• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವಗೆದ್ದ ಮೋದಿ ದೇಶದಲ್ಲೂ ಮೋಡಿ, ರಾಷ್ಟ್ರದ ಪ್ರಭಾವಿ ವ್ಯಕ್ತಿಯಾದರು ನೋಡಿ!

TNN Correspondent Posted On April 1, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಯಾವ ರಾಷ್ಟ್ರ ಅವರಿಗೆ ವೀಸಾ ನೀಡುವುದಿಲ್ಲ ಎಂದು ತಿರಸ್ಕರಿಸಿತ್ತೋ, ಅದೇ ಅಮೆರಿಕ ಇಂದು ಅವರಿಗೆ ರತ್ನಗಂಬಳಿ ಹಾಸಿ ಕರೆಯುವಂತಾಗಿದೆ. ಬರೀ ಅಮೆರಿಕವೊಂದೇ ಅಲ್ಲ, ಈ ನಾಲ್ಕು ವರ್ಷದಲ್ಲಿ ಮೋದಿ ವಿಶ್ವವನ್ನೇ ಆವರಿಸಿದ್ದಾರೆ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಭಾರತದ ಅತೀ ಪ್ರಭಾವಿ ವ್ಯಕ್ತಿಗಳಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ. ಹೌದು, ಇತ್ತೀಚೆಗೆ ದಿ ಇಂಡಿಯನ್ ಎಕ್ಸ್ ಪ್ರೆಸ್ ಸುದ್ದಿಸಂಸ್ಥೆ ಭಾರತದ ನೂರು ಪ್ರಭಾವಿ ವ್ಯಕ್ತಿಗಳ ಪಟ್ಟಿ ಮಾಡಿದ್ದು, ಅದರಲ್ಲಿ ಮೋದಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ.

ಅಲ್ಲದೆ, ಈ ಸುದ್ದಿ ಸಂಸ್ಥೆ ತಾವು ಏಕೆ ಮೋದಿ ಅವರನ್ನೇ ನಂಬರ್ ಒನ್ ಸ್ಥಾನವನ್ನು ಮೋದಿ ಅವರಿಗೆ ನೀಡಿದ್ದೇವೆ ಎಂಬುದನ್ನು ಸಹ ಸ್ಪಷ್ಟಪಡಿಸಿದ್ದು, 2014ರ ಬಳಿಕ ದೇಶದೆಲ್ಲೆಡೆ ನಡೆದ ಸ್ಥಳೀಯ ಚುನಾವಣೆಯಿಂದ ಹಿಡಿದು, ಲೋಕಸಭೆ ಉಪಚುನಾವಣೆ ವರೆಗೂ ಮೋದಿ ಅವರ ಹೆಸರು ಬಳಸಿಯೇ ನಡೆಸಲಾಗಿದೆ ಎಂದು ಸುದ್ದಿ ಸಂಸ್ಥೆ ಪರಿಗಣಿಸಿದೆ.

ಅಷ್ಟೇ ಅಲ್ಲದೆ, ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಜನರನ್ನು ಸೆಳೆದಿದ್ದು, ಜಿಎಸ್ಟಿ, ನೋಟು ನಿಷೇಧಗೊಳಿಸಿ ವಿಶ್ವಮಟ್ಟದಲ್ಲಿ ಚರ್ಚೆಯಾಗಿದ್ದು, ಭಾರತದ ಗಣರಾಜ್ಯೋತ್ಸವಕ್ಕೆ ಆಸಿಯಾನ್ ರಾಷ್ಟ್ರಗಳ ಮುಖಂಡರನ್ನು ಕರೆಸಿದ್ದು ಮೋದಿ ಅವರ ಪ್ರಭಾವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಭಾವಿಸಿ ಸುದ್ದಿಸಂಸ್ಥೆಯು ಮೋದಿ ಅವರಿಗೆ ನಂಬರ್ ಒನ್ ಸ್ಥಾನ ನೀಡಿದೆ. ಈ ಕುರಿತು ಸುದ್ದಿಸಂಸ್ಥೆಯೇ ವಿವರಣೆ ನೀಡಿದೆ. ಎರಡನೇ ಸ್ಥಾನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search