• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನೂ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದ ಮೋದಿ ಈಗ ಮಲಗಲು ಸಹ ಬಿಡುತ್ತಿಲ್ಲವಂತೆ! ಏನಿದು? ಈ ಸುದ್ದಿ ಓದಿ!

TNN Correspondent Posted On April 2, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ, ಕುಳಿತಲ್ಲಿ ಕೂರಲಾರದ, ಸದಾ ಕೆಲಸವನ್ನೇ ಮಾಡುವ, ದೇಶಕ್ಕಾಗಿ ಹಲವು ವರ್ಷಗಳಿಂದ ರಜೆಯನ್ನೇ ತೆಗೆದುಕೊಳ್ಳದೆ ದುಡಿಯುವ, ದೇಶದ ಅಭಿವೃದ್ಧಿಯನ್ನೇ ಯೋಚಿಸು, ಸದಾ ಚಿಂತನಾಶೀಲರಾಗಿರುವ ವ್ಯಕ್ತಿ. ಒಬ್ಬ ದೇಶದ ನಾಯಕನಿಗಿರುವ ಪ್ರಮುಖ ಅಂಶಗಳು ಸಹ ಇವೆಯೇ.

ಹಾಗಂತ ದೇಶದ ನಾಯಕ ಮಾತ್ರ ಹೀಗೆ ಹಗಲಿರುಳು ಕೆಲಸ ಮಾಡಬೇಕಾ? ಉಳಿದವರೆಲ್ಲ ಸುಮ್ಮನಿದ್ದರೂ ಆದೀತೇ? ಇದನ್ನು ಮನಗಂಡ ಪ್ರಧಾನಿ ಮೋದಿ ಅವರು 2014ರ ಲೋಕಸಭೆ ಚುನಾವಣೆ ವೇಳೆ ನಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದು ಸುದ್ದಿಯಾಗಿತ್ತು. ಈಗ ಅದರಂತೆಯೇ ಸರ್ಕಾರ ಸಹ ನಡೆಸುತ್ತಿರುವುದು ಬೇರೆ ಮಾತು.

ಇಂತಹ ಕ್ರಿಯಾಶೀಲ ನರೇಂದ್ರ ಮೋದಿ ಅವರು ಈಗ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳಿಗೆ ಮಲಗಲು ಸಹ ಬಿಡುತ್ತಿಲ್ಲವಂತೆ!

ಹೌದು, ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದು, ಯಾವುದೇ ಯೋಜನೆ, ಜವಾಬ್ದಾರಿಯನ್ನು ಪ್ರಧಾನಿ ಮೋದಿ ಅವರು ಯಾರಿಗಾದರೂ ಒಪ್ಪಿಸಿದರೆ, ಅದು ಮುಗಿಯುವವರೆಗೆ ಅವರನ್ನು ಮಲಗಲು ಸಹ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಲಾಥೂರ್ ನಲ್ಲಿ ರೈಲು ಬೋಗಿ ಉತ್ಪಾದನೆ ಕಾರ್ಖಾನೆ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಅಭಿವೃದ್ಧಿಯ ಬಗ್ಗೆಯೇ ಯೋಚಿಸುತ್ತಾರೆ. ಯಾವುದೇ ಯೋಜನೆ ಜಾರಿಯಾದರೂ ಸಾಕು, ಅದು ಮುಗಿಯುವ ಹಂತದವರೆಗೂ ಪರಿಶೀಲನೆ ನಡೆಸುತ್ತಾರೆ. ವಿಳಂಬವಾದರೆ ಜವಾಬ್ದಾರಿ ವಹಿಸಿಕೊಂಡವರಿಗೆ ಸೂಚಿಸುತ್ತಾರೆ ಎಂದು ತಿಳಿಸಿದ್ದಾರೆ.

ದೇಶದ ಪ್ರಧಾನಿಯಾದವರು ತಾನೂ ತಿನ್ನದೆ, ಬೇರೆಯವರೂ ತಿನ್ನಲು ಬಿಡದೆ, ತಾನೂ ಮಲಗದೆ, ಬೇರೆಯವರನ್ನೂ ಮಲಗದೆ ದೇಶದ ಅಭಿವೃದ್ಧಿಗೆ ಬದ್ಧರಾಗಿದ್ದಾರಲ್ಲ, ಅದಕ್ಕಿಂತ ಇನ್ನೇನು ಬೇಕು ಒಂದು ದೇಶಕ್ಕೆ?

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search