಂದ್ರದ್ದೇ!

TNN Correspondent Posted On March 30, 2018


  • Share On Facebook
  • Tweet It

ದೆಹಲಿ: ತ್ರಿಪುರಾ, ನಾಗಾಲೆಂಡ್ ನಲ್ಲಿ ಚುನಾವಣೆ ಸಮೀಪಿಸುತ್ತಿರುವಾಗ ಕೇಂದ್ರ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿತ್ತು. ಆಗ ಕೆಲವು ವಿರೋಧ ಪಕ್ಷಗಳು ಇದು ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾಡಿರುವ ಗಿಮಿಕ್ ಎಂದು ಬೊಬ್ಬೆ ಹಾಕಿದ್ದವು.

ಆದರೆ, ವಿರೋಧಿಗಳ ಈ ಹುರುಳಿಲ್ಲದ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಮಾಡಿದ್ದು, ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶೇ.100ರಷ್ಟು ಅನುದಾನ ನೀಡಲು ನಿರ್ಧಾರಿಸಿದ್ದಾರೆ.

ಈ ಕುರಿತು ಸಚಿವ ಸಂಪುಟ ಸಭೆ ಬಳಿಕ ಈಶಾನ್ಯ ಪ್ರದೇಶಾಭಿವೃದ್ಧಿ ಕೇಂದ್ರ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಮಾಹಿತಿ ನೀಡಿದ್ದು, ಈಶಾನ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶೇ.100ರಷ್ಟು ಅನುದಾನ ನೀಡಲು ಮುಂದಾಗಿದ್ದು, ಪ್ರಸ್ತುತ ಬರೋಬ್ಬರಿ 4,500 ಕೋಟಿ ರೂ. ವಿನಿಯೋಗಿಸಿದೆ ಎಂದು ವಿವರಿಸಿದ್ದಾರೆ.

ಅಲ್ಲದೆ ಇದೊಂದು ಐತಿಹಾಸಿಕ ನಿರ್ಧಾರವಾಗಿದ್ದು, ಇದುವರೆಗೆ ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಶೇ.90ರಷ್ಟು ಹಾಗೂ ರಾಜ್ಯ ಸರ್ಕಾರಗಳು ಶೇ.10ರಷ್ಟು ಅನುದಾನ ವಿನಿಯೋಗಿಸುತ್ತಿದ್ದವು. ಆದರೆ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಆಸಕ್ತಿ ವಹಿಸಿರುವುದರಿಂದ ಇನ್ನು ಮುಂದೆ ನೂರಕ್ಕೆ ನೂರರಷ್ಟು ಅನುದಾನವನ್ನು ಕೇಂದ್ರ ಸರ್ಕಾರವೇ ವಿನಿಯೋಗಿಸಲಿದೆ ಎಂದು ತಿಳಿಸಿದ್ದಾರೆ.

ಬಿದಿರು ಬೆಳೆ ಅಭಿವೃದ್ಧಿ, ರಸ್ತೆ ನಿರ್ಮಾಣ, ಪ್ರಾದೇಶಿಕ ಪ್ರವಾಸೋದ್ಯಮ, ಉನ್ನತ ಶಿಕ್ಷಣ ಸೇರಿ ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ಬರೋಬ್ಬರಿ ಒಂದು ಸಾವಿರ ಕೋಟಿ ರೂ. ನೀಡುವುದಾಗಿ ಘೋಷಿಸಿದ್ದು, 2020ರ ವೇಳೆಗೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಒಟ್ಟಿನಲ್ಲಿ ವಿರೋಧಿಗಳ ಬೊಬ್ಬೆಯ ನಡುವೆಯೂ ಕೇಂದ್ರ ಸರ್ಕಾರ ಭಾರತದ ಅಭಿವೃದ್ಧಿ ಪಣತೊಟ್ಟಿರುವುದಂತೂ ದಿಟ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search