• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಚ್ಛ ಭಾರತ ಯೋಜನೆಗೆ ಅಭೂತಪೂರ್ವ ಯಶಸ್ಸು, ದೇಶದ ಶೇ.93ರಷ್ಟು ಜನರಿಂದ ಶೌಚಾಲಯ ಬಳಕೆ!

TNN Correspondent Posted On April 2, 2018
0


0
Shares
  • Share On Facebook
  • Tweet It

ದೆಹಲಿ: ಅದು 2014ರ ಅಕ್ಟೋಬರ್ 2. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿದಾಗ, ಇದು ವಿಫಲ ಯೋಜನೆ ಎಂದು ಪ್ರತಿಪಕ್ಷಗಳು ಸುಖಾಸುಮ್ಮನೆ ಟೀಕಿಸಿದ್ದವು. ಆದರೆ ಅಂದು ಪ್ರಧಾನಿ ಮೋದಿ ಅವರು ಜಾರಿಗೊಳಿಸಿದ್ದ ಸ್ವಚ್ಛ ಭಾರತ ಯೋಜನೆ ಈಗ ಭಾರತದಾದ್ಯಂತ ಅಭೂತಪೂರ್ವ ಯಶಸ್ಸು ಗಳಿಸಿದೆ.

ವಿಶ್ವ ಬ್ಯಾಂಕ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಎನ್ಎಆರ್ ಎಸ್ಎಸ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಶೇ.93ರಷ್ಟು ಜನರಿಗೆ ಶೌಚಾಲಯ ಬಳಕೆ ಗೊತ್ತಿದೆ. ಅಲ್ಲದೆ ಸ್ವಚ್ಛ ಭಾರತ ಯೋಜನೆ ಜಾರಿಯಾದ ಬಳಿಕ ಭಾರತದ ಗ್ರಾಮೀಣ ಪ್ರದೇಶದಲ್ಲಿ ಶೇ.77ರಷ್ಟು ಕುಟುಂಬಗಳು ಶೌಚಾಲಯ ಹೊಂದಿವೆ ಎಂದು ತಿಳಿದುಬಂದಿದೆ.

2017ರ ನವೆಂಬರ್ ನಿಂದ 2018ರ ಮಾರ್ಚ್ ಅವಧಿಯಲ್ಲಿ ಸಮೀಕ್ಷೆ ನಡೆಸಿದ್ದು, ಗ್ರಾಮೀಣ ಪ್ರದೇಶದ ಶೇ.96ರಷ್ಟು ಜನ ಶೌಚಾಲಯವನ್ನೇ ಬಳಸುತ್ತಿದ್ದಾರೆ. 2014ರ ಅಕ್ಟೋಬರ್ 2ರಿಂದ ಇದುವರೆಗೆ ದೇಶಾದ್ಯಂತ ಸುಮಾರು 6.6 ಕೋಟಿ ಶೌಚಾಲಯ ನಿರ್ಮಿಸಲಾಗಿದೆ ಎಂದು ಸಮೀಕ್ಷೆಯಿಂದ ಬಹಿರಂಗವಾಗಿದೆ.

ಈ ಯೋಜನೆ ಜಾರಿಯಾದ ಬಳಿಕ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದು, ಇದುವರೆಗೆ 3.4 ಲಕ್ಷ ಗ್ರಾಮಗಳು ಹಾಗೂ 341 ಜಿಲ್ಲೆಗಳನ್ನು ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಘೋಷಿಸಲಾಗಿದೆ. ಒಟ್ಟಿನಲ್ಲಿ ಶೌಚಾಲಯವೇ ಕಾಣದ ಲಕ್ಷಾಂತರ ಗ್ರಾಮಗಳು, ಕೋಟ್ಯಂತರ ಜನ ಒಂದೇ ಒಂದು ಯೋಜನೆಯಿಂದ ಶೌಚಾಲಯ ಕಟ್ಟಿಸಿಕೊಂಡು ಸ್ವಚ್ಛ ಭಾರತಕ್ಕೆ ಮುನ್ನುಡಿಯಾಗಿರುವುದು ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search